Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜಯನಗರ ಜಿಲ್ಲೆಯನ್ನು ಸೋಮಶೇಖರ್ ರೆಡ್ಡಿ...

ವಿಜಯನಗರ ಜಿಲ್ಲೆಯನ್ನು ಸೋಮಶೇಖರ್ ರೆಡ್ಡಿ ಒಪ್ಪುವ ವಿಶ್ವಾಸ: ಸಚಿವ ಎಸ್.ಟಿ. ಸೋಮಶೇಖರ್

'ಸಮುದಾಯಗಳ ಬೇಡಿಕೆಯಂತೆ ನಿಗಮ ರಚನೆ'

ವಾರ್ತಾಭಾರತಿವಾರ್ತಾಭಾರತಿ19 Nov 2020 11:33 PM IST
share
ವಿಜಯನಗರ ಜಿಲ್ಲೆಯನ್ನು ಸೋಮಶೇಖರ್ ರೆಡ್ಡಿ ಒಪ್ಪುವ ವಿಶ್ವಾಸ: ಸಚಿವ ಎಸ್.ಟಿ. ಸೋಮಶೇಖರ್

ಹೊಸಪೇಟೆ, ನ. 19: ಮರಾಠಿ, ಗಡಿ ಮತ್ತು ಭಾಷೆಯ ವಿಷಯ ಬೇರೆ-ಬೇರೆ. ಕರ್ನಾಟಕ ರಾಜ್ಯದಲ್ಲಿ ಮರಾಠಿ ಸಮುದಾಯದ ಅನೇಕರು ವಾಸವಾಗಿದ್ದಾರೆ. ಇಲ್ಲಿಯೇ ಹುಟ್ಟಿ, ಬೆಳದವರಿದ್ದಾರೆ. ಅವರೂ ಕನ್ನಡಿಗರೇ ಆಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮರಾಠಾ ಸಮುದಾಯದ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಹೊರಡಿಸಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮರಾಠಾ ನಿಗಮ ಮಹಾರಾಷ್ಟ್ರದವರಿಗಾಗಿ ಮಾಡುತ್ತಿರುವುದಲ್ಲ. ಅವರೆಲ್ಲರೂ ನಮ್ಮೊಂದಿಗೆ ಇರುವ ಮರಾಠಿಗರು. ಹೀಗಾಗಿ ಅವರ ಅನೇಕ ವರ್ಷಗಳ ಬೇಡಿಕೆಯನ್ನು ಈಗ ಸಿಎಂ ಈಡೇರಿಸಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಜಾತಿಗೊಂದು ನಿಗಮ ಮಂಡಳಿಯಂತೆ ನಮ್ಮ ಸರಕಾರ ಮಾಡುತ್ತಿಲ್ಲ. ಇದು ಯಾವುದೇ  ಸರಕಾರವಿದ್ದರೂ ನಿಗಮ-ಮಂಡಳಿ ರಚನೆ ಮಾಡುವ ರೀತಿಯಲ್ಲೇ ನಾವು ಸಾಮಾನ್ಯ ನಿಗಮ ರಚನೆ ಮಾಡಿದ್ದೇವೆ. ಸವಿತಾ ಸಮಾಜ, ಬ್ರಾಹ್ಮಣ ಸಮಾಜ ಸೇರಿದಂತೆ ಎಲ್ಲ ಸಮಾಜದವರೂ ನಿಗಮ ಮಂಡಳಿ ಕೇಳುತ್ತಲೇ ಬಂದಿದ್ದಾರೆ.

ಎಲ್ಲ ಜಾತಿಯವರು ಅವರ ಸಮಾಜದ ಏಳ್ಗೆಗಾಗಿ ನಿಗಮ ರಚನೆ ಮಾಡಬೇಕೆಂದು ಕೇಳುತ್ತಿರುತ್ತಾರೆ. ಈಗ ಸಿಎಂ ಬಳಿ ಹೋಗಿ ಮನವಿ ಸಲ್ಲಿಸಿದ್ದಾರೆ. ಅವರ ಕಾರಣಗಳು ಸರಿ ಎಂದು ಸಿಎಂಗೆ ಅನ್ನಿಸಿದರೆ ಅವರು ಅನುಮತಿಯನ್ನು ಕೊಡುತ್ತಾರೆ. ಇದು ಎಲ್ಲ ಸಿಎಂಗಳು ಮಾಡುವಂತಹ ಕೆಲಸವಾಗಿದೆ ಎಂದು ಹೇಳಿದರು.

