Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು...

ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು 'ಮರಾಠಾ ಅಭಿವೃದ್ಧಿ ಪ್ರಾಧಿಕಾರ' ರಚನೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ15 Nov 2020 9:49 PM IST
share

ಬೆಂಗಳೂರು, ನ. 15: ಬೀದರ್ ಜಿಲ್ಲೆಯ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರು `ಮರಾಠಾ ಅಭಿವೃದ್ಧಿ ಪ್ರಾಧಿಕಾರ' ರಚನೆಗೆ ಮುಂದಾಗಿದ್ದಾರೆಂಬ ಆರೋಪ ಕೇಳಿಬಂದಿದೆ.

ಇದರ ಜೊತೆಗೆ ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪದೇ ಪದೇ ಕನ್ನಡಿಗರ ವಿರುದ್ಧ `ಮರಾಠಾ' ಸಮುದಾಯದ ಭಾವನೆಗಳನ್ನು ಕೆರಳಿಸುವ ಮೂಲಕ ತಮ್ಮ ವೈಯಕ್ತಿಕ ಹಿತಕ್ಕಾಗಿ ಸಂಘರ್ಷ ಸೃಷ್ಟಿಸಲು ವಿಫಲಯತ್ನ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬಗ್ಗುಬಡಿಯಲು ರಾಜ್ಯ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಆದರೆ, ರಾಜ್ಯ ಸರಕಾರ `ಮರಾಠಾ ಅಭಿವೃದ್ದಿ ಪ್ರಾಧಿಕಾರ' ರಚನೆಗೆ ಮುಂದಾಗಿರುವುದನ್ನು ಮರಾಠಾ ಸಮುದಾಯ ಸ್ವಾಗತಿಸಿದೆ. `ರಾಜ್ಯದಲ್ಲಿ ಮೂವತ್ತರಿಂದ ನಲವತ್ತು ಲಕ್ಷದಷ್ಟು ಮರಾಠಾ ಸಮುದಾಯದವರಿದ್ದು, ಈ ಜನಾಂಗದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲಾಗಿದೆ. ಮರಾಠಿ ಭಾಷೆಗೂ ಪ್ರಾಧಿಕಾರಕ್ಕೂ ಸಂಬಂಧವಿಲ್ಲ. ರಾಜ್ಯದಲ್ಲಿ ಮರಾಠಿ ಭಾಷೆ ಮಾತನಾಡುವವರೆಲ್ಲರೂ ಮರಾಠಾ ಸಮುದಾಯಕ್ಕೆ ಸೇರಿದವರಲ್ಲ' ಎಂದು ಸ್ಪಷ್ಟಪಡಿಸಲಾಗಿದೆ.

`ರಾಜ್ಯದಲ್ಲಿನ ಎಲ್ಲ ಮರಾಠರು ಮರಾಠಿ ಭಾಷೆ ಮಾತನಾಡುವುದಿಲ್ಲ. ಬಹುತೇಕ ಮಂದಿ ಕನ್ನಡ ಭಾಷೆ ಮಾತನಾಡುವವರು ಇದ್ದಾರೆ. ಬೆಳಗಾವಿ, ಬೀದರ್, ವಿಜಯಪುರ ಮಡಿಕೇರಿ, ಮೈಸೂರು ಸೇರಿದಂತೆ ಹಲವು ಕಡೆಗೆ ಮರಾಠಿ ಮಾತನಾಡುವವರು ಇದ್ದಾರೆ. ಇವರೆಲ್ಲರೂ ಒಂದೇ ಸಮುದಾಯಕ್ಕೆ ಸೇರಿಲ್ಲ. ರಾಜ್ಯದಲ್ಲಿರುವ ಮರಾಠಾ ಸಮುದಾಯವನ್ನು ಪ್ರವರ್ಗ 2 `ಎ'ಗೆ ಸೇರಿಸಬೇಕೆಂಬ ಬೇಡಿಕೆ ಇದೆ. ಸಮುದಾಯದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಉನ್ನತ್ತಿಗಾಗಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಅದೇ ರೀತಿಯಲ್ಲಿ ಮರಾಠಾ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2 `ಎ'ಗೆ ಸೇರಿಸಲು ಸರಕಾರ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಮರಾಠಾ ಸಮುದಾಯವನ್ನು ಎಂಇಎಸ್‍ನೊಂದಿಗೆ ತಳುಕು ಹಾಕಬೇಡಿ' ಎಂದು ಸಮುದಾಯ ಯುವ ಮುಖಂಡ ಚಂದ್ರಶೇಖರ್ ಎಸ್.ಚಿನಕೇಕರ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X