ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ-ಸಿದ್ದಾರ್ಥ ಪುತ್ರ ಅಮಾತ್ರ್ಯ ‘ವಿವಾಹ ನಿಶ್ಚಿತಾರ್ಥ’
![ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ-ಸಿದ್ದಾರ್ಥ ಪುತ್ರ ಅಮಾತ್ರ್ಯ ‘ವಿವಾಹ ನಿಶ್ಚಿತಾರ್ಥ’ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ-ಸಿದ್ದಾರ್ಥ ಪುತ್ರ ಅಮಾತ್ರ್ಯ ‘ವಿವಾಹ ನಿಶ್ಚಿತಾರ್ಥ’](https://www.varthabharati.in/sites/default/files/images/articles/2020/11/20/267973-1605893300.jpg)
ಬೆಂಗಳೂರು, ನ. 19: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹಾಗೂ ಮಾಜಿ ಸಿಎಂ ಎಸ್ಸೆಂ ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾತ್ರ್ಯ ಹೆಗ್ಡೆ ಅವರ ‘ವಿವಾಹ ನಿಶ್ಚಿತಾರ್ಥ’ ಕಾರ್ಯಕ್ರಮ ನಡೆಯಿತು.
ಗುರುವಾರ ಬೆಂಗಳೂರು ಹೊರ ವಲಯದ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೊಟೇಲ್ನಲ್ಲಿ ವಿವಾಹ ನಿಶ್ಚಿತಾರ್ಥ ಜರುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದರು.
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಆಪ್ತ ಬಂಧುಗಳು ಹಾಗೂ ಬೆರಳೆಣಿಕೆಯಷ್ಟು ಸ್ನೇಹಿತರು ಮಾತ್ರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಂಪತಿ, ಎಸ್ಸೆಂ ಕೃಷ್ಣ ದಂಪತಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಈ ವೇಳೆ ಹಾಜರಿದ್ದರು.
Next Story