ನ.21ರಂದು ಬೆಳ್ಮಣ್ಣು ಪುನಾರುನಲ್ಲಿ ಕೃಷಿ ಮಾಹಿತಿ
ಉಡುಪಿ, ನ.20: ಉಡುಪಿ ಜಿಲ್ಲಾ ಕೃಷಿಕ ಸಂಘ ಮತ್ತು ಶ್ರೀ ಶಾಸ್ತಾವು ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಪುನಾರು ಸಹಯೋಗದಲ್ಲಿ ನ.21ರ ಶನಿವಾರ ಅಪರಾಹ್ನ 1:30ಕ್ಕೆ ಬೆಳ್ಮಣ್ಣು ಪುನಾರು ಶ್ರೀಶಾಸ್ತಾವು ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ಮಲ್ಲಿಗೆ ಮತ್ತು ಅಡಿಕೆ ಕೃಷಿ ಮಾಹಿತಿ ಶಿಬಿರ ನಡೆಯಲಿದೆ.
ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘದ ನಿತ್ಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪ್ರಧಾನ ಅರ್ಚಕ ಅಶೋಕ ಉಡುಪ ಉದ್ಘಾಟಿಸಲಿದ್ದಾರೆ. ಸಭೆಯಲ್ಲಿ ಭಜನಾ ಮಂಡಳಿಯ ದಿನೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಮತ್ತು ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ಭಾಗವಹಿಸಲಿದ್ದಾರೆ.
ವೈಜ್ಞಾನಿಕ ಹಾಗೂ ಕಡಿಮೆ ಖರ್ಚಿನಲ್ಲಿ ಲಾಭದಾಯಕವಾಗಿ ಸಾವಯವ ಕ್ರಮದಲ್ಲಿ ಮಲ್ಲಿಗೆ ಮತ್ತು ಅಡಿಕೆ ಕೃಷಿ ಮಾಡುವ ಕ್ರಮಗಳು, ಅವುಗಳ ನಾಟಿ, ಕೀಟ-ರೋಗ ಬಾಧೆಗಳ ನಿರ್ವಹಣೆ ಕುರಿತ ಸಮಗ್ರ ಮಾಹಿತಿಗಳನ್ನು ಶಿಬಿರದಲ್ಲಿ ನೀಡಲಾಗುವುದು ಎಂದು ಕೃಷಿಕ ಸಂಘದ ಪ್ರಕಟಣೆ ತಿಳಿಸಿದೆ.