Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆನ್ಜ್ ಅಬ್ದುಲ್ಲ ಕೊಲೆಯತ್ನ ಖಂಡಿಸಿ ನ....

ವೆನ್ಜ್ ಅಬ್ದುಲ್ಲ ಕೊಲೆಯತ್ನ ಖಂಡಿಸಿ ನ. 23ರಂದು ಬಜ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Nov 2020 3:06 PM IST
share
ವೆನ್ಜ್ ಅಬ್ದುಲ್ಲ ಕೊಲೆಯತ್ನ ಖಂಡಿಸಿ ನ. 23ರಂದು ಬಜ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಮಂಗಳೂರು, ನ. 20: ಗುರುಪುರ ಕೈಕಂಬ ಪರಿಸರದಲ್ಲಿ ಇತ್ತೀಚೆಗೆ ನಡೆದಿದ್ದ ವೆನ್ಜ್ ಅಬ್ದುಲ್ಲ ಕೊಲೆ ಯತ್ನ ಪ್ರರಕಣದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ನ.23ರಂದು ಬಜ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಗುರುಪುರ ಕೈಕಂಬ ಮುಸ್ಲಿಂ ಒಕ್ಕೂಟ ತಿಳಿಸಿದೆ.

ಕರ್ನಾಟಕ ಮುಸ್ಲಿಂ ಜಮಾತ್‌ನ ಕೋ- ಆರ್ಡಿನೇಟರ್ ಅಶ್ರಫ್ ಕಿನಾರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೆನ್ಜ್ ಅಬ್ದುಲ್ಲ ಗುರುಪುರ ಕೈಕಂಬ ಪರಿಸರದಲ್ಲಿ ಸಾಮಾಜಿಕ ಶೈಕ್ಷಣಿಕ ಬಡವರ ಕಲ್ಯಾಣ ಕಾರ್ಯಗಳಿಗಾಗಿ ನಿರಂತರವಾಗಿ ದುಡಿಯುತ್ತಿದ್ದರು. ವಿವಿಧ ಮುಸ್ಲಿಂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಅವರಿಗೆ ನ.15ರಂದು ರಾತ್ರಿ ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿತ್ತು. ಆದರೆ ನೈಜ ಆರೋಪಿಗಳನ್ನು ಪೊಲೀಸರು ಇದುವರೆಗೆ ಬಂಧಿಸುವ ಕೆಲಸ ಮಾಡಲೇ ಇಲ್ಲ ಎಂದು ಅವರು ಆರೋಪಿಸಿದರು.

ಕಳೆದ ಎರಡು ವರ್ಷಗಳಿಂದ ಕೈಕಂಬ ಪರಿಸರದಲ್ಲಿ ಕೆಲವು ಸಂಸ್ಥೆಗಳಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ಬಯಲಿಗೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾರಣಕ್ಕಾಗಿ ಅಬ್ದುಲ್ಲ ಆವರ ಹತ್ಯೆಗೆ ಈ ಮುಂಚೆಯೂ ಪ್ರಯತ್ನ ನಡೆದಿತ್ತು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ಆದರೆ ಆ ಬಗ್ಗೆಯೂ ಕ್ರಮ ಆಗಿಲ್ಲ. ಕಳೆದ ಒಂದು ವರ್ಷದ ಹಿಂದೆ ಮಸೀದಿಯೊಂದರಲ್ಲಿ ನಡೆದ ವಾದ ವಿವಾದಕ್ಕೆ ಸಂಬಂಧಿಸಿ ದಂತೆ ಕೆಲವರ ಮೇಲೆ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಅಬ್ದುಲ್ಲ ಅವರು ಬೆಂಗಳೂರಿನಲ್ಲಿದ್ದರು. ಪ್ರಕರಣ ನಡೆದು ಒಂದು ವರ್ಷ ಕಳೆದ ನಂತರ ಕಳೆದ ತಿಂಗಳಲ್ಲಿ ಅಬ್ದುಲ್ಲ ಅವರ ಹೆಸರನ್ನು ಪ್ರಕರಣದಲ್ಲಿ ಸೇರಿಸಲಾಗಿದೆ. ಇದರಿಂದಾಗಿ ಅಬ್ದುಲ್ಲ ಅವರ ವಿರುದ್ಧ ವ್ಯವಸ್ಥಿತವಾಗಿ ಸಂಚು ರೂಪಿಸುತ್ತಿರುವುದು ಇದರಿಂದ ಸಾಬೀತಾಗಿದೆ ಎಂದು ಅವರು ತಿಳಿಸಿದರು.

ಸಮಾಜ ಘಾತುಕ ಶಕ್ತಿಗಳ ಹುಟ್ಟಡಗಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ. ಈ ನಿಟ್ಟಿನಲ್ಲಿ ಅಬ್ದುಲ್ಲ ಅವರ ಹತ್ಯೆ ಯತ್ನದ ನೈಜ ಆರೋಪಿ ಗಳನ್ನು ಕೂಡಲೇ ಬಂಧಿಸಿ ಸೂಕ್ತ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು. ವೆನ್ಜ್ ಅಬ್ದುಲ್ಲ ಅವರ ಸಹೋದರರಾದ ಬದ್ರುದ್ದೀನ್, ನಿಯಾಝ್, ಸಂಬಂಧಿ ಮುಕ್ದೋಮ್, ರಿಯಾಝ್ ಬಿಕರ್ನಕಟ್ಟೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X