ಆನ್ಲೈನ್ ಗೇಮ್ ಗಳಿಗೆ ಕಡಿವಾಣ ಹಾಕಿ: ದಿನೇಶ್ ಗುಂಡೂರಾವ್

ಬೆಂಗಳೂರು, ನ.16: ರಾಜ್ಯ ಸರಕಾರ ಆನ್ಲೈನ್ ಗೇಮ್ ಗಳಿಗೆ ಕಡಿವಾಣ ಹಾಕಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ಸೋಮವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ರಮ್ಮಿ, ಪೋಕರ್ ಸೇರಿ ಆನ್ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ನಾನೂ ಕೂಡ ಹಲವು ಯುವಕರು ಈ ಆನ್ಲೈನ್ ಜೂಜಿನಲ್ಲಿ ವ್ಯಸನರಾಗಿರುವುದನ್ನು ಗಮನಿಸಿದ್ದೇನೆ. ಇದರಿಂದ ಎಷ್ಟೋ ಕುಟುಂಬಗಳು ನಾಶವಾಗಿ ಹೋಗಿದೆ. ಹಾಗಾಗಿ ಇಂತಹ ಗೇಮ್ಗಳ ಮೇಲೆ ಕಡಿವಾಣ ಬೀಳಬೇಕು ಎಂದು ಒತ್ತಾಯಿಸಿದ್ದಾರೆ.
Next Story





