Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಟಿವಿ ಟುಡೇ’ ಗೆ 5 ಲಕ್ಷ ರೂ.ದಂಡ...

‘ಟಿವಿ ಟುಡೇ’ ಗೆ 5 ಲಕ್ಷ ರೂ.ದಂಡ ವಿಧಿಸುವ ಬಿಎಆರ್‌ಸಿ ಆದೇಶ ತಳ್ಳಿಹಾಕಿದ ಬಾಂಬೆ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ7 Nov 2020 10:14 PM IST
share
‘ಟಿವಿ ಟುಡೇ’ ಗೆ 5 ಲಕ್ಷ ರೂ.ದಂಡ ವಿಧಿಸುವ ಬಿಎಆರ್‌ಸಿ ಆದೇಶ ತಳ್ಳಿಹಾಕಿದ ಬಾಂಬೆ ಹೈಕೋರ್ಟ್

ಹೊಸದಿಲ್ಲಿ,ಅ.7: ಟಿಆರ್‌ಪಿಗಾಗಿ ವೀಕ್ಷಕಬಳಗದ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲು ಅಕ್ರಮವೆಸಗಿದ ಹಾಗೂ ತಾನು ನಿಗದಿ ಪಡಿಸಿದ ನೀತಿಸಂಹಿತೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಟಿವಿ ಟುಡೇ ನೆಟ್‌ವರ್ಕ್ ಸಂಸ್ಥೆಗೆ 5 ಲಕ್ಷ ರೂ. ದಂಡ ವಿಧಿಸಿದ್ದ ಟಿವಿ ರೇಟಿಂಗ್ ಏಜೆನ್ಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್(ಬಿಎಆರ್‌ಸಿ)ನ ಆದೇಶ ವನ್ನು ಬಾಂಬೆ ಹೈಕೋರ್ಟ್ ತಳ್ಳಿಹಾಕಿದೆ.

 ಸುದ್ದಿವಾಹಿನಿ ಇಂಡಿಯಾ ಟುಡೇಯ ಮಾಲಕ ಸಂಸ್ಥೆಯಾದ ‘ಟಿವಿ ಟುಡೇ’ಗೆ ಬಿಎ ಆರ್‌ಸಿ ಜುಲೈ 31ರಂದು ದಂಡವಿಧಿಸಿತ್ತು.

 ಟಿವಿ ಟುಡೇ ನೆಟ್‌ವರ್ಕ್  ಒಡೆತನದ ಚಾನೆಲ್‌ನಲ್ಲಿ ದೈನಂದಿನ ಸರಾಸರಿ ವೀಕ್ಷಣೆಯ ಪ್ರಮಾಣದಲ್ಲಿ ಗಣನೀಯವಾದ ‘ಅಸಾಮಾನ್ಯ ಜಿಗಿತ’ ಕಂಡುಬಂದಿತ್ತೆಂದು ಬಿಎಆರ್‌ಸಿ ಆಪಾದಿಸಿತ್ತು. ಟಿಆರ್‌ಪಿ ರೇಟಿಂಗ್ಸ್ ಯಂತ್ರಗಳನ್ನು ಅಳವಡಿಸಲಾದ ಮನೆಗಳ ಸದಸ್ಯರ ಮೇಲೆ ಪ್ರಭಾವ ಬೀರಿ, ಅಕ್ರಮವಾಗಿ ಟಿಆರ್‌ಪಿ ರೇಟಿಂಗ್ಸ್ ಹೆಚ್ಚಿಸಲಾಗಿದೆಯೆಂದು ಬಿಎಆರ್‌ಸಿ ಶಂಕಿಸಿದೆ.

   ತನ್ನ ವಿರುದ್ಧ ಬಿಎಆರ್‌ಸಿ ಯಾವುದೇ ದಂಡನಾತ್ಮಕ ಕ್ರಮವನ್ನು ಕೈಗೊಳ್ಳಬಾರದೆಂದು ಟಿವಿ ಟುಡೇ ನೆಟ್‌ವರ್ಕ್ ಬಯಸಿದ್ದಲ್ಲಿ, ಅದು ದಂಡದ ಮೊತ್ತವನ್ನು ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಜಮೆ ಮಾಡುವಂತೆ ಬಾಂಬೆ ಹೈಕೋರ್ಟ್ ಕಳೆದ ತಿಂಗಳು ಆದೇಶಿಸಿತ್ತು. ತನ್ನ ವಿರುದ್ಧ ಬಿಎಆರ್‌ಸಿ ಶಿಸ್ತುಕ್ರಮ ಕೈಗೊಂಡಿರುವುದನ್ನು ಟಿವಿ ಟುಡೇ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು.

   ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ನಿತಿನ್ ಜಮದಾರ್ ಹಾಗೂ ಮಿಲಿಂದ್ ಜಾಧವ್ ಅವರನ್ನೊಳಗೊಂಡ ನ್ಯಾಯಪೀಠವು,ಟಿವಿ ಟುಡೇ ನೆಟ್‌ವರ್ಕ್ ವಿರುದ್ಧ 5 ಲಕ್ಷ ರೂ. ದಂಡವಿಧಿಸುವ ಬಿಎಆರ್‌ಸಿಯ ಜುಲೈ 31ರ ಆದೇಶವನ್ನು ತಳ್ಳಿಹಾಕಿದೆ. ಟಿವಿ ಟುಡೇಯ ಅಹವಾಲನ್ನು ಅಲಿಸಲು ತಾನು ಸಿದ್ದನಿರುವುದಾಗಿ ಬಿಎಆರ್‌ಸಿ ನ್ಯಾಯಾಲಯಕ್ಕೆ ತಿಳಿಸಿತು. ಟಿವಿ ಟುಡೇ ಕೂಡಾ ತಾನು ಬಿಎಆರ್‌ಸಿ ಮುಂದೆ ಹಾಜರಾಗುವ ಇಚ್ಛೆಯನ್ನು ವ್ಯಕ್ತಪಡಿಸಿತು.

  ಬಿಎಆರ್‌ಸಿಯು ದಂಡವನ್ನು ವಿಧಿಸುವ ಮುನ್ನ ಅದು ಸಮರ್ಪಕವಾದ ಕೋರಂ ಸಭೆಯನ್ನು ನಡೆಸಿರಲಿಲ್ಲವೆಂದು ಟಿವಿ ಟುಡೇ ಪರ ನ್ಯಾಯವಾದಿಗಳಾದ ಅಭಿನವ್ ಚಂದ್ರಚೂಡ್, ಮುನಾಫ್ ವಿರ್ಜಿ ಹಾಗೂ ಆಕಾಶ್ ಆಗರ್ವಾಲ್ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X