ಸೋಮೇಶಖರ ರೆಡ್ಡಿ ಜತೆ ಸಮಾಲೋಚನೆ: ವಿಜಯನಗರ ಹೊಸ ಜಿಲ್ಲೆಯಾಗಿ ಮಾಡುವ ಬಗ್ಗೆ ಪರ-ವಿರೋಧ ಇರುವುದು ಸಹಜ. ಈಗಾಗಲೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಹಾಗೂ ಈ ಭಾಗದ ಅನೇಕ ಶಾಸಕರು ನೂತನ ಜಿಲ್ಲೆಯ ನಿರ್ಧಾರವನ್ನು ಸ್ವಾಗತ ಮಾಡಿದ್ದಾರೆ. ಈಗ ತಾನೆ ಸಂಪುಟದಲ್ಲಿ ಪ್ರಾಥಮಿಕವಾಗಿ ಒಪ್ಪಿಗೆ ಸಿಕ್ಕಿದೆ. ಇದಕ್ಕಾಗಿ ಸಚಿವ ಆನಂದ್ ಸಿಂಗ್ ಅವರು ಬಹಳ ಮೊದಲಿನಿಂದಲೇ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಅವರ ಜೊತೆ ಅನೇಕ ಶಾಸಕರು ಹಾಗೂ ಸಂಘ-ಸಂಸ್ಥೆಗಳ ಬೆಂಬಲವಿತ್ತು. ಈಗ ಅದು ಕಾರ್ಯರೂಪಕ್ಕೆ ಬಂದಿದೆ ಎಂದು ಅವರು ತಿಳಿಸಿದರು.

ಶಾಸಕ ಸೋಮಶೇಖರ್ ರೆಡ್ಡಿ ಅವರು ನೂತನ ಜಿಲ್ಲೆಗೆ ವಿರೋಧ ವ್ಯಕ್ತಪಡಿಸಿದ್ದರ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೋಮಶೇಖರ ರೆಡ್ಡಿ ಅವರ ಜೊತೆ ನಾವೆಲ್ಲರೂ ಮಾತನಾಡುತ್ತೇವೆ. ಅವರೂ ನಮ್ಮ ಪಕ್ಷದವರೇ ಆಗಿರುವುದರಿಂದ ಖಂಡಿತವಾಗಿ ಮನವೊಲಿಸುತ್ತೇವೆ. ಮುಖ್ಯಮಂತ್ರಿ ಏನು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೋ ಅದನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಶಾಸಕ ಸೋಮಶೇಖರ ರೆಡ್ಡಿಯವರು ಒಪ್ಪುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.

ಸಿಎಂ ಪರಮಾಧಿಕಾರ
ಸಚಿವ ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪರಮಾಧಿಕಾರ. ಈ ಸಂಬಂಧ ಚರ್ಚಿಸಲು ಅವರು ಹೊಸದಿಲ್ಲಿಗೆ ಹೋಗಿ ಬಂದಿದ್ದಾರೆಂಬ ಮಾಹಿತಿ ಇದೆ. ನಮ್ಮ ಪಕ್ಷದಲ್ಲಿ ಇಂಥ ನಿರ್ಧಾರಗಳಿಗೆಲ್ಲ ಹೈಕಮಾಂಡ್ ಅನುಮತಿ ಕೊಡುವ ಪದ್ಧತಿ ಇದೆ. ಹೀಗಾಗಿ ಹೈಕಮಾಂಡ್ ಹಾಗೂ ಸಿಎಂ ನಿರ್ಧಾರವೇ ಅಂತಿಮ. ಅವರಿಗೇ ಎಲ್ಲ ಅಧಿಕಾರ ಇದೆ.
-ಎಸ್.ಟಿ.ಸೋಮಶೇಖರ್, ಸಹಕಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X