Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಂತ್ರಜ್ಞಾನ, ನವೋದ್ಯಮ, ಸಂಶೋಧನೆ, ಕೃಷಿ...

ತಂತ್ರಜ್ಞಾನ, ನವೋದ್ಯಮ, ಸಂಶೋಧನೆ, ಕೃಷಿ ಕ್ಷೇತ್ರಗಳಲ್ಲಿ ಹೆಚ್ಚು ಒಡಂಬಡಿಕೆ: ಡಿಸಿಎಂ ಅಶ್ವತ್ಥನಾರಾಯಣ

‘ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ 12 ಒಪ್ಪಂದಗಳಿಗೆ ಅಂಕಿತ’

ವಾರ್ತಾಭಾರತಿವಾರ್ತಾಭಾರತಿ9 Nov 2020 7:17 PM IST
share
ತಂತ್ರಜ್ಞಾನ, ನವೋದ್ಯಮ, ಸಂಶೋಧನೆ, ಕೃಷಿ ಕ್ಷೇತ್ರಗಳಲ್ಲಿ ಹೆಚ್ಚು ಒಡಂಬಡಿಕೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ನ.9: ಇದೇ ನವೆಂಬರ್ 19ರಿಂದ ನಡೆಯಲಿರುವ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ(ಬಿಟಿಎಸ್)ಯಲ್ಲಿ ಮಹತ್ವದ 12 ಒಪ್ಪಂದಗಳಿಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ (GIA) ಪಾಲುದಾರ ದೇಶಗಳ ಜತೆ ಸಹಿ ಹಾಕಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ತಂತ್ರಜ್ಞಾನ ಶೃಂಗಸಭೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸೋಮವಾರ ವಿವಿಧ ದೇಶಗಳ ಉನ್ನತ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ನಡುವೆಯೂ ನಡೆಯುತ್ತಿರುವ ಅತಿದೊಡ್ಡ ಪ್ರಮಾಣದ ಈ ಶೃಂಗದಲ್ಲಿ ಸುಮಾರು 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗುತ್ತಿದ್ದು, ತಂತ್ರಜ್ಞಾನದ ಅನೇಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಪ್ಪಂದಗಳು ಆಗಲಿವೆ. ಈ ಪೈಕಿ ಏಳು ಒಪ್ಪಂದಗಳು ಸಹಿಗೂ ಸಿದ್ಧವಾಗಿವೆ ಎಂದರು.

ಈ ಹಿಂದೆ ಮಾಡಿಕೊಂಡಿರುವ ಒಪ್ಪಂದಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲಾಗುವುದು. ಜತೆಗೆ, ಹೊಸ ಒಪ್ಪಂದಗಳನ್ನು ಕಾಲಮಿತಿಯೊಳಗೆ, ಪೂರ್ವ ನಿಗದಿಯಂತೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುವುದು. ಒಪ್ಪಂದಗಳ ಫಲಶ್ರುತಿ ಬೇಗ ಸಿಗುವ ಗುರಿಯೊಂದಿಗೆ ಪಾಲುದಾರ ದೇಶಗಳ ಜತೆ ಕೆಲಸ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕೃಷಿ, ಸಂಶೋಧನೆ, ಅಭಿವೃದ್ಧಿ, ಸ್ಟಾರ್ಟ್ ಅಪ್‍ಗಳ ಸ್ಥಾಪನೆ ಪಾಲುದಾರಿಕೆ ಸೇರಿದಂತೆ ಏಳು ಮಹತ್ವದ ಹೊಸ ಒಪ್ಪಂದಗಳಿಗೆ ಶೃಂಗಸಭೆಯಲ್ಲಿ ಸಹಿ ಬೀಳಲಿದೆ ಎಂದ ಅವರು, ಜಾಗತಿಕ ಮಟ್ಟದ ಆವಿಷ್ಕಾರ ಮೈತ್ರಿಗೆ ಸಂಬಂಧಿಸಿದ ವಿಚಾರ ವಿನಿಮಯ-ಚರ್ಚೆಯ ಜತೆಗೆ 15 ಅಧಿವೇಶನಗಳು ನಡೆಯುತ್ತಿವೆ. 60ಕ್ಕೂ ಹೆಚ್ಚು ಜನ ಈ ಬಗ್ಗೆ ತಮ್ಮ ಆಭಿಪ್ರಾಯವನ್ನು ಮಂಡಿಸಲಿದ್ದಾರೆ. ವಿವಿಧ ದೇಶಗಳ ಸಚಿವರ ಮಟ್ಟದ ಹತ್ತು ನಿಯೋಗಗಳು ಭಾಗಿಯಾಗಲಿ. ಇದರ ಜತೆಗೆ 500ಕ್ಕೂ ಹೆಚ್ಚು ಅಂತರ್‍ರಾಷ್ಟ್ರೀಯ ಮಟ್ಟದ ನಿಯೋಗಗಳು ಭೇಟಿ ನೀಡುತ್ತಿವೆ ಎಂದು ಅವರು ಮಾಹಿತಿ ನೀಡಿದರು.

