Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾವು ಏನೂ ತಪ್ಪು ಮಾಡಿಲ್ಲ'':...

"ನಾವು ಏನೂ ತಪ್ಪು ಮಾಡಿಲ್ಲ'': ಆತ್ಮಹತ್ಯೆಗೆ ಮುನ್ನ ಸೆಲ್ಫೀ ವೀಡಿಯೋ ಮಾಡಿದ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ9 Nov 2020 1:59 PM IST
share
ನಾವು ಏನೂ ತಪ್ಪು ಮಾಡಿಲ್ಲ: ಆತ್ಮಹತ್ಯೆಗೆ ಮುನ್ನ ಸೆಲ್ಫೀ ವೀಡಿಯೋ ಮಾಡಿದ ಕುಟುಂಬ

ಕುರ್ನೂಲ್: ತಾನು ಮಾಡದ ಕಳ್ಳತನಕ್ಕಾಗಿ ನಂದ್ಯಾಲ್ ಪೊಲೀಸರ ಕಿರುಕುಳ ಹಾಗೂ ನಿಂದನೆ ತಾಳಲಾರದೆ ಸಾಯಲು ನಿರ್ಧರಿಸಿರುವುದಾಗಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆಗಿನ ಸೆಲ್ಫೀ ವೀಡಿಯೋದಲ್ಲಿ ಕಣ್ಣೀರಿನೊಂದಿಗೆ ಹೇಳಿಕೊಂಡ ವ್ಯಕ್ತಿಯೊಬ್ಬ ನಂತರ ಕುಟುಂಬ ಸಮೇತ ಕಲವಳೂರು ಗ್ರಾಮದಲ್ಲಿ ರೈಲಿನಡಿಗೆ  ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ವ್ಯಾಪಕ ಆಕ್ರೋಶ ಸೃಷ್ಟಿಸಿದೆ.  ಅವರು ಸಾಯುವ ಮುನ್ನ ಮಾಡಿದ ವೀಡಿಯೋ ಶನಿವಾರ ಬಹಿರಂಗಗೊಂಡು ವೈರಲ್ ಆಗುತ್ತಿದ್ದಂತೆಯೇ ರವಿವಾರ ಪೊಲೀಸರು ವೃತ್ತ ನಿರೀಕ್ಷಕ ಹಾಗೂ ಹೆಡ್ ಕಾನ್‍ಸ್ಟೇಬಲ್ ಒಬ್ಬರನ್ನು ಬಂಧಿಸಿದ್ದಾರೆ. ಮೃತರನ್ನು ಅಬ್ದುಲ್ ಸಲಾಂ (45), ಆತನ ಪತ್ನಿ ನೂರ್ ಜಹಾನ್ (38), ಪುತ್ರಿ ಸಲ್ಮಾ (14) ಹಾಗೂ ಪುತ್ರ ದಧಿ ಕಲಂದರ್ (10) ಎಂದು ಗುರುತಿಸಲಾಗಿದೆ.

"ನಾನೇನೂ ತಪ್ಪು ಮಾಡಿಲ್ಲ. ಆಟೋರಿಕ್ಷಾದಲ್ಲಿ ಹಾಗೂ ಅಂಗಡಿಯಲ್ಲಿ ನಡೆದ ಕಳ್ಳತನಕ್ಕೂ ನನಗೂ ಸಂಬಂಧವಿಲ್ಲ. ನನಗೆ ಕಿರುಕುಳ ಸಹಿಸಲಾಗುತ್ತಿಲ್ಲ. ನಮಗೆ ಸಹಾಯ ಮಾಡಲು ಯಾರೂ ಇಲ್ಲ. ಕನಿಷ್ಠ ಸಾವು ನಮಗೆ ಮನಃಶಾಂತಿ ನೀಡಬಹುದು,'' ಎಂದು ಅವರು ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಸುತ್ತದೆ.

ಈ ಹಿಂದೆ ನಂದ್ಯಾಲ್‍ನ ಚಿನ್ನಾಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದ ಅಬ್ದುಲ್ ಅಂಗಡಿಯಿಂದ 3 ಕೆಜಿ ಚಿನ್ನ ಕದ್ದಿದ್ದಾನೆಂದು ಆರೋಪಿಸಲಾಗಿತ್ತು. ನಂತರ ಆತನ ಮನೆಯಲ್ಲಿ 500 ಗ್ರಾಂ ಚಿನ್ನಾಭರಣೆ ಪತ್ತೆಯಾದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಬಿಡುಗಡೆಗೊಂಡ ನಂತರ ಆತ ಆಟೋ ಚಾಲಕನಾಗಿ ದುಡಿಯುತ್ತಿದ್ದ. ಆದರೆ ಕೆಲ ದಿನಗಳ ಹಿಂದೆ  ಆತನ ಆಟೋದಲ್ಲಿ ಪ್ರಯಾಣಿಸಿದ ವ್ಯಕ್ತಿಯೊಬ್ಬ ರೂ 70,000 ನಗದು ಕಳ್ಳತನದ ಕುರಿತು ದೂರು ನೀಡಿದ್ದ. ಈ ಸಂಬಂಧ ಪೊಲೀಸರು ವಿಚಾರಣೆಗಾಗಿ ಬರ ಹೇಳಿದ್ದರು. ಇದರಿಂದ ನೊಂದಿದ್ದ ಅಬ್ದುಲ್ ಕುಟುಂಬ ರೈಲಿನಡಿ ಹಾರಿ ಆತ್ಮಹತ್ಯೆ ಮಾಡಿಕೊಂಡಿತ್ತು ಎನ್ನಲಾಗಿದೆ.

ಅವರು ಸಾಯುವ ಮುನ್ನ ಮಾಡಿದ್ದ ಸೆಲ್ಫೀ ವೀಡಿಯೋ ಶನಿವಾರ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಈ ಕುರಿತು ತನಿಖೆಗೆ ಹಿರಿಯಾಧಿಕಾರಿಗಳಿಗೆ ಆದೇಶಿಸಿದ್ದ ನಂತರ ಇಬ್ಬರು ಪೊಲೀಸರ ಬಂಧನವಾಗಿದೆ.

ಅಬ್ದುಲ್ ಕುಟುಂಬಕ್ಕೆ ಸೇರಿದ ಚಿನ್ನಾಭರಣಗಳನ್ನೇ ವಶಪಡಿಸಿಕೊಂಡು ಅದು ಕದ್ದ ಚಿನ್ನಾಭರಣ ಎಂದು ಪೊಲೀಸರು ಆರೋಪಿಸಿದ್ದರು ಎಂದು ಅಬ್ದುಲ್ ಸಂಬಂಧಿಕರು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಶಾಲಾ ಶಿಕ್ಷಕಿಯಾಗಿರುವ ಆತನ ಪತ್ನಿಯ ಕುರಿತೂ ಅಸಭ್ಯವಾಗಿ ಮಾತನಾಡಿದ್ದರು ಎಂದು ದೂರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X