Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಪವರ್ ಟಿವಿ' ಎಂಡಿ ರಾಕೇಶ್‌ ಶೆಟ್ಟಿಗೆ...

'ಪವರ್ ಟಿವಿ' ಎಂಡಿ ರಾಕೇಶ್‌ ಶೆಟ್ಟಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು

ವಾರ್ತಾಭಾರತಿವಾರ್ತಾಭಾರತಿ18 Nov 2020 7:59 PM IST
share
ಪವರ್ ಟಿವಿ ಎಂಡಿ ರಾಕೇಶ್‌ ಶೆಟ್ಟಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು

ಬೆಂಗಳೂರು, ನ.18: ಹಿರಿಯ ರಾಜಕಾರಣಿಯ ಕುಟುಂಬ ಸದಸ್ಯರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪ್ರತಿಯಾಗಿ ಡೆವಲಪರ್ ಓರ್ವರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಖಾಸಗಿ ಸುದ್ದಿ ವಾಹಿನಿಯ ಎಂಡಿ ರಾಕೇಶ್ ಶೆಟ್ಟಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ಪೀಠ ಮನವಿಯನ್ನು ಷರತ್ತು ಬದ್ಧವಾಗಿ ಪುರಸ್ಕರಿಸಿದೆ. ಅರ್ಜಿದಾರ 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಒದಗಿಸಬೇಕು. ಮುಂದಿನ 20 ದಿನಗಳಲ್ಲಿ ತನಿಖಾಧಿಕಾರಿ ಎದುರು ಹಾಜರಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು ಅಥವಾ ಅವುಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಿ ರಾಕೇಶ್ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. 

ಅರ್ಜಿದಾರ ರಾಕೇಶ್ ಶೆಟ್ಟಿ ಪರ ಹಿರಿಯ ನ್ಯಾಯವಾದಿ, ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಹಾಗೂ ಮಾಜಿ ಅಡ್ವಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಅವರು ವಾದ ಮಂಡಿಸಿದ್ದರು.

ಪ್ರಕರಣವೇನು: ರಾಕೇಶ್ ಶೆಟ್ಟಿ ಮಾಲಕತ್ವದ ಪವರ್ ಟಿವಿ ಸುದ್ದಿ ವಾಹಿನಿ ಕಳೆದ ಸೆಪ್ಟಂಬರ್ ತಿಂಗಳಲ್ಲಿ ಸಿಎಂ ಹಾಗೂ ಅವರ ಪುತ್ರನ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ರಾಮಲಿಂಗ ಕನ್ಸ್ಟ್ರಕ್ಷನ್ ಕಂಪೆನಿ ಎಂಡಿ ಚಂದ್ರಕಾಂತ್ ರಾಮಲಿಂಗ ತಮಗೆ ರಾಕೇಶ್ ಶೆಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಿ ಕೆಪಿ ಅಗ್ರಹಾರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸರಕಾರದ ಸೂಚನೆ ಮೇರೆಗೆ ಸಿಸಿಬಿ ಪೊಲೀಸರು ರಾಕೇಶ್ ಶೆಟ್ಟಿ ನಿವಾಸ ಹಾಗೂ ಸುದ್ದಿ ವಾಹಿನಿ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ, ಸುದ್ದಿವಾಹಿನಿಯ ಕೆಲ ಪ್ರಮುಖ ಉಪಕರಣಗಳು ಹಾಗೂ ವಾಹಿನಿಗೆ ಸೇರಿದ ಎಲ್ಲ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ವಶಕ್ಕೆ ಪಡೆದು ಅವುಗಳನ್ನು ನಿರ್ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸುವ ಭೀತಿಯಲ್ಲಿ ರಾಕೇಶ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X