Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ತಳಮಟ್ಟದಲ್ಲಿ ಸಾಂಸ್ಥಿಕ...

ಕಾಂಗ್ರೆಸ್ ತಳಮಟ್ಟದಲ್ಲಿ ಸಾಂಸ್ಥಿಕ ಅಸ್ತಿತ್ವ ಕಳೆದುಕೊಂಡಿದೆ: ಪಿ. ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ18 Nov 2020 9:13 PM IST
share
ಕಾಂಗ್ರೆಸ್ ತಳಮಟ್ಟದಲ್ಲಿ ಸಾಂಸ್ಥಿಕ ಅಸ್ತಿತ್ವ ಕಳೆದುಕೊಂಡಿದೆ: ಪಿ. ಚಿದಂಬರಂ

ಭೋಪಾಲ್, ನ. 18: ಕಪಿಲ್ ಸಿಬಲ್ ಬಳಿಕ ಕಾಂಗ್ರೆಸ್‌ನ ಉನ್ನತ ನಾಯಕತ್ವವನ್ನು ಟೀಕಿಸಿರುವ ಮತ್ತೋರ್ವ ಹಿರಿಯ ನಾಯಕ ಪಿ. ಚಿದಂಬಂರ, ಬಿಹಾರ ವಿಧಾನ ಸಭೆ ಚುನಾವಣೆ ಹಾಗೂ ಉಪ ಚುನಾವಣೆ ಫಲಿತಾಂಶಗಳು ಕಾಂಗ್ರೆಸ್ ತಳಮಟ್ಟದಲ್ಲಿ ಸಾಂಸ್ಥಿಕ ಅಸ್ತಿತ್ವ ಕಳೆದುಕೊಂಡಿರುವುದು ಅಥವಾ ಗಣನೀಯವಾಗಿ ದುರ್ಬಲಗೊಂಡಿರುವುದನ್ನು ಬಹಿರಂಗಪಡಿಸಿದೆ ಎಂದಿದ್ದಾರೆ.

ಚುನಾವಣಾ ಸೋಲಿನಿಂದಾಗಲಿ, ನಾಯಕತ್ವದ ಒಡಕಿನಿಂದಾಗಲಿ ಯಾವುದೇ ರೀತಿಯಲ್ಲಿ ಬಾಧಿತರಾಗದ ಪಿ. ಚಿದಂಬರಂ ಅವರು ದಿನಪತ್ರಿಕೆಯೊಂದರ ಸಂದರ್ಶನದಲ್ಲಿ, ಪಕ್ಷ ಬಿಹಾರದಲ್ಲಿ ಸ್ಪರ್ಧಿಸಬೇಕಾಗಿದ್ದ ಕ್ಷೇತ್ರಗಳಿಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು ಎಂದಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕೊರೋನ ವೈರಸ್ ಬಿಕ್ಕಟ್ಟು ಹಾಗೂ ಆರ್ಥಿಕ ನಿಧಾನಗತಿಯ ನಿರ್ವಹಣೆಯ ವಿಷಯಗಳು ಇದ್ದ ಹೊರತಾಗಿಯೂ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿನ್ನಡೆ ಬಗೆಗಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ, ‘‘ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಕರ್ನಾಟಕದ ಉಪ ಚುನಾವಣೆಯ ಫಲಿತಾಂಶದಿಂದ ನಾನು ಹೆಚ್ಚು ಚಿಂತಿತನಾಗಿದ್ದೇನೆ. ಈ ಫಲಿತಾಂಶ ಪಕ್ಷ ತಳಮಟ್ಟದಲ್ಲಿ ಸಾಂಸ್ಥಿಕ ಅಸ್ತಿತ್ವವನ್ನು ಕಳೆದುಕೊಂಡಿದೆ ಅಥವಾ ಗಣನೀಯವಾಗಿ ದುರ್ಬಲಗೊಂಡಿದೆ ಎಂಬುದನ್ನು ಬಹಿರಂಗಪಡಿಸಿದೆ’’ ಎಂದರು.

‘‘ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್‌ಗೆ ಜಯ ಗಳಿಸುವ ಅವಕಾಶ ಇತ್ತು. ಆದರೆ, ಗೆಲುವಿನ ಹತ್ತಿರ ಬಂದರೂ ನಾವು ಯಾಕೆ ಪರಾಭವಗೊಂಡೆವು ಎಂಬ ಬಗ್ಗೆ ಸಮಗ್ರವಾಗಿ ಪರಿಶೀಲಿಸಬೇಕಾದ ಅಗತ್ಯ ಇದೆ. ಇತ್ತೀಚೆಗೆ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ಜಾರ್ಖಂಡ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸಿರುವುದನ್ನು ನೆನಪಿಸಿಕೊಳ್ಳಿ’’ ಎಂದು ಅವರು ಹೇಳಿದ್ದಾರೆ.

‘‘ತಳಮಟ್ಟದಲ್ಲಿ ಸಾಂಸ್ಥಿಕವಾಗಿ ಗಟ್ಟಿಯಾಗಿದ್ದರೆ ಸಿಪಿಐ-ಎಂಎಲ್ ಹಾಗೂ ಎಐಎಂಐಎಂನಂತಹ ಸಣ್ಣ ಪಕ್ಷಗಳು ಕೂಡ ಉತ್ತಮ ಸಾಧನೆ ತೋರಲು ಸಾಧ್ಯ ಎಂಬುದನ್ನು ಬಿಹಾರ ಚುನಾವಣೆ ಸಾಬೀತು ಮಾಡಿದೆ. ಬಿಜೆಪಿ ನೇತೃತ್ವದ ಮೈತ್ರಿ ಕೂಟಕ್ಕಿಂತ ಪ್ರತಿಪಕ್ಷಗಳ ಮೈತ್ರಿ ಕೂಟ ಹೆಚ್ಚು ಮತಗಳನ್ನು ಪಡೆಯಲು ಸಾಧ್ಯ. ಆದರೆ, ಅದನ್ನು ಸೋಲಿಸಲು ನಮ್ಮ ಪಕ್ಷ ತಳಮಟ್ಟದಲ್ಲಿ ಬಲಿಷ್ಠವಾಗಬೇಕು’’ ಎಂದು ಅವರು ಹೇಳಿದರು. ‘‘ಕಾಂಗ್ರೆಸ್ ತನ್ನ ಸಾಂಸ್ಥಿಕ ಸಾಮರ್ಥ್ಯಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಿತು ಎಂಬುದು ನನ್ನ ಭಾವನೆ. ಬಿಜೆಪಿ ಅಥವಾ ಅದರ ಮಿತ್ರ ಪಕ್ಷಗಳು ಕಳೆದ 20 ವರ್ಷಗಳಿಂದ ಜಯ ಗಳಿಸುತ್ತಿದ್ದ 25 ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ನೀಡಲಾಗಿತ್ತು. ಈ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಿರಾಕರಿಸಬೇಕಿತ್ತು. ಪಕ್ಷವು ಕೇವಲ 45 ಮಂದಿ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಬೇಕಿತ್ತು’’ ಎಂದು ಪಿ. ಚಿದಂಬರಂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X