Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ...

​ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಪ್ರಸ್ತಾಪ ಏಕಾಏಕಿ ರದ್ದು: ಉಡುಪಿ ಜಿಲ್ಲೆಯ ಕ್ರೈಸ್ತ ಮುಖಂಡರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ20 Nov 2020 8:24 PM IST
share
​ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಪ್ರಸ್ತಾಪ ಏಕಾಏಕಿ ರದ್ದು: ಉಡುಪಿ ಜಿಲ್ಲೆಯ ಕ್ರೈಸ್ತ ಮುಖಂಡರ ಅಸಮಾಧಾನ

ಉಡುಪಿ, ನ.20: ರಾಜ್ಯ ಸರಕಾರ 2019-2020ನೆ ಸಾಲಿನ ಬಜೆಟ್‌ನಲ್ಲಿ 200ಕೋಟಿ ರೂ. ಅನುದಾನ ಮೀಸಲಿರಿಸಿ ಘೋಷಿಸಿರುವ ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯ ಪ್ರಸ್ತಾಪವನ್ನು ಉದ್ಘಾಟನೆಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ರದ್ದು ಮಾಡಿದೆ ಎಂದು ಉಡುಪಿ ಜಿಲ್ಲೆಯ ಕ್ರೈಸ್ತ ಸಮುದಾಯದ ಮುಖಂಡರು ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ರಾಜ್ಯದಲ್ಲಿನ ಸಣ್ಣ ಪುಟ್ಟ ಸಮುದಾಯಗಳಿಗೂ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುತ್ತಿರುವ ಸರಕಾರ, ಕ್ರೈಸ್ತರ ನಿಗಮವನ್ನು ರದ್ದುಗೊಳಿಸುವ ಮೂಲಕ ರಾಜ್ಯದಲ್ಲಿರುವ 35ಲಕ್ಷಕ್ಕೂ ಅಧಿಕ ಕ್ರೈಸ್ತ ಸಮುದಾಯದ ಕನಸುಗಳನ್ನು ನುಚ್ಚುನೂರು ಮಾಡಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಯಾವ ಕಾರಣಕ್ಕೆ ಮತ್ತು ಯಾರ ಒತ್ತಡಕ್ಕೆ ಮಣಿದು ಈ ಪ್ರಸ್ತಾಪವನ್ನು ಕೈಬಿಟ್ಟಿದ್ದಾರೆ ಎಂಬುದಾಗಿ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ರಾಜ್ಯದಲ್ಲಿನ ಸಣ್ಣ ಪುಟ್ಟ ಸಮುದಾಯಗಳಿಗೂ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುತ್ತಿರುವ ಸರಕಾರ, ಕ್ರೈಸ್ತರ ನಿಗಮವನ್ನು ರದ್ದುಗೊಳಿಸುವ ಮೂಲಕ ರಾಜ್ಯದಲ್ಲಿರುವ 35ಲಕ್ಷಕ್ಕೂ ಅಧಿಕ ಕ್ರೈಸ್ತ ಸಮುದಾಯದ ಕನಸುಗಳನ್ನು ನುಚ್ಚುನೂರು ಮಾಡಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಯಾವ ಕಾರಣಕ್ಕೆ ಮತ್ತು ಯಾರ ಒತ್ತಡಕ್ಕೆ ಮಣಿದು ಈ ಪ್ರಸ್ತಾಪವನ್ನು ಕೈಬಿಟ್ಟಿದ್ದಾರೆ ಎಂಬುದಾಗಿ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಕ್ರೈಸ್ತ ಸಮುದಾಯವು ರಾಜ್ಯದಲ್ಲಿ ಶಿಕ್ಷಣ, ಸಮಾಜ ಸೇವೆ ಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲಿ ಸಾಕಷ್ಟು ಸೇವೆ ಹಾಗೂ ಕೊಡುಗೆಗಳನ್ನು ನೀಡಿದೆ. ಕ್ರೈಸ್ತರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರಕಾರದ ಜೊತೆಗೂಡಿ, ಶಾಂತಿ ಹಾಗೂ ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿದ್ದಾರೆ. ಬಹಳಷ್ಟು ಬಡ ಕ್ರೈಸ್ತರು ಸರಕಾರದ ಯೋಜನೆಗಳನ್ನು ಅವಲಂಬಿಸಿರುವುದರಿಂದ, ನಿಗಮ ರದ್ಧತಿಯಿಂದ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕ್ರೈಸ್ತರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ ಎಂದು ಅವರು ತಿಳಿಸಿದರು.

ಆದುದರಿಂದ ಸರಕಾರ ಆದಷ್ಟು ಶೀಘ್ರವಾಗಿ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು. ಅಲ್ಲದೆ ಈವರೆಗೆ ಕ್ರೈಸ್ತರಿಗೆ ದೊರಕುತ್ತಿದ್ದ ಸವಲತ್ತುಗಳೊಂದಿಗೆ ಅಲ್ಪಸಂಖ್ಯಾತ ಇಲಾಖೆಯಿಂದ ನ್ಯಾಯಯುತವಾಗಿ ದೊರಕಬೇಕಾಗಿದ್ದ ಸೌಲಭ್ಯಗಳನ್ನೂ ಕೂಡ ಈ ನಿಗಮದ ಅಡಿಯಲ್ಲಿ ಸಿಗುವಂತೆ ಮಾಡಬೇಕು. 2012ರಲ್ಲಿ ಯಡಿಯೂರಪ್ಪ ಅವರೇ ಕ್ರೈಸ್ತ ಅಭಿವೃದ್ಧಿ ಸಮಿತಿಯನ್ನು ರಚಿಸಿ 50ಕೋಟಿ ರೂ. ಅನುದಾನವನ್ನು ನೀಡಿದ್ದರು. ಇದೀಗ ಅವರೇ ಘೋಷಿಸಿದ ನಿಗಮವನ್ನು ಅವರೇ ಏಕಾಏಕಿ ರದ್ದು ಮಾಡಿದ್ದಾರೆ. ಈ ಸಂಬಂಧ ಸದ್ಯವೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ರೊಬರ್ಟ್ ಮಿನೇಜಸ್, ಕರ್ನಾಟಕ ಕ್ರೈಸ್ತ ಸಂಘ ಸಂಸ್ಥೆಗಳ ಅಂತಾರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷ ಡಾ.ನೇರಿ ಕರ್ನೆಲಿಯೋ, ಗೌರವಾಧ್ಯಕ್ಷ ಲೂವಿಸ್ ಲೋಬೊ, ಉಡುಪಿ ಸೈಂಟ್ ಮೇರಿಸ್ ಒರ್ಥೋಡೋಕ್ಸ್ ಸಿರಿಯನ್ ಚರ್ಚ್‌ನ ಟ್ರಸ್ಟಿ ತೋಮಸ್ ಸುವಾರಿಸ್, ಕಾರ್ಯದರ್ಶಿ ಆ್ಯಲನ್ ರೋಹನ್ ವಾಝ್, ಕೆಥೋಲಿಕ್ ಸಭಾ ಮಾಜಿ ಅಧ್ಯಕ್ಷ ಆಲ್ವಿನ್ ಕ್ವಾಡ್ರಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X