Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಬಿಜೆಪಿ ಪ್ರಚೋದಿತ ವಿಭಜನಕಾರಿ...

‘ಬಿಜೆಪಿ ಪ್ರಚೋದಿತ ವಿಭಜನಕಾರಿ ರಾಷ್ಟ್ರೀಯತೆ' ಬಗ್ಗೆ ಆತ್ಮಕತೆಯಲ್ಲಿ ಕಳವಳ ವ್ಯಕ್ತಪಡಿಸಿದ ಒಬಾಮ

‘ಭಾರತದ ಆರ್ಥಿಕತೆಯ ವರ್ಗಾಂತರದ ಮುಖ್ಯ ವಾಸ್ತುಶಿಲ್ಪಿ’ ಮನಮೋಹನ್ ಸಿಂಗ್ ಎಂದು ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ16 Nov 2020 9:43 PM IST
share
‘ಬಿಜೆಪಿ ಪ್ರಚೋದಿತ ವಿಭಜನಕಾರಿ ರಾಷ್ಟ್ರೀಯತೆ ಬಗ್ಗೆ ಆತ್ಮಕತೆಯಲ್ಲಿ ಕಳವಳ ವ್ಯಕ್ತಪಡಿಸಿದ ಒಬಾಮ

ಹೊಸದಿಲ್ಲಿ: 'ಎ ಪ್ರಾಮಿಸ್ಡ್ ಲ್ಯಾಂಡ್' ಆತ್ಮಚರಿತ್ರೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಹುಲ್‍ ಗಾಂಧಿಯವರ ಬಗ್ಗೆ ಉಲ್ಲೇಖಿಸಿರುವುದು ಕಳೆದ ವಾರ ಮಾಧ್ಯಮಗಳಲ್ಲಿ ವಿಸ್ತೃತವಾಗಿ ವರದಿಯಾಗಿತ್ತು. ಇದಕ್ಕೆ ಕಾಂಗ್ರೆಸ್ ಪರ ಇರುವವರು ಹಾಗೂ ವಿರೋಧಿಗಳು ಹೀಗೆ ಎರಡೂ ಕಡೆಗಳಿಂದ ವ್ಯಾಪಕ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು. ರಾಹುಲ್ ಬಗ್ಗೆ ಒಬಾಮ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಆಡಳಿತಾರೂಢ ಬಿಜೆಪಿ ಬೆಂಬಲಿಗರು ವ್ಯಾಪಕವಾಗಿ ಬಿಂಬಿಸಿದ್ದರು.

ಆದಾಗ್ಯೂ ಶ್ವೇತಭವನದ ತಮ್ಮ ಹಾದಿಯ ಬಗ್ಗೆ, 2008-2012ರ ಅವಧಿಯ ಬಗ್ಗೆ ವಿವರಗಳನ್ನು ಒಳಗೊಂಡ ಕೃತಿಯಲ್ಲಿ ಒಬಾಮ ಭಾರತ ಭೇಟಿ ಬಗೆಗೂ ವಿವರಿಸಿದ್ದಾರೆ. ಈ ಕೃತಿಯಲ್ಲಿ ಅವರು ‘ಬಿಜೆಪಿಯಿಂದ ಪ್ರಚೋದಿತವಾಗಿರುವ ವಿಭಜನಕಾರಿ ರಾಷ್ಟ್ರೀಯತೆ’ ಬಗ್ಗೆ ಅಪಾರ ಕಳವಳವನ್ನೂ ವ್ಯಕ್ತಪಡಿಸಿದ್ದಾರೆ.

