ರಂಗಕರ್ಮಿಗಳಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ
ಉಡುಪಿ, ನ.8: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಲಬಾರ್ ವಿಶ್ವರಂಗ ಪುರಸ್ಕಾರ -2020 ಪ್ರದಾನ ಸಮಾರಂಭವು ಉಡುಪಿ ಗೀತಾಂಜಲಿ ಬಳಿಯ ಮಲಾರ್ ಗೋಲ್ಡ್ ಸಂಕಿರ್ಣದಲ್ಲಿ ಜರಗಿತು.
ಹಿರಿಯ ರಂಗಕರ್ಮಿಗಳಾದ ಶ್ರೀನಿವಾಸ್ ಶೆಟ್ಟಿಗಾರ್, ಡಾ.ಮಾಧವಿ ಭಂಡಾರಿ, ಜಯರಾಮ್ ನೀಲಾವರ, ರಾಜಗೋಪಾಲ್ ಶೇಟ್ ಹಾಗೂ ಅಭಿಲಾಷಾ ಎಸ್. ಅವರಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕಥಾ ಸಪ್ತಾಹದಲ್ಲಿ ಏರ್ಪಡಿಸಲಾದ ಸ್ಪರ್ಧೆಯ ವಿಜೆೀತರಿಗೆ ಬಹುಮಾನ ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಮಣಿಪಾಲ ಮಾಹೆಯ ಎಂಸಿಇಎಸ್ನ ನಿರ್ದೇಶಕಿ ಡಾ.ನೀತಾ ಇನಾಮ್ದಾರ್, ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕರವಿ ಬಸ್ರೂರ್ ಭಾಗವಹಿಸಿದ್ದರು.
ಮಲಬಾರ್ ಗೋಲ್ಡ್ನ ಉಡುಪಿ ಶಾಖೆಯ ಮುಖ್ಯಸ್ಥ ಹಫೀಸ್ ರೆಹ ಮಾನ್, ಪ್ರತಿಷ್ಠಾನದ ಗೌರವಾಧ್ಯಕ್ಷ ಯು.ವಿಶ್ವನಾಥ ಶೆಣೈ, ಉಪಾಧ್ಯಕ್ಷ ನಾಗ ರಾಜ್ ಹೆಬ್ಬಾರ್ ಉಪಸ್ಥಿತರಿದ್ದರು. ಸಂಚಾಲಕ ರವಿರಾಜ್ ಎಚ್.ಪಿ. ಪ್ರಾಸ್ತಾ ವಿಕವಾಗಿ ಮಾತನಾಡಿದರು. ವಿಘ್ನೇಶ್ವರ ಅಡಿಗ ಸ್ವಾಗತಿಸಿ ದರು. ವಿವೇಕಾನಂದ ಕಾರ್ಯಕ್ರಮ ನಿರೂಪಿಸಿದರು.