Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ಪಂದ್ಯಗಳಿಗೂ ಟೀಮ್ ಇಂಡಿಯಾದ...

ಟೆಸ್ಟ್ ಪಂದ್ಯಗಳಿಗೂ ಟೀಮ್ ಇಂಡಿಯಾದ ತಯಾರಿ

ವಾರ್ತಾಭಾರತಿವಾರ್ತಾಭಾರತಿ17 Nov 2020 11:14 PM IST
share
ಟೆಸ್ಟ್ ಪಂದ್ಯಗಳಿಗೂ ಟೀಮ್ ಇಂಡಿಯಾದ ತಯಾರಿ

ಸಿಡ್ನಿ, ನ.17: ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯ ಬಳಿಕ ಆಸ್ಟ್ರೇಲಿಯದಲ್ಲಿ ಟೀಮ್ ಇಂಡಿಯಾಕ್ಕೆ ಟೆಸ್ಟ್ ಸರಣಿ ಇದೆ. ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡದ ಆಟಗಾರರು ಮುಂದಿನ ತಿಂಗಳು ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಪಂದ್ಯಗಳ ತಯಾರಿ ಕಡೆಗೂ ಗಮನ ಹರಿಸಿದ್ದಾರೆ.

ಮಂಗಳವಾರ ನಡೆದ ಅಭ್ಯಾಸದಲ್ಲಿ ಎಲ್ಲಾ ಮೂರು ತಂಡಗಳ ಉನ್ನತ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳು ಭಾಗವಹಿಸಿದ್ದರು.

ಹಿರಿಯ ವೇಗಿ ಮುಹಮ್ಮದ್ ಶಮಿ ಮತ್ತು ಯುವ ವೇಗಿ ಮುಹಮ್ಮದ್ ಸಿರಾಜ್ ತನ್ನ ನೆಟ್ ಅಭ್ಯಾಸದಲ್ಲಿ ತೊಡಗಿರುವ ಚಿತ್ರವನ್ನು ನಾಯಕ ಕೊಹ್ಲಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘‘ಲವ್ ಟೆಸ್ಟ್ ಕ್ರಿಕೆಟ್ ಸೆಷನ್ಸ್’’ ಎಂದು ಕೊಹ್ಲಿಯ ಟ್ವೀಟ್ ಮಾಡಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕೊಹ್ಲಿ ಭಾರತಕ್ಕೆ ಹಿಂದಿರುಗುವ ಮೊದಲು ಆಡಿಲೇಡ್‌ನಲ್ಲಿ ಡಿಸೆಂಬರ್ 17ರಿಂದ ಪ್ರಾರಂಭವಾಗುವ ಆರಂಭಿಕ ಡೇ-ನೈಟ್ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಆಟಗಾರರು ಐಪಿಎಲ್ ಕಾರ್ಯನಿರತವಾಗಿದ್ದರಿಂದಾಗಿ ಟೆಸ್ಟ್ ಕ್ರಿಕೆಟಿಗರು ಮತ್ತೆ ಹೊಂದಿಕೊಳ್ಳಬೇಕಾಗಿದೆ. ಓಪನರ್ ಕೆ.ಎಲ್.ರಾಹುಲ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಅವರು ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ನಡೆಸಿದ್ದಾರೆ.

ಶಮಿ ಮತ್ತು ಸಿರಾಜ್ ಜೊತೆಗೂಡಿ ಬೌಲಿಂಗ್ ಮಾಡುತ್ತಿರುವ ವೀಡಿಯೊವನ್ನು ಬಿಸಿಸಿಐ ಪೋಸ್ಟ್ ಮಾಡಿದೆ.

ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ 14 ಪಂದ್ಯಗಳಿಂದ 20 ವಿಕೆಟ್ ಪಡೆದ 30ರ ಹರೆಯದ ಶಮಿ ಟೆಸ್ಟ್, ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಸರಣಿಯಲ್ಲಿ ಆಡಲಿದ್ದಾರೆ.

ಆಡಿಲೇಡ್‌ನಲ್ಲಿ ಹಗಲು-ರಾತ್ರಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದೊಂದಿಗೆ ಆರಂಭವಾಗುವ ನಾಲ್ಕು ಟೆಸ್ಟ್ ಸರಣಿಯಲ್ಲಿ ಭಾರತದ ಕ್ರಿಕೆಟ್ ತಂಡವು ಶಮಿ ಅವರನ್ನು ಹೆಚ್ಚು ಅವಲಂಬಿಸಿದೆ.

ಟೆಸ್ಟ್ ತಂಡದಲ್ಲಿ ಮಾತ್ರ ಇರುವ ಸಿರಾಜ್ ತನ್ನ ಹಿರಿಯ ತಂಡದ ಆಟಗಾರನನ್ನು ಅನುಸರಿಸಿದರು.

26 ರ ಹರೆಯದ ಸಿರಾಜ್ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂಭತ್ತು ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ.

ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ನವೆಂಬರ್ 27 ಮತ್ತು 29 ರಂದು ಎಸ್‌ಸಿಜಿಯಲ್ಲಿ ನಡೆಯಲಿದ್ದು, ನಂತರ ಡಿಸೆಂಬರ್ 2ರಂದು ಕ್ಯಾನ್‌ಬೆರಾದಲ್ಲಿ ಮೂರನೇ ಪಂದ್ಯ ನಡೆಯಲಿದೆ.

ಮೊದಲ ಟ್ವೆಂಟಿ-20 ಪಂದ್ಯ (ಡಿಸೆಂಬರ್ 4) ಕ್ಯಾನ್‌ಬೆರಾದಲ್ಲಿ ನಡೆಯಲಿದ್ದು, ಕೊನೆಯ 2 ಪಂದ್ಯಗಳು ಎಸ್‌ಸಿಜಿಯಲ್ಲಿ ಡಿಸೆಂಬರ್ 6 ಮತ್ತು 8 ರಂದು ನಡೆಯಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X