ಹಿಂಸೆ, ದುರಾಸೆ, ಭ್ರಷ್ಟಾಚಾರ, ರಾಷ್ಟ್ರೀಯತೆ, ವರ್ಣಬೇಧ ನೀತಿ ಮತ್ತು ಧಾರ್ಮಿಕ ಅಸಹಿಷ್ಣುತೆಯಂತಹ ಪ್ರಚೋದನೆಗಳು ಪ್ರಜಾಪ್ರಭುತ್ವದಲ್ಲಿ ಕಾಯಂ ಆಗಿ ಅಡಕವಾಗಿರುತ್ತವೆಯೇ ಎಂಬ ಬಗ್ಗೆಯೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಭಾರತದ ಆರ್ಥಿಕತೆ 1990ರ ದಶಕದಲ್ಲಿ ಮಾರುಕಟ್ಟೆ ಆಧರಿತ ಆರ್ಥಿಕತೆಯಾಗಿ ವರ್ಗಾಂತರ ಹೊಂದಿದ ಕಾಲಘಟ್ಟವನ್ನು ಕೂಡಾ ಒಬಾಮ ತಮ್ಮ ಕೃತಿಯಲ್ಲಿ ಉಲ್ಲೇಖಿಸಿದ್ದಾರೆ. ಭಾರತದ ಗಗನಮುಖಿ ಅಭಿವೃದ್ಧಿ, ತಂತ್ರಜ್ಞಾನದ ಅಬ್ಬರ, ಹೆಚ್ಚುತ್ತಿರುವ ಮಧ್ಯಮವರ್ಗವನ್ನು ವಿವರಿಸುತ್ತಾ, "ಭಾರತದ ಆರ್ಥಿಕತೆಯ ವರ್ಗಾಂತರದ ಮುಖ್ಯ ವಾಸ್ತುಶಿಲ್ಪಿಯಾಗಿ, ಪ್ರಧಾನಿ ಮನಮೋಹನ್ ಸಿಂಗ್ ಅವರು, ಈ ಪ್ರಗತಿಯ ಲಾಂಛನವಾಗಿ ಗುರುತಿಸಲ್ಪಟ್ಟರು. ಪುಟ್ಟ, ಹಿಂಸೆಗೊಳಗಾದ ಸಿಖ್ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅವರು, ಆ ನೆಲದ ಅತ್ಯುನ್ನತ ಅಧಿಕಾರದ ಪದವಿಗೆ ಏರಿದರು. ಜನಸಾಮಾನ್ಯರ ಮೇಲೆ ಪ್ರಭಾವ ಬೀರುವ ಮೂಲಕ ಮಾತ್ರವಲ್ಲದೇ, ಅವರ ಜೀವನ ಮಟ್ಟದಲ್ಲಿ ಸುಧಾರಣೆಯನ್ನು ತರುವ ಮೂಲಕ ಹಾಗೂ ಭ್ರಷ್ಟಾಚಾರಿ ಅಲ್ಲ ಎಂಬ ಉತ್ತಮ ಘನತೆಯನ್ನು ಉಳಿಸಿಕೊಂಡ ಅವರು ಸ್ವಯಂಪ್ರಭೆಯ ತಂತ್ರಜ್ಞರಾಗಿ ಜನತೆಯ ವಿಶ್ವಾಸ ಗಳಿಸಿದರು" ಎಂದು ಬಣ್ಣಿಸಿದ್ದಾರೆ.

ಭಾರತದ ರಾಜಕೀಯ ಇಂದಿಗೂ ಧರ್ಮ, ವಂಶ ಮತ್ತು ಜಾತಿಯ ಸುತ್ತ ತಿರುಗುತ್ತಿದೆ. ಸಿಂಗ್ ಪ್ರಧಾನಿ ಹುದ್ದೆಗೆ ಏರಿದ್ದು, ದೇಶದ ಪ್ರಗತಿಯಲ್ಲಿ ಹೊಸಶಕೆಯ ಆರಂಭಕ್ಕೆ ಕಾರಣವಾಗಿ, ಪಂಥೀಯ ವಿಭಜನೆಯನ್ನು ಮೀರುವಂತೆ ಆದದ್ದು ಅತ್ಯಂತ ಪ್ರಮುಖವಾದದ್ದು ಎಂದು ಒಬಾಮ ಅಭಿಪ್ರಾಯಪಟ್ಟಿದ್ದಾರೆ.

“ಒಬ್ಬರಿಗಿಂತ ಹೆಚ್ಚು ರಾಜಕೀಯ ವಿಶ್ಲೇಷಕರ ನಂಬಿಕೆಯಂತೆ ಅವರು (ಸೋನಿಯಾಗಾಂಧಿ) ರಾಷ್ಟ್ರ ರಾಜಕಾರಣದ ಹಿನ್ನೆಲೆ ಇಲ್ಲದ ಒಬ್ಬ ಸಿಖ್ ಸಮುದಾಯದ ಹಿರಿಯರೊಬ್ಬರನ್ನು ನಿರ್ದಿಷ್ಟವಾಗಿ ಆಯ್ಕೆ ಮಾಡಲು ಕಾರಣವೆಂದರೆ ಮನಮೋಹನ್ ಸಿಂಗ್ ಎಂದೂ ಕಾಂಗ್ರೆಸ್ ಪಕ್ಷದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ತಾನು ಸಜ್ಜುಗೊಳಿಸುತ್ತಿರುವ 40 ವರ್ಷ ವಯಸ್ಸಿನ ಮಗ ರಾಹುಲ್‍ ಗಾಂಧಿಗೆ ಅಪಾಯಕಾರಿ ಆಗಲು ಸಾಧ್ಯವಿಲ್ಲ ಎನ್ನುವುದು" ಎಂದು ಒಬಾಮ ಸ್ಪಷ್ಟಪಡಿಸಿದ್ದಾರೆ.

ಸಿಂಗ್ ಅವರು ಅಧಿಕಾರದಿಂದ ಇಳಿದಾಗ, ಬಿಜೆಪಿಯಿಂದ ಪ್ರಚೋದಿತವಾದ ವಿಭಜನಕಾರಿ ರಾಷ್ಟ್ರೀಯತೆಯನ್ನು ಮೀರಿಸುವ ರೀತಿಯಲ್ಲಿ ಅಧಿಕಾರ ಯಶಸ್ವಿಯಾಗಿ ರಾಹುಲ್‍ ಗಾಂಧಿಗೆ ಹಸ್ತಾಂತರಿಸಲಾಗುತ್ತದೆಯೇ, ಸೋನಿಯಾ ಪೋಷಿಸಿದ್ದ ಒತ್ತಾಸೆಗಳು ಈಡೇರುತ್ತದೆಯೇ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಬಲ್ಯ ಉಳಿಯುತ್ತದೆಯೇ ಎಂಬ ಕುತೂಹಲ ತನಗೆ ಇತ್ತು ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X