Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್...

ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್‌ರಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Nov 2020 5:00 PM IST
share
ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್‌ರಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು, ನ.20: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ‌ಮೂರ್ತಿ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಸಂಪತ್‌ರಾಜ್ ರನ್ನು ಸಿಸಿಬಿ ಪೊಲೀಸರು ನಾಲ್ಕು ದಿನಗಳ ಹಿಂದೆ ಬಂಧಿಸಿದ್ದರು. ಮೂರು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಶುಕ್ರವಾರ ನಗರದ 67ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಕಾತ್ಯಾಯಿನಿ ಅವರು ಆರೋಪಿ ಸಂಪತ್ ರಾಜ್ ನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ಎನ್‌ಐಎ ಪರ ವಾದಿಸಿದ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ಆರೋಪಿಯನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ನ್ಯಾಯಾಲಯ ಆರೋಪಿಯನ್ನು 23 ಮತ್ತು 24 ರಂದು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿಯೇ ವಿಚಾರಣೆ ನಡೆಸಲು ಅವಕಾಶ ನೀಡಿತು.

ಇನ್ನು ಸಂಪತ್ ರಾಜ್ ಪರ ವಕೀಲರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಾರದು. ಬದಲಿಗೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಬೇಕು ಎಂದು ಕೋರಿದರು. ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಸಿಬಿಗೆ ಸೂಚಿಸಿದ ನ್ಯಾಯಾಧೀಶರು ವಿಚಾರಣೆಯನ್ನು ನ.24ಕ್ಕೆ ಮುಂದೂಡಿದರು. ನ.24ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಜಾಮೀನು ಮಂಜೂರಾಗುವರೆಗೂ ಸಂಪತ್ ರಾಜ್ ಜೈಲುವಾಸ ಅನುಭವಿಸಬೇಕಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿಸಿದ ಆರೋಪ ಸಂಪತ್ ರಾಜ್ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದರು. ಇದೇ ವೇಳೆ ತನಗೆ ಅನಾರೋಗ್ಯ ಎಂದು ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಬಳಿಕ ಯಾವುದೇ ಮಾಹಿತಿ ನೀಡದೆ ಆಸ್ಪತ್ರೆಯಿಂದ ಪರಾರಿಯಾಗಿದ್ದರು.

ಇದರ ನಡುವೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯೂ ಪುರಸ್ಕೃತಗೊಂಡಿರಲಿಲ್ಲ. ಆ ಬಳಿಕ ಸಂಪತ್ ರಾಜ್ ತಲೆ ಮರೆಸಿಕೊಂಡಿದ್ದರು. ಗಲಭೆ ಸಂಬಂಧಿತ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ಆರೋಪಿ ಸಂಪತ್ ರಾಜ್ ನ್ನು ಬಂಧಿಸಲು ಪೊಲೀಸರು ಲಭ್ಯವಿರುವ ಎಲ್ಲ ಕ್ರಮ ಜರುಗಿಸಬೇಕು ಎಂದು ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X