Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಳೆ ಶಿರಾ ಉಪಚುನಾವಣೆ ಮತ ಎಣಿಕೆ:...

ನಾಳೆ ಶಿರಾ ಉಪಚುನಾವಣೆ ಮತ ಎಣಿಕೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ- ಡಿಸಿ ಡಾ.ರಾಕೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Nov 2020 10:13 PM IST
share
ನಾಳೆ ಶಿರಾ ಉಪಚುನಾವಣೆ ಮತ ಎಣಿಕೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ- ಡಿಸಿ ಡಾ.ರಾಕೇಶ್ ಕುಮಾರ್

ತುಮಕೂರು, ನ.9: ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಯು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮತ ಎಣಿಕೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. 

ಇದಕ್ಕೂ ಮುನ್ನ ಬೆಳಗ್ಗೆ 7-30 ಗಂಟೆಗೆ ಚುನಾವಣೆ ವೀಕ್ಷಕರು ಹಾಗೂ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಏಜೆಂಟರುಗಳ ಸಮಕ್ಷಮದಲ್ಲಿ ಮತ ಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಗಳನ್ನು ತೆರೆಯಲಾಗುವುದು.

ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿಂದು ನಡೆಯುವ ಚುನಾವಣಾ ಮತ ಎಣಿಕೆಯ ಅಂತಿಮ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಹಾಗೂ ಚುನಾವಣಾಧಿಕಾರಿ ಡಾ.ಕೆ. ನಂದಿನಿದೇವಿ ಪರಿಶೀಲಿಸಿದರು.  

ಬೆಳಗ್ಗೆ 8 ಗಂಟೆಗೆ ಚುನಾವಣಾ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, 8 ಗಂಟೆಗೆ ಅಂಚೆ ಮತಪತ್ರ ಹಾಗೂ ಸರ್ವೀಸ್ ವೋಟ್‍ಗಳ ಎಣಿಕೆ ಆರಂಭವಾಗಲಿದೆ. 8-30ರಿಂದ ಇವಿಎಂ ಮತಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಮತ ಯಂತ್ರಗಳ(ಇವಿಎಂ) ಮತ ಎಣಿಕೆಯು 2 ಕೊಠಡಿಗಳಲ್ಲಿ ಒಟ್ಟು 14 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬ ಎಣಿಕೆ ಸೂಪರ್‍ವೈಸರ್, ಒಬ್ಬ ಎಣಿಕೆ ಸಹಾಯಕ ಹಾಗೂ ಒಬ್ಬ ಮೈಕ್ರೋ ಅಬ್ಸರ್ವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಅಂಚೆ ಮತಪತ್ರ ಹಾಗೂ ಸರ್ವೀಸ್ ವೋಟ್‍ಗಳ ಎಣಿಕೆಗಾಗಿ ಪ್ರತ್ಯೇಕ ಕೊಠಡಿಯಲ್ಲಿ 4 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. 330 ಮತಗಟ್ಟೆಗಳ ಮತ ಎಣಿಕೆಯು 24 ಸುತ್ತಿನಲ್ಲಿ ನಡೆಯಲಿದ್ದು, ಪ್ರತಿ ಟೇಬಲ್‍ಗೆ ಒಬ್ಬ ಅಭ್ಯರ್ಥಿಗೆ ಒಬ್ಬ ಏಜೆಂಟ್‍ನಂತೆ ಹಾಜರಿರಲು ಅವಕಾಶ ನೀಡಲಾಗುವುದು. ಈಗಾಗಲೇ ಮತ ಎಣಿಕೆ ಏಜೆಂಟರುಗಳಿಗೆ ಪಾಸ್ ವಿತರಿಸಲಾಗಿದೆ. ಪಾಸ್‍ಗಳನ್ನು ತಂದವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳಿಗೆ ಎಣಿಕಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಎಣಿಕಾ ಕೇಂದ್ರದ ಆವರಣದಲ್ಲಿ ಅಭ್ಯರ್ಥಿಗಳ ಕೊಠಡಿಯನ್ನು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಕ್ಯಾಮೆರಾ, ಮತ್ತಿತರೆ ವಸ್ತುಗಳನ್ನು ತರಲು ಅವಕಾಶವಿರುವುದಿಲ್ಲ. 

