Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ನಿಷೇಧದ ನಂತರ ಭಾರತದ ಆರ್ಥಿಕತೆ...

ನೋಟು ನಿಷೇಧದ ನಂತರ ಭಾರತದ ಆರ್ಥಿಕತೆ ಬಾಂಗ್ಲಾಕ್ಕಿಂತ ಹಿಂದುಳಿದಿದೆ: ರಾಹುಲ್

ವಾರ್ತಾಭಾರತಿವಾರ್ತಾಭಾರತಿ8 Nov 2020 8:03 PM IST
share
ನೋಟು ನಿಷೇಧದ ನಂತರ ಭಾರತದ ಆರ್ಥಿಕತೆ ಬಾಂಗ್ಲಾಕ್ಕಿಂತ ಹಿಂದುಳಿದಿದೆ: ರಾಹುಲ್

ಹೊಸದಿಲ್ಲಿ, ನ. 7: ನಗದು ಅಮಾನ್ಯೀಕರಣದ ಬಗ್ಗೆ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾಲ್ಕು ವರ್ಷಗಳ ಹಿಂದಿನ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಕ್ರೋನಿ ಬಂಡವಾಳಶಾಹಿ (ಸರಕಾರದೊಂದಿಗೆ ಮೈತ್ರಿ ಹೊಂದಿರುವ ಬಂಡವಾಳಶಾಹಿಗಳು) ಗೆಳೆಯರಿಗೆ ನೆರವು ನೀಡುವ ಹಾಗೂ ಭಾರತೀಯ ಆರ್ಥಿಕತೆಯನ್ನು ನಾಶಮಾಡುವ ಉದ್ದೇಶ ಹೊಂದಿತ್ತು ಎಂದಿದ್ದಾರೆ.

2016ರ ನಗದು ಅಮಾನ್ಯೀಕರಣ ಜನರ ಹಿತಾಸಕ್ತಿಯ ಉದ್ದೇಶ ಹೊಂದಿರಲಿಲ್ಲ. ಅದು ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟು ಮಾಡಿತ್ತು ಆದರೆ, ಈ ಆರೋಪವನ್ನು ಕೇಂದ್ರ ಸರಕಾರ ಮತ್ತೆ ಮತ್ತೆ ನಿರಾಕರಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಪಕ್ಷದ ಆನ್‌ಲೈನ್ ಅಭಿಯಾನ ‘ಸ್ಪೀಕ್ ಅಪ್ ಎಗೈನ್ಸ್‌ಟ್ ಡಿಮೊ ಡಯಾಸ್ಟರ್’ನ ಭಾಗವಾಗಿ ಬಿಡುಗಡೆ ಮಾಡಲಾದ ವೀಡಿಯೋದಲ್ಲಿ ರಾಹುಲ್ ಗಾಂಧಿ, ಜಗತ್ತಿನ ಆರ್ಥಿಕ ಸದೃಢ ದೇಶಗಳಲ್ಲಿ ಭಾರತ ಒಂದಾಗಿತ್ತು. ಆದರೆ, ಈಗ ಆರ್ಥಿಕತೆಯಲ್ಲಿ ಭಾರತ ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದರು. ಆರ್ಥಿಕ ಕುಸಿತಕ್ಕೆ ಕೊರೋನ ಸಾಂಕ್ರಾಮಿಕ ರೋಗ ಕಾರಣ ಎಂದು ಕೇಂದ್ರ ಸರಕಾರ ಹೇಳುತ್ತಿದೆ. ಹಾಗಾದರೆ, ಬಾಂಗ್ಲಾದೇಶ ಹಾಗೂ ಜಗತ್ತಿನ ಇತರ ಭಾಗಗಳಲ್ಲಿ ಕೊರೋನ ಸಾಂಕ್ರಾಮಿಕ ರೋಗ ಇಲ್ಲವೇ ಎಂದು ಅವರು ಪ್ರಶ್ನಿಸಿದರು.

ಆರ್ಥಿಕ ಕುಸಿತಕ್ಕೆ ನಿಜವಾದ ಕಾರಣ ನೋಟು ಅಮಾನ್ಯೀಕರಣ ಹಾಗೂ ಜಿಎಸ್‌ಟಿ ಎಂದು ಅವರು ಹೇಳಿದರು. ‘‘ನಾಲ್ಕು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಆರ್ಥಿಕತೆಗೆ ಆಘಾತ ನೀಡಿದರು. ಅವರು ರೈತರು, ಕಾರ್ಮಿಕರು ಹಾಗೂ ಸಣ್ಣ ಅಂಗಡಿ ಮಾಲಕರಿಗೆ ತೊಂದರೆ ಉಂಟು ಮಾಡಿದರು. ಆಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಆರ್ಥಿಕತೆ ಶೇ. 2 ಇಳಿಕೆಯಾಗುತ್ತದೆ ಎಂದು ಹೇಳಿದ್ದರು. ಅದನ್ನು ನಾವು ಈಗ ನೋಡುತ್ತಿದ್ದೇವೆ’’ ಎಂದು ಅವರು ತಿಳಿಸಿದರು.

ನಗದು ಅಮಾನ್ಯೀಕರಣ ಮಾಡಿರುವುದು ಕಪ್ಪು ಹಣದ ವಿರುದ್ಧ ಹೋರಾಡಲು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದರು. ಆದರೆ, ಅದು ಸುಳ್ಳು. ಪ್ರಧಾನಿ ಮೋದಿ ಅವರು ನಿಮ್ಮ ಹಣವನ್ನು ತೆಗೆದು 2-3 ಕ್ರೋನಿ ಬಂಡವಾಳಶಾಹಿ ಗೆಳೆಯರಿಗೆ ನೀಡಲು ಬಯಸಿದ್ದರು. ನೀವು ಬ್ಯಾಂಕ್‌ನಲ್ಲಿ ಹಣ ಇರಿಸಿದಿರಿ. ಪ್ರಧಾನಿ ಮೋದಿ ಅವರು ಅದನ್ನು ತಮ್ಮ ಕ್ರೋನಿ ಬಂಡವಾಳಶಾಹಿ ಗೆಳೆಯರಿಗೆ ನೀಡಿದರು ಹಾಗೂ ಅವರ 3,50,000 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದರು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X