ಪಾಲುದಾರಿಕೆ ದೇಶಗಳು: ಆಸ್ಟ್ರೇಲಿಯಾ, ಫ್ರಾನ್ಸ್, ಜರ್ಮನಿ, ಇಸ್ರೇಲ್, ನೆದರ್ ಲ್ಯಾಂಡ್, ಸ್ವಿಡ್ಜರ್‍ಲೆಂಡ್, ಇಂಗ್ಲೆಂಡ್ ತಂತ್ರಜ್ಞಾನ ಶೃಂಗಸಭೆಯ ಪಾಲುದಾರ ದೇಶಗಳಾಗಿದ್ದು, ಮುಖ್ಯವಾಗಿ ಈ ರಾಷ್ಟ್ರಗಳಿಂದ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಯನ್ನು ನಿರೀಕ್ಷೆ ಮಾಡುತ್ತಿದೆ. ಈಗಾಗಲೇ ಕರ್ನಾಟಕ ಕೋವಿಡ್ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಿ ಉದ್ಯಮಕ್ಕೆ ಪೂರಕವಾದ ಕಾರ್ಮಿಕ ಕಾಯ್ದೆಗಳ ಸುಧಾರಣೆ, ತರಬೇತಿ, ಕುಶಲತೆಯುಳ್ಳ ಶಿಕ್ಷಣಕ್ಕೆ ಒತ್ತು ನೀಡಿದೆ. ಹೀಗಾಗಿ ರಾಜ್ಯದಲ್ಲಿ ಹೂಡಿಕೆ ಮಾಡುವ ಹೂಡಿಕೆದಾರರಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು, ಉತ್ತಮ ಮಾನವ ಸಂಪನ್ಮೂಲವನ್ನು ನೇಮಿಸಿಕೊಳ್ಳುವುದು ಸುಲಭ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಹೂಡಿಕೆಗೆ ವಿವಿಧ ದೇಶಗಳ ಉತ್ಸುಕತೆ: ಇದೇ ಮಾಧ್ಯಮಗೋಷ್ಠಿಯಲ್ಲಿ ಬ್ರಿಟನ್, ಆಸ್ಟ್ರೇಲಿಯಾ, ನೆದರ್ ಲ್ಯಾಂಡ್, ಸ್ವೀಡನ್, ಫ್ರಾನ್ಸ್, ಇಸ್ರೇಲ್, ಜಪಾನ್, ಜರ್ಮನಿ ದೇಶಗಳ ಉನ್ನತ ರಾಜತಾಂತ್ರಿಕ ಅಧಿಕಾರಿಗಳು ಮಾತನಾಡಿದರು.

ವರ್ಚುವಲ್ ಮೂಲಕ ಮಾತನಾಡಿದ ಭಾರತದಲ್ಲಿನ ಆಸ್ಟ್ರೇಲಿಯಾ ಹೈಕಮೀಷನರ್ ಹಾನ್‍ಬೆರಿ ಓ ಫರೇಲ್; "ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳು ಹಲವಾರು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿವೆ. ಈ ಪೈಕಿ ಸೈಬರ್ ಸೆಕ್ಯೂರಿಟಿಯಲ್ಲಿ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಲಾಗುತ್ತಿದೆ. ಕರ್ನಾಟಕದ ಜತೆ ತಂತ್ರಜ್ಞಾನ, ಬಾಹ್ಯಾಕಾಶ, ಸೈಬರ್ ಭದ್ರತೆ, ಖನಿಜ ಮುಂತಾದ ಕ್ಷೇತ್ರಗಳಲ್ಲಿ ಮತ್ತಷ್ಟು ವಿಸ್ತೃತವಾಗಿ ಕೆಲಸ ಮಾಡಲು ಸಿದ್ಧವಿದೆ" ಎಂದರು.

