Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಭಿವೃದ್ಧಿ ಬಗ್ಗೆ ರಮಾನಾಥ ರೈಯಿಂದ...

ಅಭಿವೃದ್ಧಿ ಬಗ್ಗೆ ರಮಾನಾಥ ರೈಯಿಂದ ಬಿಜೆಪಿ ತರಬೇತಿ ಪಡೆಯಲಿ: ಇಬ್ರಾಹೀಂ ನವಾಝ್

ವಾರ್ತಾಭಾರತಿವಾರ್ತಾಭಾರತಿ14 Nov 2020 8:51 PM IST
share
ಅಭಿವೃದ್ಧಿ ಬಗ್ಗೆ ರಮಾನಾಥ ರೈಯಿಂದ ಬಿಜೆಪಿ ತರಬೇತಿ ಪಡೆಯಲಿ: ಇಬ್ರಾಹೀಂ ನವಾಝ್

ಬಂಟ್ವಾಳ, ನ.14: ಮಾಜಿ ಸಚಿವ ಬಿ.ರಮಾನಾಥ ರೈ ಅವರ ಸಾಧನೆ ಮತ್ತು ಅಭಿವೃದ್ಧಿ ಕೆಲಸಗಳನ್ನು ಪ್ರಶ್ನಿಸುವ ಬಿಜೆಪಿಯವರು ಮೊದಲು ಅಭಿವೃದ್ಧಿ ಕೆಲಸ ಹೇಗೆ ಮಾಡಬೇಕೆಂಬುದನ್ನು ರಮಾನಾಥ ರೈ ಅವರಿಂದ ಹತ್ತು ವರ್ಷ ತರಬೇತಿ ಪಡೆಯುವುದು ಒಳಿತು ಎಂದು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ನವಾಝ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. 

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮಾನಾಥ ರೈ ಅವರು ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಜಿಲ್ಲೆಯ ಜನತೆಗೆ ತಿಳಿದಿದೆ. ಬಂಟ್ವಾಳ ಒಂದೇ ಕ್ಷೇತ್ರದಲ್ಲಿ 2 ಸಾವಿರ ಕೋಟಿ ರೂ.ಗೂ ಅಧಿಕ ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಆದರೂ ಅವರನ್ನು ಟೀಕೆ ಮಾಡುವ ಬಿಜಿಪಿಗರು ಈಗಿನ ಶಾಸಕರು ಮಾಡಿರುವ ಕಣ್ಣಿಗೆ ಕಾಣುವ ಅಭಿವೃದ್ಧಿ ಕಾರ್ಯಗಳು ಏನು ಎಂದು ಪ್ರಶ್ನಿಸಿದರು.

ಮಿನಿ ವಿಧಾನ ಸೌಧಾ, ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ, ಕೆಇಬಿ ಕಟ್ಟಡ, ನಿರೀಕ್ಷಣಾ ಮಂದಿರ, ನೂರು ಹಾಸಿಗೆಯ ಸುಸಜ್ಜಿತ ತಾಲೂಕು ಆಸ್ಪತ್ರೆ, ಪಾಲಿಟೆಕ್ನಿಕ್, ಅಗ್ನಿಶಾಮಕ ಠಾಣೆ, ಎಲ್ಲಾ ಗ್ರಾಮಗಳುಗೆ ದಿನದ ಇಪ್ಪತ್ತನಾಲ್ಕು ಗಂಟೆ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಪುರಸಭೆ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆ, ಪಂಜೆಮಂಗೆಶ್ವರಾಯ ಭವನ, ಅಂಬೇಡ್ಕರ್ ಭವನ, ಹಲವು ಕಿರು ಸೇತುವೆಗಳು, ಕಿಂಡಿ ಅಣೆಕಟ್ಟುಗಳು ಹಾಗೂ ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ರಮಾನಾಥ ರೈ ಅವರು ಬಂಟ್ವಾಳ ತಾಲೂಕಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಬಂಟ್ವಾಳ ಎಂದರೆ ರಮಾನಾಥ ರೈ, ರಮಾನಾಥ ರೈ ಎಂದರೆ ಬಂಟ್ವಾಳ ಆಗಿದೆ ಎಂದರು.

