Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಪತ್ ರಾಜ್ ರನ್ನು ಟಾರ್ಗೆಟ್...

ಸಂಪತ್ ರಾಜ್ ರನ್ನು ಟಾರ್ಗೆಟ್ ಮಾಡುತ್ತಿರುವುದು ನಿಜ: ಡಿ.ಕೆ.ಶಿವಕುಮಾರ್

''ನಾನು ಆರಂಭದಿಂದಲೂ ಅಖಂಡ ಪರವಾಗಿದ್ದೇನೆ''

ವಾರ್ತಾಭಾರತಿವಾರ್ತಾಭಾರತಿ17 Nov 2020 5:36 PM IST
share
ಸಂಪತ್ ರಾಜ್ ರನ್ನು ಟಾರ್ಗೆಟ್ ಮಾಡುತ್ತಿರುವುದು ನಿಜ: ಡಿ.ಕೆ.ಶಿವಕುಮಾರ್

ಬೆಂಗಳೂರು, ನ.17: ಸಂಪತ್ ರಾಜ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು. ಸರಕಾರ ಕಾನೂನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ. ನಾನು ಆರಂಭದಿಂದಲೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಪರವಾಗಿದ್ದೇನೆ. ಬೇರೆಯವರ ವೈಯಕ್ತಿಕ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಕುರಿತು ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸಮೂರ್ತಿ ಈವರೆಗೂ ನನ್ನ ಬಳಿ ಬಂದು ಮಾತನಾಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಅದರದೇ ಆದ ಪ್ರಕ್ರಿಯೆ ನಡೆಯುತ್ತಿದೆ. ಕೇವಲ ಒಬ್ಬರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದರು.

ನಾನು ನ್ಯಾಯಬದ್ಧವಾಗಿ, ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವ ಎಲ್ಲರ ಪರವಾಗಿದ್ದೇನೆ. ನಾನು ಅಖಂಡ ಶ್ರೀನಿವಾಸಮೂರ್ತಿ ಅವರ ಪರವಾಗಿಲ್ಲ ಎಂದು ಯಾರು ಹೇಳಿದರು? ಈ ಪ್ರಕರಣ ನಡೆದ ಕ್ಷಣದಿಂದಲೂ ಅವರ ಜತೆ ಇದ್ದೇವೆ. ನಾನು ನಮ್ಮ ನಾಯಕರು ಅವರ ಮನೆಗೆ ಹೋಗಿದ್ದೇವೆ. ಅವರ ಜತೆ ಚರ್ಚೆ ಮಾಡಿದ್ದೇವೆ. ಪೊಲೀಸರ ವೈಫಲ್ಯ ತೋರಿಸಿದ್ದೇವೆ. ಪೊಲೀಸರು ಬಿಜೆಪಿಯ ಒತ್ತಡಕ್ಕೆ ಮಣಿಯಬಾರದು ಅಂತಲೂ ಹೇಳಿದ್ದೇವೆ ಎಂದು ಅವರು ಹೇಳಿದರು.

ಅಖಂಡ ಶ್ರೀನಿವಾಸಮೂರ್ತಿ ನಿಮ್ಮ ಬಳಿ (ಮಾಧ್ಯಮಗಳ) ಮಾತನಾಡುವುದಕ್ಕಿಂತ ನನ್ನ ಬಳಿ ಬಂದು ಮಾತನಾಡಲಿ. ಯಾರದೇ ವೈಯಕ್ತಿಕ ಅಭಿಪ್ರಾಯ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದು ಬಿಜೆಪಿಯವರ ಕುತಂತ್ರ. ಕಾಂಗ್ರೆಸ್‍ಗೆ ಕೆಟ್ಟ ಹೆಸರು ತರಲು ಈ ಪ್ರಯತ್ನ ಮಾಡುತ್ತಿದೆ. ಸಂಪತ್ ರಾಜ್ ಅವರನ್ನು ಟಾರ್ಗೆಟ್ ಮಾಡುತ್ತಿರುವುದು ನಿಜ ಎಂದು ಶಿವಕುಮಾರ್ ಹೇಳಿದರು.

ಇದರಲ್ಲಿ ಮುಚ್ಚಿಡುವುದೇನಿಲ್ಲ. ಅವರ ವಿರುದ್ಧದ ಆರೋಪ ಪಟ್ಟಿ ನೋಡಿದ್ದೇನೆ. ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡಬೇಕು ಅಂತಾ ಈ ರೀತಿ ಮಾಡುತ್ತಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ಹೆಚ್ಚಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ. ಅವರಿಗೆ ಆರೋಗ್ಯ ಸಮಸ್ಯೆ ಇತ್ತು. ಈಗ ಅವರು ಸಿಕ್ಕಿದ್ದಾರಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

ಭತ್ತಕ್ಕೆ ಕನಿಷ್ಠ 500 ರೂ.ಹೆಚ್ಚುವರಿ ಬೆಂಬಲ ಬೆಲೆ ಕೊಡಲಿ: ಭತ್ತದ ಬೆಲೆ ಕುಸಿತದ ಬಗ್ಗೆ ನಾವು ಚರ್ಚೆ ನಡೆಸುತ್ತಿದ್ದೇವೆ. 900 ರೂಪಾಯಿಗೆ ಕುಸಿದಿದ್ದರೂ ಸರಕಾರ ಆ ಬಗ್ಗೆ ಗಮನ ಹರಿಸುತ್ತಿಲ್ಲ. ಹೀಗಾಗಿ  ರೈತರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಭತ್ತ ಖರೀದಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಈ ಸಮಯದಲ್ಲಿ ಸರಕಾರ ಭತ್ತಕ್ಕೆ ಹೆಚ್ಚುವರಿಯಾಗಿ ಕನಿಷ್ಠ 500 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಸರಕಾರದ ಜವಾಬ್ದಾರಿ: ಸರಕಾರ ಸಾಕಷ್ಟು ವಿಮರ್ಶೆ ಮಾಡಿ ಕಾಲೇಜು ಆರಂಭದ ತೀರ್ಮಾನ ಕೈಗೊಂಡಿದೆ. ಸರಕಾರಕ್ಕೆ ನಮ್ಮ ಸಲಹೆ ನೀಡಿದ್ದೇವೆ. ಅವರು ಏನು ಮಾಡುತ್ತಾರೋ ಮಾಡಲಿ. ಶಾಲೆ ಇರಲಿ ಅಥವಾ ಕಾಲೇಜ್ ಇರಲಿ ಪೋಷಕರಿಗೆ ನೆಮ್ಮದಿ, ಮಾರ್ಗದರ್ಶನ ನೀಡಬೇಕಿರುವುದು ಸರಕಾರದ ಕರ್ತವ್ಯ ಎಂದು ಶಿವಕುಮಾರ್ ತಿಳಿಸಿದರು.

ಮರಾಠ ಪ್ರಾಧಿಕಾರ ವಿಚಾರವಾಗಿ ಪಕ್ಷದಲ್ಲಿ ಚರ್ಚೆ ನಡೆಸಬೇಕಿದೆ. ಇನ್ನು ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಾಗುವುದಿದೆ. ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯೂ ಬರುತ್ತಿದ್ದು, ನಾವು ಪ್ರಮುಖವಾಗಿ ರೈತರ ಸಮಸ್ಯೆ ಪರಿಹಾರ ಹಾಗೂ ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X