‘ಎಲ್ಲೆಂದರಲ್ಲಿ ಕಸ ಎಸೆದರೆ ಕಾನೂನು ಕ್ರಮ’
ಉಡುಪಿ, ನ.7: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ರಸ್ತೆ ಬದಿಯ ಗಿಡಗಂಟಿಗಳನ್ನು, ಕಳೆ ಕೀಳುವ ಯಂತ್ರದ ಮೂಲಕ ಸ್ವಚ್ಛಗೊಳಿಸುವ ಕೆಲಸವು ಪ್ರಾರಂಭವಾಗಿದೆ.
ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಸಾಡದೇ ನಗರಸಭೆಯ ವಾಹನಕ್ಕೆ ನೀಡಬೇಕು ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ನಗರಸಭಾ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಸ್ವಚ್ಛ ಮತ್ತು ಸುಂದರ ಉಡುಪಿಯನ್ನಾಗಿಸಲು ಸಹಕರಿಸಬೇಕು. ಇದನ್ನು ಉಲ್ಲಂಸಿದ್ದಲ್ಲಿ ನಿಯಮಾನುಸಾರ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