ಅಭಿವೃದ್ಧಿ ಮೂಲಕ ಜನಮಾನಸದಲ್ಲಿ ಉಳಿದ ರಮಾನಾಥ ರೈ ಅವರನ್ನು ಹಸಿ ಹಸಿ ಸುಳ್ಳುಗಳನ್ನು ಹೇಳುವ ಮೂಲಕ ಅಪಪ್ರಚಾರ ಮಾಡಿ ಸೋಲಿಸಲಾಗಿದೆ. ಚುನಾವಣೆಯಲ್ಲಿ ಸೋತರೂ ಅವರು ಜನಸಾಮಾನ್ಯರಿಗೆ ಸ್ಪಂದಿಸುವುದನ್ನು ಅವರು ನಿಲ್ಲಿಸಿಲ್ಲ. ಕೊರೋನ ಸಂದರ್ಭದಲ್ಲಿ ಅವರು ನಾಲ್ಕು ಕೋಟಿ ರೂ.ಗೂ ಅಧಿಕ ಮೊತ್ತದ ಆಹಾರ ಸಾಮಾಗ್ರಿಗಳ ಕಿಟ್ಟಗಳನ್ನು ಬಂಟ್ವಾಳ ಕ್ಷೇತ್ರದ ಜನರಿಗೆ ವಿತರಿಸಿದ್ದಾರೆ. ಅವರು ಸಚಿವರಾಗಿದ್ದ ಸಮಯದಲ್ಲಿ ಜಾರಿ ಮಾಡಿದ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಲೂ ನಡೆಯುತ್ತಿದೆ. ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ ಅವರ ಗೆಲುವು ನಿಶ್ಚಿತ ಎಂದು ಅವರು ನುಡಿದರು.

ರಮಾನಾಥ ರೈ ಅವರನ್ನು ಪದೇ ಪದೇ ವೈಯಕ್ತಿಕವಾಗಿ ನಿಂಧಿಸುತ್ತಿರುವುದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಅವರಿಗೆ ಶೋಭೆ ತರುವಂತದ್ದು ಅಲ್ಲ. ರಾಜಕೀಯವಾಗಿ ಅವರು ಆರೋಪಗಳನ್ನು ಮಾಡಲಿ. ಅದಕ್ಕೆ ನಾವು ಸಮರ್ಥವಾಗಿ ಉತ್ತರಿಸಲಿದ್ದೇವೆ. ರಮಾನಾಥ ರೈ ಮೇಲೆ ನೇರವಾಗಿ ಕೊಲೆ ಆರೋಪ ಹೊರಿಸಿದ ಹರಿಕೃಷ್ಣ ಬಂಟ್ವಾಳ ವಿರುದ್ಧ ಪೊಲೀಸ್ ಠಾಣೆಗಳಿಗೆ ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅವರನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಮಾತನಾಡಿ, ಪುರಸಭೆಯಲ್ಲಿ ಸೋಲಿನಿಂದ ಹತಾಶೆಗೊಂಡ ಬಿಜೆಪಿಯವರು ಯಾವುದೇ ಆಧಾರ ಇಲ್ಲದೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡುವ ಮೂಲಕ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯ ಹಿಂದಿನ ದಿನ ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರಿಗೆ ಬಿಜೆಪಿ‌ ನಾಯಕರು ವಿವಿಧ ಆಮಿಷಗಳನ್ನು ಒಡ್ಡಿ ತಮ್ಮ ಪರ ಮತ ಚಲಾಯಿಸಲು ಉತ್ತಡ ಹೇರಿದ್ದರು. ಅದಕ್ಕಾಗಿ ಅವರು ಆ ಸದಸ್ಯರ ಮನೆಗೆ ಆಗಾಗ ಭೇಟಿ ನೀಡಿದ್ದಾರೆ. ಸದಸ್ಯರು ಮನೆಯಲ್ಲಿ ಇಲ್ಲದಿದ್ದರಿಂದ ಸಂಜೆಯಿಂದ ರಾತ್ರಿವರೆಗೆ ಅವರ ಮನೆಯಲ್ಲಿ ಕಾದು ಕುಳಿತಿದ್ದರು. ಈ ಬಗ್ಗೆ ಕೂಡಾ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.

ಯುವ ಕಾಂಗ್ರೆಸ್ ಪ್ರಮುಖರಾದ ಆಲ್ವಿನ್ ಪ್ರಶಾಂತ್, ಸುರೇಶ್ ಪೂಜಾರಿ, ಶಫಿಕ್, ಪವನ್, ವಿನಯ ಕುಮಾರ್, ಸುಧೀಂದ್ರ ಶೆಟ್ಟಿ, ಅಕುಂಶ್ ಶೆಟ್ಟಿ, ವಿಶ್ವಜಿತ್, ಗಣೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X