ಸುಸಜ್ಜಿತ ಮಾಧ್ಯಮ ಕೇಂದ್ರ ಸ್ಥಾಪನೆ: ಚುನಾವಣಾ ಮತ ಎಣಿಕೆ ಮಾಹಿತಿಯನ್ನು ಕಾಲಕಾಲಕ್ಕೆ ಮಾಧ್ಯಮಗಳಿಗೆ ಒದಗಿಸಲು ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ಮತ ಎಣಿಕೆ ಕೇಂದ್ರದ ಆವರಣದಲ್ಲಿ ತೆರೆಯಲಾಗಿದೆ. ಮತ ಎಣಿಕಾ ಫಲಿತಾಂಶವನ್ನು ವೀಕ್ಷಿಸಲು ಡಿಸ್‍ಪ್ಲೇ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಸುತ್ತಿನ ಮತ ಎಣಿಕೆಯ ಮಾಹಿತಿಯನ್ನು ಪ್ರದರ್ಶಿಸಲಾಗುವುದು. ಮಾಧ್ಯಮದವರು ಮಾಹಿತಿ ರವಾನೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮಾಧ್ಯಮ ಕೇಂದ್ರಕ್ಕೆ ಆಗಮಿಸುವ ಮಾಧ್ಯಮ ಪ್ರತಿನಿಧಿಗಳಿಗೆ ಮೊಬೈಲ್, ಲ್ಯಾಪ್‍ಟಾಪ್ ತರಲು ವಿನಾಯತಿ ನೀಡಲಾಗಿದೆ. 

ಮತ ಎಣಿಕಾ ಕೇಂದ್ರಕ್ಕೆ ಮತ ಎಣಿಕೆಗೂ ಮುನ್ನ ಮತ್ತು ಮತ ಎಣಿಕೆಯ ನಂತರ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ. ಮತ ಎಣಿಕಾ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. 

ಬಿಗಿ ಭದ್ರತೆ: ಮತ ಎಣಿಕೆ ಕಾರ್ಯವನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಮತ ಎಣಿಕಾ ಕೇಂದ್ರ ಹಾಗೂ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದಕ್ಕಾಗಿ 200ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳನ್ನು ಹಾಗೂ 2 ಕೆ.ಎಸ್.ಆರ್.ಪಿ. ಪ್ಲಟೂನ್‍ಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ತಿಳಿಸಿದ್ದಾರೆ. 

ಮದ್ಯ ಮಾರಾಟ ನಿಷೇಧ: ಮತ ಎಣಿಕೆ ದಿನದಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ತುಮಕೂರಿನ ಮತ ಎಣಿಕೆ ಕೇಂದ್ರದ 500 ಮೀಟರ್ ಸುತ್ತಳತೆಯಲ್ಲಿ ಜಾರಿಗೆ ಬರುವಂತೆ ಎಲ್ಲಾ ಮದ್ಯದಂಗಡಿಗಳನ್ನು(ಕೆಎಸ್‍ಬಿಸಿಎಲ್ ಡಿಪೋಗಳನ್ನು ಹೊರತುಪಡಿಸಿ) ಮುಚ್ಚಿಸಿ ಮದ್ಯ ಮಾರಾಟ, ಹಂಚಿಕೆ, ಶೇಖರಣೆಯನ್ನು ನಿಷೇಧಿಸಲಾಗಿದೆ. 

ನಿಷೇಧಾಜ್ಞೆ ಜಾರಿ: ಮತ ಎಣಿಕೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕಾ ಕೇಂದ್ರದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನವೆಂಬರ್ 10ರ ಬೆಳಗ್ಗೆ 6 ರಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X