ಬೆಂಗಳೂರಿನಲ್ಲಿರುವ ಸ್ವಿಡ್ಜರ್‍ಲೆಂಡ್ ಕಾನ್ಸುಲೇಟ್ ಜನರಲ್ ಸೆಬಾಸ್ಟಿಯನ್ ಹಗ್ ಅವರು ವರ್ಚುಯಲ್ ಮೂಲಕ ಮಾತನಾಡಿ, "ಜಗತ್ತಿನ ಶ್ರೇಷ್ಠ ನಾವೀನ್ಯತಾ ಕೇಂದ್ರಗಳು ಹಾಗೂ ಕರ್ನಾಟಕದ ನಡುವೆ ಸಂಪರ್ಕ ಏರ್ಪಡಲು ಈ ಶೃಂಗಸಭೆ ಹೆಚ್ಚು ಸಹಕಾರಿ ಆಗುತ್ತದೆ. ಕರ್ನಾಟಕದಲ್ಲಿ ಹೂಡಿಕೆ ಮಾಡಲು ನಮ್ಮ ದೇಶದ ಉದ್ದಿಮೆದಾರರು ಉತ್ಸುಕರಾಗಿದ್ದಾರೆ" ಎಂದರು.

ನೆದರ್ ಲ್ಯಾಂಡ್‍ನ ದಕ್ಷಿಣ ಭಾರತದ ಕಾನ್ಸುಲೇಟ್ ಜನರಲ್ ಗೆರ್ಟ್ ಹೆಜ್‍ಕೂಪ್ ಮಾತನಾಡಿ, "ಆಧುನಿಕ ತಂತ್ರಜ್ಞಾನದ ಹಲವಾರು ಕ್ಷೇತ್ರದಲ್ಲಿ ಕರ್ನಾಟಕದ ಜತೆ ನೆದರ್ ಲ್ಯಾಂಡ್ ಅತ್ಯುತ್ತಮ ಪಾಲುದಾರಿಕೆಯನ್ನು ಹೊಂದಿದೆ. ಈ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಈ ಶೃಂಗಸಭೆ ಸಹಕಾರಿಯಾಗಲಿದೆ. ಈ ಶೃಂಗದಲ್ಲಿ ಹೇಗ್ ಬಿಸಿನೆಸ್ ಏಜೆನ್ಸಿಯೂ ಭಾರತದ ಸ್ಟಾರ್ಟಪ್‍ಗಳ ಅನುಕೂಲನಕ್ಕೆ ಡಿಜಿಟಲ್ ಲ್ಯಾಂಡಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ ಎಂದರು.

ಭಾರತದ ಸುಮಾರು 50ಕ್ಕೂ ಹೆಚ್ಚು ತಂತ್ರಜ್ಞಾನ ಸ್ಟಾರ್ಟಪ್‍ಗಳು ತಾವು ಆವಿಷ್ಕಾರ ಮಾಡಿದ ತಂತ್ರಜ್ಞಾನವನ್ನು ಯುರೋಪ್‍ಗೆ ಕೊಂಡೊಯ್ಯಲು ಈ ಶೃಂಗವು ನೆರವಾಗಲಿದೆ. ತಂತ್ರಜ್ಞಾನದ ಜತೆಗೆ ಸರಕು ಮತ್ತು ಸೇವೆಗಳನ್ನು ಯುರೋಪ್ ಮಾರುಕಟ್ಟೆಗೆ ತಲುಪಿಸಲು ಭಾರತೀಯ ಸ್ಟಾರ್ಟಪ್‍ಗಳಿಗೆ ನೆದರ್ ಲ್ಯಾಂಡ್ ಮಹಾದ್ವಾರವಾಗಿದೆ. ಇದಕ್ಕೆ ಪೂರಕವಾಗಿ ಸುರಕ್ಷತೆ, ಕೃಷಿ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಎರಡು ಮಹತ್ವದ ಒಪ್ಪಂದಗಳಿಗೆ ನೆದರ್ ಲ್ಯಾಂಡ್ ಸಹಿ ಹಾಕಲಿದೆ" ಎಂದು ಅವರು ಹೇಳಿದರು.

