Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ದಾಳಿಯ ರೂವಾರಿ ಹಫೀಝ್ ಸಯೀದ್‌ಗೆ...

ಮುಂಬೈ ದಾಳಿಯ ರೂವಾರಿ ಹಫೀಝ್ ಸಯೀದ್‌ಗೆ 10 ವರ್ಷ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ19 Nov 2020 7:01 PM IST
share
ಮುಂಬೈ ದಾಳಿಯ ರೂವಾರಿ ಹಫೀಝ್ ಸಯೀದ್‌ಗೆ 10 ವರ್ಷ ಜೈಲುಶಿಕ್ಷೆ

ಹೊಸದಿಲ್ಲಿ, ನ.19: ಮುಂಬೈ ದಾಳಿಯ ಸಂಚು ರೂಪಿಸಿದ ರೂವಾರಿ, ಭಯೋತ್ಪಾದಕ ಸಂಘಟನೆ ಎಲ್‌ಇಟಿಯ ಸಹಸಂಸ್ಥೆ ಜೆಯುಡಿ ಮುಖ್ಯಸ್ಥ ಹಫೀಝ್ ಸಯೀದ್‌ಗೆ ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಪಾಕಿಸ್ತಾನದ ನ್ಯಾಯಾಲಯ 10 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ ಎಂದು ಪಿಟಿಐ ಸುದ್ಧಿಸಂಸ್ಥೆ ವರದಿ ಮಾಡಿದೆ. ಲಾಹೋರ್‌ನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಜಮಾಅತುದಅವಾ (ಜೆಯುಡಿ)ಸಂಘಟನೆಯ ಮುಖ್ಯಸ್ಥ ಹಫೀಝ್ ಸಯೀದ್ ಸಹಿತ ನಾಲ್ವರು ಮುಖಂಡರನ್ನು ಇನ್ನೂ ಎರಡು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಪಡಿಸಿದೆ .

ಸಯೀದ್ ಮತ್ತು ಆತನ ಇಬ್ಬರು ಸಹಚರರಾದ ಝಾಫರ್ ಇಕ್ಬಾಲ್ ಮತ್ತು ಯಾಹ್ಯ ಮುಜಾಹಿದ್‌ಗೆ 10 ವರ್ಷ 6 ತಿಂಗಳು ಜೈಲುಶಿಕ್ಷೆ, ಮೈದುನ ಅಬ್ದುಲ್ ರಹ್ಮಾನ್ ಮಕ್ಕಿಗೆ 6 ತಿಂಗಳ ಜೈಲುಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ. ಉಗ್ರ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡಿದ ಪ್ರಕರಣದಲ್ಲಿ ಕಳೆದ ಫೆಬ್ರವರಿಯಲ್ಲಿ ಸಯೀದ್ ಹಾಗೂ ಆತನ ಕೆಲವು ಸಹಚರರಿಗೆ ನ್ಯಾಯಾಲಯ 11 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. 2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ ಸಂಚುಕೋರನಾಗಿರುವ ಹಫೀಝ್ ಸಯೀದ್‌ನನ್ನು ಅಮೆರಿಕ ಮತ್ತು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದ್ದು ಅಮೆರಿಕ ದೇಶ ಈತನ ತಲೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ. ಪಾಕ್ ಮೇಲೆ ಅಂತರ್ ರಾಷ್ಟ್ರೀಯ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈಯಲ್ಲಿ ಈತನನ್ನು ಬಂಧಿಸಿ ಲಾಹೋರ್‌ನ ಕೋಟ್ ಲಖ್‌ಪತ್ ಜೈಲಿನಲ್ಲಿಡಲಾಗಿದೆ.

ಮುಂಬೈ ಮೇಲೆ ನಡೆದ ಉಗ್ರರ ದಾಳಿಯಲ್ಲಿ 166 ಜನ ಮೃತಪಟ್ಟಿದ್ದು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. 10 ಉಗ್ರರನ್ನೂ ಹತ್ಯೆ ಮಾಡಲಾಗಿತ್ತು. ಪಾಕಿಸ್ತಾನದ ಭಯೋತ್ಪಾದನೆ ನಿಗ್ರಹ ಇಲಾಖೆಯು ಜೆಯುಡಿ ಸಂಘಟನೆಯ ಮುಖಂಡರ ವಿರುದ್ಧ 41 ಪ್ರಕರಣಗಳನ್ನು ದಾಖಲಿಸಿದ್ದು ಹಫೀಝ್ ಸಯೀದ್ ವಿರುದ್ಧ ದಾಖಲಿಸಿರುವ ಪ್ರಕರಣಗಳಲ್ಲಿ 4 ಪ್ರಕರಣದ ಬಗ್ಗೆ ತೀರ್ಪು ಹೊರಬಿದ್ದಿದ್ದು ಉಳಿದ ಪ್ರಕರಣಗಳ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ. ಪಾಕಿಸ್ತಾನದಲ್ಲಿ ಮುಕ್ತವಾಗಿ ಸಂಚರಿಸುತ್ತಿರುವ ಉಗ್ರರ ವಿರುದ್ಧ ಅಲ್ಲಿನ ಸರಕಾರ ಕ್ರಮ ಕೈಗೊಳ್ಳುವಲ್ಲಿ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದಕರ ಆರ್ಥಿಕ ನೆರವಿನ ಕುರಿತು ನಿಗಾ ವಹಿಸಿರುವ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್(ಎಫ್‌ಎಟಿಎಫ್) ಪ್ರಮುಖ ಪಾತ್ರ ವಹಿಸಿದೆ.

ಪಾಕಿಸ್ತಾನದ ಕೆಲವು ಸಂಘಟನೆಗಳು ಜೈಷೆ ಮುಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳಿಗೆ ಆರ್ಥಿಕ ನೆರವು ಒದಗಿಸುತ್ತಿರುವ ಬಗ್ಗೆ ಭಾರತವು ಎಫ್‌ಎಟಿಎಫ್‌ಗೆ ಸಾಕ್ಷ್ಯಾಧಾರದ ಸಹಿತ ದೂರು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ , ಎಫ್‌ಎಟಿಎಫ್‌ನ ಕಪ್ಪುಪಟ್ಟಿಗೆ ಸೇರ್ಪಡೆಯಾಗಬಹುದು ಎಂಬ ಭೀತಿಯಲ್ಲಿ ಪಾಕಿಸ್ತಾನ ಉಗ್ರರ ವಿರುದ್ದ ಕ್ರಮಕ್ಕೆ ಮುಂದಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X