Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಸಾಹಿತ್ಯ ಪರಿಷತ್‍ ಅನ್ನು ಜನರ...

ಕನ್ನಡ ಸಾಹಿತ್ಯ ಪರಿಷತ್‍ ಅನ್ನು ಜನರ ಪರಿಷತ್ತನ್ನಾಗಿಸುವ ಗುರಿ ನನ್ನದು: ಮಹೇಶ್ ಜೋಶಿ

ವಾರ್ತಾಭಾರತಿವಾರ್ತಾಭಾರತಿ19 Nov 2020 7:07 PM IST
share
ಕನ್ನಡ ಸಾಹಿತ್ಯ ಪರಿಷತ್‍ ಅನ್ನು ಜನರ ಪರಿಷತ್ತನ್ನಾಗಿಸುವ ಗುರಿ ನನ್ನದು: ಮಹೇಶ್ ಜೋಶಿ

ಚಿಕ್ಕಮಗಳೂರು, ನ.19: ಈ ಬಾರಿಯ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ತಾನು ಸ್ಪರ್ಧಿಸುತ್ತಿದ್ದು, ಪರಿಷತ್ ಅಧ್ಯಕ್ಷನಾದಲ್ಲಿ ಕಸಾಪವನ್ನು ಜನರ ಪರಿಷತ್ತನ್ನಾಗಿ ರೂಪಿಸುತ್ತೇನೆ. ತಾನು ಪರಿಷತ್ ಅಧ್ಯಕ್ಷನಾದಲ್ಲಿ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುತ್ತೇನೆ. ಈ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲು ಕಸಾಪ ಸದಸ್ಯರು ತನಗೆ ಅವಕಾಶ ನೀಡಬೇಕೆಂದು ದೂರದರ್ಶನ ಕೇಂದ್ರದ ನಿವೃತ್ತ ನಿರ್ದೇಶಕ, ನಾಡೋಜ ಡಾ.ಮಹೇಶ್ ಜೋಶಿ ಮನವಿ ಮಾಡಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೂರದರ್ಶನ ಕೇಂದ್ರದ ನಿರ್ದೇಶಕನಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ದೂರದರ್ಶನವನ್ನು ಸಮೀಪ ದರ್ಶನವನ್ನಾಗಿ ರೂಪಿಸಿದ್ದೇನೆ. ದೂರದರ್ಶನವು ವೀಕ್ಷಕರಿಂದ, ಕಲಾವಿದರಿಂದ ದೂರವಾದಾಗ ದೂರದರ್ಶನವು ಕಲಾವಿದರನ್ನು ಹುಡುಕಿಕೊಂಡು ಹೋಗುವಂತೆ ಮಾಡಿದ್ದೇನೆ. ಇದೇ ಮಾದರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಸಾಕಷ್ಟು ಸುಧಾರಣೆ ಮಾಡಲು ಯೋಜನೆ ರೂಪಿಸಿಕೊಂಡಿದ್ದೇನೆ ಎಂದರು.

ಚುನಾವಣೆಯಲ್ಲಿ ಗೆದ್ದು ಸಾಹಿತ್ಯ ಪರಿಷತ್ ಅಧ್ಯಕ್ಷನಾದಲ್ಲಿ 5 ವರ್ಷಗಳ ಅವಧಿಯಲ್ಲಿ ಕಾಫಿನಾಡಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. ಪ್ರಸಕ್ತ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಇದೆ. ಕನ್ನಡಾಭಿಮಾನಿಗಳಿಗೆ ಇದರ ಮಾಹಿತಿ ಕೊರತೆ ಇಲ್ಲವಾಗಿದೆ. ಇದನ್ನು ನಿವಾರಿಸಲು ಆನ್‍ಲೈನ್‍ನಲ್ಲಿ ಸದಸ್ಯತ್ವ ಅಭಿಯಾನ ರೂಪಿಸಲಾಗುವುದು ಎಂದರು. 

