Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಇಲಾಖೆಗಳಿಂದ 40.76 ಕೋಟಿ ರೂ....

ಸರಕಾರಿ ಇಲಾಖೆಗಳಿಂದ 40.76 ಕೋಟಿ ರೂ. ನೀರಿನ ಬಿಲ್ ಬಾಕಿ !

ಜಲಮಂಡಳಿ ಬೊಕ್ಕಸಕ್ಕೆ ತೀವ್ರ ಹೊರೆ

ವಾರ್ತಾಭಾರತಿವಾರ್ತಾಭಾರತಿ7 Nov 2020 8:02 PM IST
share
ಸರಕಾರಿ ಇಲಾಖೆಗಳಿಂದ 40.76 ಕೋಟಿ ರೂ. ನೀರಿನ ಬಿಲ್ ಬಾಕಿ !

ಬೆಂಗಳೂರು, ನ.7: ನಗರದ ಹಲವು ಸರಕಾರಿ ಇಲಾಖೆಗಳು ಸುಮಾರು 40.76 ಕೋಟಿ ರೂ.ಗಳಷ್ಟು ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಪರಿಣಾಮ ಜಲಮಂಡಳಿ ಬೊಕ್ಕಸಕ್ಕೆ ತೀವ್ರ ಹೊರೆ ಎದುರಾಗಿದೆ.

ಜಲಮಂಡಳಿಯ ಪ್ರಮುಖ ಆದಾಯ ಮೂಲ ನೀರಿನ ಬಿಲ್. ಕೋಟ್ಯಂತರ ರೂಪಾಯಿ ವ್ಯಯಿಸಿ ಜಲಮಂಡಳಿ ನಿತ್ಯ ರಾಜಧಾನಿಗೆ ಕುಡಿಯುವ ನೀರು ಪೂರೈಸುತ್ತದೆ. ಆದರೆ, ಗ್ರಾಹಕರು ನೀರಿನ ಬಿಲ್ ಪಾವತಿಸದಿರುವುದು ಜಲಮಂಡಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೆ, ಸರಕಾರಿ ಇಲಾಖೆಗಳೇ ಕೋಟ್ಯಂತರ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿರುವುದು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಜಲಮಂಡಳಿ ಸಾಕಷ್ಟು ಪ್ರಯತ್ನ ಮಾಡುತ್ತದೆ. ದೂರದ ಕಾವೇರಿ ನದಿಯಿಂದ ನೀರನ್ನು ರಾಜಧಾನಿಗೆ ತರುವುದಕ್ಕಾಗಿ ಕೋಟ್ಯಂತರ ರೂ. ಹಣವನ್ನು ಖರ್ಚು ಮಾಡುತ್ತದೆ. ತಾನು ಪೂರೈಸುವ ನೀರಿಗೆ ಗ್ರಾಹಕರಿಂದ ಪಡೆಯುವ ನೀರಿನ ಬಿಲ್ ಜಲಮಂಡಳಿಯ ಆದಾಯದ ಮೂಲವಾಗಿದೆ. ಹಲವು ವರ್ಷಗಳಿಂದ ಇಲಾಖೆಗಳು ನೀರಿನ ಬಿಲ್ ಪಾವತಿಸದ ಹಿನ್ನೆಲೆ ಜಲಮಂಡಳಿ ಬಡ್ಡಿಯನ್ನೂ ವಿಧಿಸುತ್ತಿದೆ. ಜಲಮಂಡಳಿ ಭಾರೀ ಪ್ರಮಾಣದಲ್ಲಿ ನಷ್ಟ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಾಕಿ ಬಿಲ್‍ಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಜಲಮಂಡಳಿ ಬಿಲ್ ಬಾಕಿ ಉಳಿಸಿರುವ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುತ್ತಿದೆ. ಆದರೆ, ಸರ್ಕಾರಿ ಇಲಾಖೆಗಳ ಬಾಕಿ ನೀರಿನ ಬಿಲ್ ಮಾತ್ರ ವರ್ಷ ಪ್ರತಿ ಏರುತ್ತಲೇ ಇದೆ.

ಜಲಮಂಡಳಿ ವಾರ್ಷಿಕ ಸುಮಾರು 130 ಕೋಟಿ ಆದಾಯ ಕೊರತೆ ಎದುರಿಸುತ್ತಿದೆ. ಸುಮಾರು 500 ಕೋಟಿ ರೂಪಾಯಿ ವಿದ್ಯುತ್ ಬಿಲ್ ರೂಪದಲ್ಲಿ ಪಾವತಿಸುತ್ತದೆ. ತನ್ನ ಪ್ರಮುಖ ಆದಾಯ ಸಂಗ್ರಹದಲ್ಲಿ ಸುಮಾರು ಶೇ.80 ನೀರಿನ ಬಿಲ್ ಸಂಗ್ರಹದ ಮೂಲಕ ಬರುತ್ತದೆ. ಪರಿಸ್ಥಿತಿ ಹೀಗಿದ್ದಾಗ ಸರಕಾರಿ ಇಲಾಖೆಗಳೇ ಕೋಟ್ಯಂತರ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿರುವುದು ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯಾವ ಇಲಾಖೆಗಳು ಎಷ್ಟೆಷ್ಟು: ರಾಜ್ಯ ಸರಕಾರದ ಇಲಾಖೆಗಳು 23.25 ಕೋಟಿ ರೂ., ಕೇಂದ್ರ ಸರಕಾರದ ಇಲಾಖೆಗಳು 7.81 ಕೋಟಿ, ಬಿಬಿಎಂಪಿ 6.10 ಕೋಟಿ, ನಿಗಮ ಮಂಡಳಿಗಳು 2.70 ಕೋಟಿ, ರಕ್ಷಣಾ ಇಲಾಖೆ 90 ಲಕ್ಷ ಸೇರಿದಂತೆ 40.76 ಕೋಟಿ ಬಾಕಿಯಿದೆ.

ಬಾಕಿ ಇರುವ ಬಡ್ಡಿ: ರಾಜ್ಯ ಸರಕಾರದ ಇಲಾಖೆಗಳು 8.50 ಕೋಟಿ, ಕೇಂದ್ರ ಸರಕಾರದ ಇಲಾಖೆಗಳು 1.01 ಕೋಟಿ, ಬಿಬಿಎಂಪಿ 9.17 ಕೋಟಿ, ನಿಗಮ ಮಂಡಳಿಗಳಿಂದ 2.14 ಕೋಟಿ ಬಾಕಿಯಿರುವ ಬಡ್ಡಿ ವಸೂಲಿಯಾಗಬೇಕಿದೆ ಎಂದು ಮಂಡಳಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X