Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆ...

ಭಾರತದ ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆ 'ದಮನಕಾರಿ': ಐಸಿಜೆ ಕಳವಳ

ವಾರ್ತಾಭಾರತಿವಾರ್ತಾಭಾರತಿ16 Nov 2020 10:53 AM IST
share
ಭಾರತದ ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆ ದಮನಕಾರಿ: ಐಸಿಜೆ ಕಳವಳ

ಹೊಸದಿಲ್ಲಿ: ಭಾರತದ ವಿದೇಶಿ ದೇಣಿಗೆ (ನಿಯಂತ್ರಣ) ಕಾಯಿದೆಯ ಕುರಿತು ತೀವ್ರ ಆತಂಕವನ್ನು ಇಂಟರ್ ನ್ಯಾಷನಲ್ ಕಮಿಷನ್ ಆಫ್ ಜೂರಿಸ್ಟ್ಸ್(ಐಸಿಜೆ) ವ್ಯಕ್ತಪಡಿಸಿದೆ. "ಈ ಕಾನೂನು  ಸರಕಾರೇತರ ಸಂಸ್ಥೆಗಳ ಮಹತ್ವದ ಕೆಲಸ ಕಾರ್ಯಗಳಿಗೆ ಅಕ್ರಮವಾಗಿ ಅಡ್ಡಿಯುಂಟು ಮಾಡುತ್ತಿದೆ,'' ಎಂದು ಸಂಸ್ಥೆ ಬಿಡುಗಡೆಗೊಳಿಸಿದ ವರದಿಯಲ್ಲಿ ಹೇಳಲಾಗಿದೆ.

ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರಕಾರದ ಅವಧಿಯಲ್ಲಿ ಈ ನಿರ್ದಿಷ್ಟ ಕಾಯಿದೆಯನ್ನು ಹಲವಾರು ಬಾರಿ ಬಿಗಿಗೊಳಿಸಿದ ಪರಿಣಾಮವಾಗಿ ತಮ್ಮ ಕಾರ್ಯನಿರ್ವಹಣೆಗಾಗಿ ವಿದೇಶಿ ನಿಧಿಯನ್ನು ಪಡೆಯುವ ಎನ್‍ಜಿಒಗಳಿಗೆ ಕಾರ್ಯಾಚರಿಸುವುದು ಕಠಿಣವಾಗಿ ಬಿಟ್ಟಿದೆ. "ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯ ಜಾರಿಯು ಮಾನವ ಹಕ್ಕುಗಳ ಹೋರಾಟಗಾರರಿಗೆ ಹಾಗೂ ಇತರ ನಾಗರಿಕ ಸಮಾಜದ ಸಂಘಟನೆಗಳಿಗೆ ತಮ್ಮ ಮಹತ್ವದ ಕೆಲಸ ಕಾರ್ಯಗಳನ್ನು ಕೈಗೊಳ್ಳಲು ಅನಗತ್ಯ ಅಡೆತಡೆಗಳನ್ನು ಸೃಷ್ಟಿಸುತ್ತಿದೆ,'' ಎಂದು ವರದಿಯಲ್ಲಿ ವಿವರಿಸಲಾಗಿದೆ.

"ಎನ್‍ಜಿಒಗಳು ವಿದೇಶಿ ನಿಧಿಯನ್ನು ಪಡೆಯುವುದನ್ನು ನಿರ್ಬಂಧಿಸುವ ಮೂಲಕ ಭಾರತ ಸರಕಾರವು ಈ ಕಾಯಿದೆಯನ್ನು ತನ್ನನ್ನು ಟೀಕಿಸುವವರ ದನಿಗಳನ್ನು  ಹತ್ತಿಕ್ಕಲು ಬಳಸುತ್ತಿದೆ,'' ಎಂದು ಐಸಿಜೆಯ ಲೀಗಲ್ ಮತ್ತು ಪಾಲಿಸಿ ನಿರ್ದೇಶಕ ಇಯಾನ್  ಸೀಡಮ್ರ್ಯಾನ್ ಹೇಳಿದ್ದಾರೆ.

ಭಾರತದ "ದಮನಕಾರಿ ವಿದೇಶಿ ನಿಧಿ ದೇಣಿಗೆ ಕಾಯಿದೆ ಎನ್‍ಜಿಒಗಳನ್ನು ಹತ್ತಿಕ್ಕುತ್ತಿರುವುದರಿಂದ ಅದನ್ನು ಪರಿಷ್ಕರಿಸಬೇಕು ಇಲ್ಲವೇ ರದ್ದುಗೊಳಿಸಬೇಕು,'' ಎಂದು ಐಸಿಜೆ  ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಹಲವಾರು ಖ್ಯಾತ ಎನ್‍ಜಿಒಗಳಾದ ಆ್ಯಮ್ನೆಸ್ಟಿ ಇಂಟರ್ ನ್ಯಾಷನಲ್, ಲಾಯರ್ಸ್ ಕಲೆಕ್ಟಿವ್, ಗ್ರೀನ್‍ಪೀಸ್ ಇಂಡಿಯಾ, ಪೀಪಲ್ಸ್ ವಾಚ್, ಕಂಪ್ಯಾಶನ್ ಇಂಟರ್ ನ್ಯಾಷನಲ್ ಹಾಗೂ ಪಬ್ಲಿಕ್ ಹೆಲ್ತ್ ಫೌಂಡೇಶನ್  ಆಫ್ ಇಂಡಿಯಾ ಹಲವಾರು ಬಾರಿ ಸರಕಾರದ ನೀತಿಯಿಂದಾಗಿ ಸಾಕಷ್ಟು ಕಷ್ಟ ಅನುಭವಿಸಿವೆಯಲ್ಲದೆ ಆ್ಯಮ್ನೆಸ್ಟಿ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಸರಕಾರ ಮುಟ್ಟುಗೋಲು ಹಾಕಿದ ನಂತರ ಅದು ಇತ್ತೀಚೆಗೆ ತನ್ನ ಭಾರತದ ಕಚೇರಿಗಳನ್ನು ಮುಚ್ಚುವ ಅನಿವಾರ್ಯತೆಯನ್ನೂ ಎದುರಿಸಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X