Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅನಿವಾಸಿ ಕನ್ನಡಿಗ ಉದ್ಯಮಿಯಿಂದ...

ಅನಿವಾಸಿ ಕನ್ನಡಿಗ ಉದ್ಯಮಿಯಿಂದ ಯುಎಇನಲ್ಲಿ 'Fidaaa.com' ಇ-ಶಾಪಿಂಗ್ ವೆಬ್‍ಸೈಟ್‍ಗೆ ಚಾಲನೆ

ಇಲ್ಲಿದೆ ವಿವರ

ವಾರ್ತಾಭಾರತಿವಾರ್ತಾಭಾರತಿ14 Nov 2020 6:36 PM IST
share
ಅನಿವಾಸಿ ಕನ್ನಡಿಗ ಉದ್ಯಮಿಯಿಂದ ಯುಎಇನಲ್ಲಿ Fidaaa.com ಇ-ಶಾಪಿಂಗ್ ವೆಬ್‍ಸೈಟ್‍ಗೆ ಚಾಲನೆ

ದುಬೈ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಉದ್ಯಮಿ ಅಹ್ಮದ್ ಬಾವಾ ಇತ್ತೀಚೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಜನತೆಗೆ ಶಾಪಿಂಗ್ ಸುಲಭಗೊಳಿಸುವ ದೃಷ್ಟಿಯಿಂದ 'Fidaaa.com' ಹೆಸರಿನ ಇ-ಶಾಪಿಂಗ್ ವೆಬ್‍ಸೈಟ್ ಆರಂಭಿಸಿದ್ದಾರೆ.

2020ರ ಸೆಪ್ಟೆಂಬರ್‍ನಲ್ಲಿ ಈ ವೆಬ್‍ಸೈಟ್ ಆರಂಭಿಸಲಾಗಿದ್ದು, ಖರೀದಿದಾರರಿಗೆ ಮುದ ನೀಡುವ ವೈವಿಧ್ಯಮಯ ಬ್ರಾಂಡ್‍ಗಳ ಉತ್ಪನ್ನಗಳು ಇಲ್ಲಿ ಮಾರಾಟಕ್ಕಿವೆ. ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಪ್ರಮುಖ ಬ್ರಾಂಡ್‍ಗಳಲ್ಲಿ ನಿಕಾನ್, ಗುಸ್ಸಿ, ಮರ್ಸಿಡೆಸ್ ಬೆನ್ಝ್, ಕ್ಯಾನನ್, ಸೋನಿ ಹಾಗೂ ಇತರ ದಿನಸಿ ಉತ್ಪನ್ನಗಳೂ ಇವೆ.

ವಾರ್ತಾಭಾರತಿ ಜತೆ ಮಾತನಾಡಿದ ಬಾವಾ, "ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವುದು ಮತ್ತು ಉದ್ಯೋಗ ನೀಡುವುದು ಈ ಸಾಹಸದ ಹಿಂದಿನ ಮುಖ್ಯ ಉದ್ದೇಶ" ಎಂದು ಹೇಳಿದರು.

"ಜಗತ್ತು ವೇಗವಾಗಿ ಬದಲಾಗುತ್ತಿದೆ. ಇದೇ ವೇಳೆ ವ್ಯಾಪಾರ ಪ್ರವೃತ್ತಿಗಳೂ ಬದಲಾಗುತ್ತಿವೆ. ವಿಶ್ವದಲ್ಲಿ ಇಂದು ಇಂಟರ್ ನೆಟ್ ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರತಿಯೊಂದೂ ಇಂಟರ್ ನೆಟ್ ನೆರವಿನಿಂದಲೇ ನಡೆಯುತ್ತದೆ. ಅದರಲ್ಲೂ ಮುಖ್ಯವಾಗಿ ಕೋವಿಡ್-19 ಸಾಂಕ್ರಾಮಿಕದ ಬಳಿಕ, ಮಾರುಕಟ್ಟೆ ಬಹುತೇಕ ಆನ್‍ಲೈನ್ ಪ್ಲಾಟ್‍ಫಾರಂಗಳತ್ತ ತಿರುಗಿದೆ ಎಂದು ಅವರು ಅಭಿಪ್ರಾಯಡುತ್ತಾರೆ.

ಕಳೆದ 15 ವರ್ಷಗಳಿಂದ ಯುಎಇನಲ್ಲಿ ವಾಸವಿರುವ ಅವರು ಈ ಆನ್‍ಲೈನ್ ಶಾಪಿಂಗ್ ವೆಬ್‍ಸೈಟ್ ಮೂಲಕ 50 ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಿದ್ದಾರೆ. ಈ ಪ್ರಮುಖ ಉದ್ದೇಶದಿಂದ 'Fidaaa.com' ಆರಂಭಿಸಿದ್ದು, ಸದ್ಯದಲ್ಲೇ ಅದನ್ನು ಸಾಧಿಸುವ ವಿಶ್ವಾಸವಿದೆ ಎಂದರು.

'Fidaaa.com' ಅಲ್ಲದೇ ಅಹ್ಮದ್ ಅವರು ನಿರ್ವಹಣಾ ಕಂಪನಿ, ಆಸ್ತಿ ವ್ಯವಸ್ಥಾಪನಾ ಕಂಪನಿ ಮತ್ತು ಟ್ರೇಡಿಂಗ್ ಕಂಪನಿ ಹೊಂದಿದ್ದಾರೆ. ಹಿದಾಯಹ್ ಫೌಂಡೇಷನ್‍ನ ಸಂಸ್ಥಾಪಕ ಸದಸ್ಯರೂ ಆಗಿರುವ ಅವರು 2017-18ರಲ್ಲಿ ಇದರ ದುಬೈ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

"ಫಿದಾದ ಮುಖ್ಯ ಉದ್ದೇಶವೆಂದರೆ ಯುಎಇ ಜನತೆಗೆ ಶಾಪಿಂಗ್ ಸುಲಭಗೊಳಿಸುವುದು. ಯುಎಇ ಗ್ರಾಹಕರನ್ನು ತಮ್ಮ ಉತ್ಪನ್ನಗಳ ಮೂಲಕ ತಲುಪಿಸಲು ಬಯಸುವ ಪೂರೈಕೆದಾರರಿಗೆ ಸಾಧನವನ್ನು ನಾವು ಒದಗಿಸಿಕೊಟ್ಟಿದ್ದೇವೆ. ಇದೇ ವೇಳೆ ಉತ್ಪನ್ನಗಳು ಸುಲಭವಾಗಿ ಹಾಗೂ ವೇಗವಾಗಿ ಪತ್ತೆ ಮಾಡಲು ಮತ್ತು ತ್ವರಿತ & ದಕ್ಷವಾಗಿ ಪೂರೈಸುವ ವಿಧಾನವನ್ನು ಕಲ್ಪಿಸಿಕೊಟ್ಟಿದ್ದೇವೆ" ಎಂದು 'Fidaaa.com' ಪ್ರಕಟಣೆ ಹೇಳಿದೆ.

ಯುಎಇ ಮತ್ತು ಇತರ ಸುತ್ತಮುತ್ತಲ ಪ್ರದೇಶಗಳ ಗ್ರಾಹಕರು ಉತ್ಪನ್ನಗಳನ್ನು ಖರೀದಿಸುತ್ತಿದ್ದು, ಸಾವಿರಾರು ಸಂದೇಶಗಳನ್ನು ಪೂರೈಕೆದಾರರ ಜತೆಗೆ ಈ ಪ್ಲಾಟ್‍ಫಾರಂ ಮೂಲಕ ಹಂಚಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X