Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ಕಸ್ಟಡಿಯಲ್ಲಿ ಕೈದಿಯ ಸಾವಿಗೆ...

ತಮಿಳುನಾಡು: ಕಸ್ಟಡಿಯಲ್ಲಿ ಕೈದಿಯ ಸಾವಿಗೆ ಪೊಲೀಸರ ಚಿತ್ರಹಿಂಸೆ ಕಾರಣವೆಂದು ಕುಟುಂಬದ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Nov 2020 11:12 PM IST
share
ತಮಿಳುನಾಡು: ಕಸ್ಟಡಿಯಲ್ಲಿ ಕೈದಿಯ ಸಾವಿಗೆ ಪೊಲೀಸರ ಚಿತ್ರಹಿಂಸೆ ಕಾರಣವೆಂದು ಕುಟುಂಬದ ಆರೋಪ

ಚೆನ್ನೈ,ನ.7: ನೈವೇಲಿ ಟೌನ್‌ಷಿಪ್ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ವ್ಯಕ್ತಿಯ ಸಾವಿಗೆ ಚಿತ್ರಹಿಂಸೆ ಕಾರಣವೆಂದು ಆತನ ಕುಟುಂಬವು ಆರೋಪಿಸಿದೆ.

ಕುಡಲೂರಿನ ಕದಂಪುಲಿಯೂರು ನಿವಾಸಿ ಸೆಲ್ವಂ (40) ಎಂಬಾತನನ್ನು ಅ.28ರಂದು ಕಳ್ಳತನದ ಆರೋಪದಲ್ಲಿ ನೈವೇಲಿ ಟೌನ್‌ಷಿಪ್ ಪೊಲೀಸರು ಬಂಧಿಸಿದ್ದು,ಬಳಿಕ ವಿರುಧಾಚಲಂ ಉಪ ಕಾರಾಗೃಹದಲ್ಲಿ ಇರಿಸಲಾಗಿತ್ತು.

ತನ್ನ ವಿರುದ್ಧ ಐದು ಪ್ರಕರಣಗಳನ್ನು ಹೊಂದಿದ್ದ ಸೆಲ್ವಂ ಜೈಲಿನ ಕೋಣೆಯಲ್ಲಿದ್ದಾಗ ಫಿಟ್ಸ್ ಉಲ್ಬಣಗೊಂಡಿದ್ದರಿಂದ ಆತನನ್ನು ವಿರುಧಾಚಲಂ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಜೈಲು ಅಧಿಕಾರಿ ಶಶಿಕುಮಾರ್ ಹೇಳಿದ್ದಾರೆ. ಆದರೆ ಪೊಲೀಸರು ಜೈಲಿನಲ್ಲಿ ತನ್ನ ಪತಿಯನ್ನು ಬರ್ಬರವಾಗಿ ಥಳಿಸಿದ್ದರು ಎಂದು ಸೆಲ್ವಂ ಪತ್ನಿ ಪ್ರಭಾ ಆರೋಪಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿರುವ ಪ್ರಭಾ,ಸೆಲ್ವಂ ಗೋಡಂಬಿ ಕಾರ್ಮಿಕನಾಗಿದ್ದ ಮತ್ತು ವ್ಯವಹಾರ ನಿಮಿತ್ತ ವಡಲೂರಿಗೆ ತೆರಳಿದ್ದಾಗ ಸುಳ್ಳು ಆರೋಪಕ್ಕೆ ಬಂಧಿಸಲ್ಪಟ್ಟಿದ್ದ ಎಂದು ತಿಳಿಸಿದ್ದಾರೆ.

ಅ.29ರಂದು ತಾನು ನೈವೇಲಿ ಠಾಣೆಗೆ ತೆರಳಿದ್ದು,10 ಪವನ್ ತೂಕದ ಚಿನ್ನದ ಸರವನ್ನು ನೀಡಿದರೆ ಸೆಲ್ವಂ ವಿರುದ್ಧ ಆರೋಪಗಳನ್ನು ಕೈಬಿಡುವುದಾಗಿ ಪೊಲೀಸರು ಹೇಳಿದ್ದರು. ತಾನು ನಿರಾಕರಿಸಿದಾಗ ಪೊಲೀಸರು ತನ್ನನ್ನು ಮತ್ತು ತನ್ನ ಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ತಮ್ಮ ಚಿತ್ರಗಳನ್ನು ತೆಗೆದುಕೊಂಡಿದ್ದರು ಮತ್ತು ಖಾಲಿ ಕಾಗದದ ಮೇಲೆ ಬಲವಂತದಿಂದ ತನ್ನ ಸಹಿಯನ್ನು ತೆಗೆದುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿರುವ ಪ್ರಭಾ,ನ.2ರಂದು ವಿರುಧಾಚಲಂ ಜೈಲಿನಲ್ಲಿ ತಾನು ಪತಿಯನ್ನು ಭೇಟಿಯಾದಾಗ ಆತ ನಿಶ್ಶಕ್ತನಾಗಿದ್ದ ಮತ್ತು ಆತನ ಕುತ್ತಿಗೆ ಊದಿಕೊಂಡಿತ್ತು. ಆತನಿಗೆ ಆಹಾರ ಸೇವಿಸಲೂ ಸಾಧ್ಯವಾಗುತ್ತಿರಲಿಲ್ಲ. ಇದರ ಹಿಂದೆ ಪೊಲೀಸರಿದ್ದಾರೆ,ಅವರು ತನ್ನ ಪತಿಯನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

 ಮೃತನ ಬಂಧುಗಳು ಆಸ್ಪತ್ರೆಗೆ ಬರಲು ನಿರಾಕರಿಸಿದ್ದರಿಂದ ಸೆಲ್ವಂ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿಲ್ಲ ಎಂದು ಬಲ್ಲ ಮೂಲಗಳು ಹೇಳಿರುವುದನ್ನು ವರದಿಗಳು ಉಲ್ಲೇಖಿಸಿವೆ.

ಕೈದಿಗಳಿಗೆ ಚಿತ್ರಹಿಂಸೆ ನೀಡುವುದರಲ್ಲಿ ತಮಿಳುನಾಡು ಪೊಲೀಸರು ಕುಖ್ಯಾತಿಯನ್ನು ಹೊಂದಿದ್ದಾರೆ. ಕಸ್ಟಡಿ ಸಾವಿನ ಹಲವಾರು ಘಟನೆಗಳು ಅಲ್ಲಿ ನಡೆಯುತ್ತಲೇ ಇರುತ್ತವೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X