ಸಾಹಿತ್ಯ ಪರಿಷತ್ 3 ಲಕ್ಷ 20 ಸಾವಿರ ಮತದಾರರನ್ನು ಹೊಂದಿದ್ದು, ಅವರ ಮಾಹಿತಿ ಅಪೂರ್ಣವಾಗಿದೆ. ತಾವು ಅಧ್ಯಕ್ಷರಾಗುತ್ತಿದ್ದಂತೆ ಇವೆಲ್ಲವನ್ನು ಪರಿಷ್ಕರಿಸಿ ಸುಧಾರಣೆ ತರಲಾಗುವುದು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಕೃಪಕಟಾಕ್ಷವಿಲ್ಲದೇ ತಾಲೂಕು ಅಧ್ಯಕ್ಷರಾಗಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ತಾಲೂಕು ಅಧ್ಯಕ್ಷರ ಆಯ್ಕೆ ವಿಧಾನದಲ್ಲಿ ಬದಲಾವಣೆ ತರಲಾಗುವುದು ಎಂದು ಮಾಹಿತಿ ನೀಡಿದ ಅವರು, ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹೊಸ ಮನ್ವಂತರದೊಂದಿಗೆ ಕನ್ನಡದ ಆಸ್ಮಿತೆಯನ್ನು ಗಟ್ಟಿಗೊಳಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬದಲಾವಣೆಗೆ ನಾಂದಿ ಹಾಡಲಾಗುವುದು ಎಂದರು.

ರಾಜ್ಯದ 7ಲಕ್ಷ ಕನ್ನಡಿಗರಲ್ಲಿ ಕನ್ನಡ ಸಾಹಿತ್ಯ ಪರಿಷತ್ 3ಲಕ್ಷ 20ಸಾವಿರ ಸದಸ್ಯರನ್ನು ಮಾತ್ರ ಒಳಗೊಂಡಿದೆ. ಪರಿಷತ್ ಸದಸ್ಯತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಳ್ಳಿ ಹಳ್ಳಿಗಳಲ್ಲಿ ಅಭಿಯಾನ ಪ್ರಾರಂಭಿಸಿ ಸದಸ್ಯತ್ವ ಹೆಚ್ಚಳಕ್ಕೆ ಒತ್ತು ನೀಡಲಾಗುವುದು. ದೂರದರ್ಶನ ಸಮೀಪ ದರ್ಶನವಾದಂತೆ ಮುಂದೇ ಕನ್ನಡ ಸಾಹಿತ್ಯ ಪರಿಷತ್ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿಸುವ ಧ್ಯೇಯೆ ಹೊಂದಿದ್ದು, 2021ರಲ್ಲಿ ನಡೆಯುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಜೋಷಿ ಇದೇ ವೇಳೆ ಮನವಿ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಸ್ವತಂತ್ರ ಸಂಸ್ಥೆಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ಸರಕಾರದ ಕೈಗೊಂಬೆಯಲ್ಲ, ಆದರೆ ಅದು ಸರಕಾರದೊಂದಿಗೆ ಸೌರ್ಹಾದಯುತ ಸಂಪರ್ಕ ಹೊಂದಿರಬೇಕು. ಸಾಹಿತ್ಯ ಪರಿಷತ್ ಸಾಹಿತ್ಯ, ಸಂಸ್ಕೃತಿ ಸೇರಿದಂತೆ ಅನೇಕ ವಿಭಾಗ ಹೊಂದಿದ್ದು, ಕನ್ನಡ ಸಾಹಿತ್ಯ ಪರಿಷತ್ ಶುದ್ಧೀಕರಣ, ಸರಳೀಕರಣ ಆಗಬೇಕಾದ ಅಗತ್ಯವಿದೆ ಎಂದರು

ಸುದ್ದಿಗೋಷ್ಟಿಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರಾದ ಎಲ್.ವಿ.ಕೃಷ್ಣಮೂರ್ತಿ, ರಾಜಕುಮಾರ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಓಂಕಾರೇಗೌಡ, ರಾಮಲಿಂಗಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X