ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಪಕ್ಷಕ್ಕೆ ರಾಜೀನಾಮೆ
ಕಾಸರಗೋಡು : ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ . ಎನ್ ಕೃಷ್ಣ ಭಟ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಿಗೆ ಕಳುಹಿಸಿ ಕೊಟ್ಟಿರುವುದಾಗಿ ಕೃಷ್ಣ ಭಟ್ ತಿಳಿಸಿದ್ದಾರೆ.
ಸಾಯಿರಾಂ ಗೋಪಾಲ ಕೃಷ್ಣ ಭಟ್ ರವರ ಪುತ್ರರಾಗಿರುವ ಕೃಷ್ಣ ಭಟ್ ಕಳೆದ ಮೂರು ಬಾರಿ ಗ್ರಾಮ ಪಂಚಾಯತ್ ಗೆ ಆಯ್ಕೆಯಾಗಿದ್ದರು . 2010 ರಲ್ಲಿ ಉಪಾಧ್ಯಕ್ಷ ರಾಗಿದ್ದ ಅವರು , 2015 ರಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ. ಪಕ್ಷದ ಕೆಲ ನಾಯಕರ ಹಾಗೂ ಯು ಡಿ ಎಫ್ ನ ಘಟಕ ಪಕ್ಷವಾದ ಮುಸ್ಲಿಂ ಲೀಗ್ ನ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷ ತ್ಯಜಿಸುವುದಾಗಿ ಅವರು ಸ್ಪಷ್ಟ ಪಡಿಸಿದ್ದಾರೆ.
2005 , 2010 ಮತ್ತು 2015 ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು . ಇದೀಗ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಘೋಷಣೆಯಾದ ಬೆನ್ನಿಗೆ ಕೃಷ್ಣ ಭಟ್ ಪಕ್ಷ ತ್ಯಜಿಸಿರುವುದು ಕಾಂಗ್ರೆಸ್ ಗೆ ಹಿನ್ನಡೆಯಾದಂತಾಗಿದೆ.