ಶುಕ್ರಯಾನದಲ್ಲಿ ಪಾಲುದಾರಿಕೆ ವರ್ಚುವಲ್ ವೇದಿಕೆ ಮೂಲಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಭಾರತದಲ್ಲಿನ ಸ್ವೀಡನ್ ದೇಶದ ಹೈಕಮೀಷನರ್ ಡಾ.ಫ್ಯಾನಿ ವಾನ್ ಹೆಲ್ಯಾಂಡ್, "ಭಾರತದಲ್ಲಿ ಬಾಹ್ಯಾಕಾಶಕ್ಕೆ ಸಂಬಂಧಿಸಿ ಸ್ವೀಡನ್ ಹಿಂದಿನಿಂದಲೂ ಕೆಲಸ ಮಾಡುತ್ತಿದೆ. ಮುಖ್ಯವಾಗಿ ಚಂದ್ರಯಾನ-1ರಲ್ಲಿ ತಂತ್ರಜ್ಞಾನ ನೀಡಿಕೆ ವಿಚಾರದಲ್ಲಿ ಸ್ವೀಡನ್, ಭಾರತದ ಜತೆ ಕೈಜೋಡಿಸಿತ್ತು. ಇದೀಗ ʼಶುಕ್ರಯಾನʼ ಯೋಜನೆಯಲ್ಲೂ ಭಾರತಕ್ಕೆ ನಮ್ಮ ದೇಶವೂ ನೆರವಾಗಲಿದೆ ಎಂದರು.

ಕರ್ನಾಟಕ ಜಗತ್ತಿಗೆ ಫೇವರೀಟ್: ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕ ಅತ್ಯಂತ ಇಷ್ಟದ ತಾಣವಾಗಿದೆ. ಮುಂಬರುವ ಟೆಕ್ ಸಮ್ಮಿಟ್ ಮೂಲಕ ಅದು ಮತ್ತಷ್ಟು ವಿಸ್ತೃತವಾಗಲಿದೆ. ಇವತ್ತು ಜಗತ್ತನ್ನು ಕಾಡುತ್ತಿರುವ ಕೋವಿಡ್ ಪಿಡುಗಿನಿಂದ ಪಾರಾಗಲು ಇಂಥ ಶೃಂಗಸಭೆಗಳು ನಡೆಯಬೇಕು. ಆ ದಿಸೆಯಲ್ಲಿ ನಡೆಯುತ್ತಿರುವ ಈ ಶೃಂಗವೂ ಜಾಗತಿಕ ಹೂಡಿಕೆದಾರರಿಗೆ ಹೊಸ ದಿಕ್ಸೂಚಿಯಾಗಲಿದೆ ಎಂದು ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಹೇಳಿದರು.

ಇವರ ಜತೆಗೆ, ಇಸ್ರೇಲ್‍ನ ದಕ್ಷಿಣ ಭಾರತದ ಕಾನ್ಸುಲ್ ಜನರಲ್ ಜೋನಾಥನ್ ಝಕಾಡ, ಬೆಂಗಳೂರಿನಲ್ಲಿರುವ ಫ್ರಾನ್ಸ್‍ನ ಕಾನ್ಸುಲ್ ಜನರಲ್ ಡಾ.ಮಾರಜೋರಿ ವಾನ್‍ಬೈಲಿಯೇಮ್, ಬೆಂಗಳೂರಿನಲ್ಲಿರುವ ಬ್ರಿಟನ್ ಕಾನ್ಸುಲೇಟ್‍ನ ಉಪ ಕಮೀಷನರ್ ಜೆರ್ಮಿ ಪಿಲ್ಮೋರೆ ಬೆಡ್‍ಫೋರ್ಡ್, ಬೆಂಗಳೂರಿನ ಡೆನ್ಮಾರ್ಕ್ ಕಾನ್ಸುಲ್ ಜನರಲ್ ಜೆಟೆ ಬೆಜರಮ್, ಬೆಂಗಳೂರಿನ ಜರ್ಮನಿ ಕಾನ್ಸುಲ್ ಜನರಲ್ ಅಶಿಮ್ ಬರ್ಕಾಟ್ ಮಾತನಾಡಿದರು. ಐಟಿ-ಬಿಟಿ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X