Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರವರ ರಾವ್‌ಗೆ ಜೀವನ ಹಕ್ಕನ್ನು...

ವರವರ ರಾವ್‌ಗೆ ಜೀವನ ಹಕ್ಕನ್ನು ನಿರಾಕರಿಸಲು ಎಲ್ಗಾರ್ ಪರಿಷದ್ ಪ್ರಕರಣ ಎಂಬ ಪಿತೂರಿ: ಪಿಯುಡಿಆರ್

ವಾರ್ತಾಭಾರತಿವಾರ್ತಾಭಾರತಿ19 Nov 2020 8:27 PM IST
share
ವರವರ ರಾವ್‌ಗೆ ಜೀವನ ಹಕ್ಕನ್ನು ನಿರಾಕರಿಸಲು ಎಲ್ಗಾರ್ ಪರಿಷದ್ ಪ್ರಕರಣ ಎಂಬ ಪಿತೂರಿ: ಪಿಯುಡಿಆರ್

ಹೊಸದಿಲ್ಲಿ,ನ.19: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ಹಿಂದೆ ಬಂಧಿಸಲ್ಪಟ್ಟಿರುವ ತೆಲುಗು ಕವಿ ಹಾಗೂ ಸಾಮಾಜಿಕ ಹೋರಾಟಗಾರ ವರವರ ರಾವ್ (82) ಅವರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಪೀಪಲ್ಸ್ ಯೂನಿಯನ್ ಆಫ್ ಡೆಮಾಕ್ರಟಿಕ್ ರೈಟ್ಸ್ (ಪಿಯುಡಿಆರ್) ಗುರುವಾರ ಆಗ್ರಹಿಸಿದೆ. 2017ರ ಎಲ್ಗಾರ್ ಪರಿಷದ್ ಕುರಿತು ಕೇಂದ್ರದ ತನಿಖೆಯು ರಾವ್ ಅವರ ಜೀವನದ ಹಕ್ಕನ್ನು ಕಡೆಗಣಿಸುವ ಮತ್ತು ಘನತೆಯಿಂದ ಬದುಕುವ ಅವರ ಮಾನವ ಹಕ್ಕನ್ನು ಕಿತ್ತುಕೊಳ್ಳುವ ಉದ್ದೇಶದ ಪಿತೂರಿಯಾಗಿದೆ ಎಂದು ಅದು ಹೇಳಿದೆ.

2017,ಡಿ.31ರಂದು ಪುಣೆಯ ಶನಿವಾರವಾಡಾದಲ್ಲಿ ನಡೆದಿದ್ದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದ್ದ ಆರೋಪದಲ್ಲಿ ರಾವ್ ಅವರನ್ನು 2018,ನ.17ರಂದು ಬಂಧಿಸಲಾಗಿತ್ತು. ಇದಕ್ಕೂ ಮುನ್ನ ಹಲವಾರು ದಿನಗಳ ಕಾಲ ಅವರನ್ನು ಗೃಹಬಂಧನದಲ್ಲಿರಿಸಲಾಗಿತ್ತು. ಅವರು ಈಗಾಗಲೇ 732 ದಿನಗಳನ್ನು ಬಂಧನದಲ್ಲಿ ಕಳೆದಿದ್ದಾರೆ,ವಿಚಾರಣೆ ಮಾತ್ರ ಇನ್ನೂ ಆರಂಭವಾಗಿಲ್ಲ.

 ರಾವ್ ಹೆಚ್ಚು ಕಡಿಮೆ ಮರಣಶಯ್ಯೆಯಲ್ಲಿರುವುದನ್ನು ಗಮನಿಸಿದ ಬಾಂಬೆ ಉಚ್ಚ ನ್ಯಾಯಾಲಯವು 15 ದಿನಗಳ ಅವಧಿಗೆ ಅವರನ್ನು ತಲೋಜಾ ಜೈಲಿನಿಂದ ಮುಂಬೈನ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಗುರುವಾರ ಆದೇಶಿಸಿದೆ. ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬಾರದು ಮತ್ತು ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ಕುಟುಂಬಕ್ಕೆ ಅವಕಾಶ ನೀಡಬೇಕು ಎಂದು ಅದು ನಿರ್ದೇಶ ನೀಡಿದೆ.

ರಾವ್ ಅವರಿಗೆ ಇನ್ನೂ ಜಾಮೀನು ಲಭ್ಯವಾಗಿಲ್ಲ. ತಲೋಜಾ ಜೈಲಿನಲ್ಲಿ ಲಭ್ಯವಿಲ್ಲದ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುವ ಹಕ್ಕನ್ನು ಮಾತ್ರ ಅವರಿಗೆ ನೀಡಲಾಗಿದೆ. ನಿಲ್ಲಲೂ ಸಾಧ್ಯವಾಗದ ಸ್ಥಿತಿಯಲ್ಲಿರುವ ರಾವ್ ಅವರಿಗೆ ವೈದ್ಯಕೀಯ ಚಿಕಿತ್ಸೆಯ ಅವಕಾಶವನ್ನು ವಿಫಲಗೊಳಿಸಲು ಸರಕಾರವು ಅಸಮರ್ಪಕ ಮತ್ತು ಅವಸರದಿಂದ ಜೋಡಿಸಲ್ಪಟ್ಟಿದ್ದ ವೈದ್ಯಕೀಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದು ಸ್ಪಷ್ಟವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿರುವ ಪಿಯುಡಿಆರ್,ಎರಡು ವರ್ಷಗಳಾದರೂ ಪ್ರಕರಣದಲ್ಲಿ ವಿಚಾರಣೆ ಆರಂಭವಾಗಿಲ್ಲ. ಆದರೆ ಜಾಮೀನು ಅರ್ಜಿಗಳನ್ನು ವಿರೋಧಿಸಲು ಸರಕಾರವು ಸಾಕಷ್ಟು ಶಕ್ತಿಯನ್ನು ವ್ಯಯಿಸಿದೆ ಎಂದಿದೆ.

 ರಾವ್ ಅವರನ್ನು ಕರಾಳ ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಬಂಧಿಸಲಾಗಿದ್ದು,ಇದು ಅವರಿಗೆ ಜಾಮೀನು ದೊರೆಯುವುದನ್ನು ಹೆಚ್ಚು ಕಡಿಮೆ ಅಸಾಧ್ಯವಾಗಿಸಿದೆ. ಅವರು ಸಲ್ಲಿಸಿದ್ದ ಐದು ಜಾಮೀನು ಅರ್ಜಿಗಳನ್ನು ಈಗಾಗಲೇ ವಜಾಗೊಳಿಸಲಾಗಿದೆ. ತನ್ಮಧ್ಯೆ ಅವರು ಪ್ರಜ್ಞಾಹೀನರಾಗಿ ಬಿದ್ದಿದ್ದರು,ಕೋವಿಡ್‌ಗೆ ಪಾಸಿಟಿವ್ ಆಗಿದ್ದರು ಹಾಗೂ ಗಂಭೀರ ಚಯಾಪಚಯ ಮತ್ತು ಮಾನಸಿಕ ಅಸಮತೋಲನಗಳಿಂದಲೂ ನರಳಿದ್ದರು ಎಂದು ಪಿಯುಡಿಆರ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X