Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದ ಐಪಿಎಸ್‌ ಅಧಿಕಾರಿ ಡಿ.ರೂಪಾ...

ಕರ್ನಾಟಕದ ಐಪಿಎಸ್‌ ಅಧಿಕಾರಿ ಡಿ.ರೂಪಾ ವಿರುದ್ಧ ಕಂಗನಾ ಕೆಂಗಣ್ಣು: ಟ್ವೀಟ್ ಸಮರಕ್ಕೆ ಕಾರಣವಾಯಿತು 'ಪಟಾಕಿ'

ವಾರ್ತಾಭಾರತಿವಾರ್ತಾಭಾರತಿ20 Nov 2020 9:22 PM IST
share
ಕರ್ನಾಟಕದ ಐಪಿಎಸ್‌ ಅಧಿಕಾರಿ ಡಿ.ರೂಪಾ ವಿರುದ್ಧ ಕಂಗನಾ ಕೆಂಗಣ್ಣು: ಟ್ವೀಟ್ ಸಮರಕ್ಕೆ ಕಾರಣವಾಯಿತು ಪಟಾಕಿ

ಬೆಂಗಳೂರು: ದೀಪಾವಳಿಯಂದು ಪಟಾಕಿ ಸಿಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಡಿ.ರೂಪಾ ಹಾಗೂ ಬಾಲಿವುಡ್ ನಟ ಕಂಗನಾ ನಡುವೆ ಟ್ವಿಟರ್ ವಾಗ್ವಾದ ನಡೆದಿದ್ದು, ಡಿ.ರೂಪಾ ಅವರನ್ನು ಅಮಾನತುಗೊಳಿಸಬೇಕು ಎಂದು ಕಂಗನಾ ಒತ್ತಾಯಿಸಿದ್ದಾರೆ.

ನ.14ರಂದು ಪಟಾಕಿ ನಿಷೇಧ ಕುರಿತು ಟ್ವೀಟ್ ಮಾಡಿದ್ದ ಡಿ.ರೂಪಾ ಅವರು 'ಪಟಾಕಿ ಸಿಡಿಸುವುದು ಹಿಂದೂ ಸಂಸ್ಕೃತಿ ಅಲ್ಲ ಎಂದಿದ್ದರು. ಇದು ನಟಿ ಕಂಗನಾ ಸೇರಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ''ಹಿಂದೂಗಳ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಪಟಾಕಿ ಸಿಡಿಸುವ ಸಂಸ್ಕೃತಿ ಬಗ್ಗೆ ಪ್ರಸ್ತಾಪಿಸಿಲ್ಲ. ಇದು ಯುರೋಪಿಯನ್ನರಿಂದ ಬಂದ ಪದ್ಧತಿ'' ಎಂದಿದ್ದರು. ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಹಲವರು, ಇದೇ ರೀತಿ ಇತರ ಧರ್ಮಗಳ ಪದ್ಧತಿಗಳನ್ನು ನೀವು ಪ್ರಶ್ನಿಸುತ್ತೀರಾ ಎಂದು ಕೇಳಿದ್ದಾರೆ.

ಡಿ.ರೂಪಾ ಅವರ ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ 'ಟ್ರೂ ಇಂಡಾಲಜಿ'(TrueIndology) ಎಂಬ ಖಾತೆ ಭಾರತದ ಪ್ರಾಚೀನ ಗ್ರಂಥಗಳಲ್ಲಿ ಪಟಾಕಿ ಉಲ್ಲೇಖಿಸಿದೆ ಎಂದು ತಿಳಿಸಿದ್ದಾರೆ. ಅದಕ್ಕೆ ರೂಪಾ ಅವರು ಉತ್ತರಿಸಿ, ಉಲ್ಲೇಖಿಸಿರುವ ಗ್ರಂಥಗಳ ಪುರಾವೆ ಒದಗಿಸುವಂತೆ ಸವಾಲು ಹಾಕಿದ್ದಾರೆ. ಇದೇ ವೇಳೆ ಈ ಖಾತೆ ಬಳಕೆದಾರರ ವಿರುದ್ಧ ಅವರು ಹರಿಹಾಯ್ದಿದ್ದು, 'ನಿಮ್ಮ ಸಮಯ ಮುಗಿದಿದೆ' ಎಂದು ತಿಳಿಸಿದ್ದರು. ಇಬ್ಬರ ನಡುವಿನ ವಾಗ್ವಾದ ಮುಂದುವರಿದಂತೆಯೇ, ಬುಧವಾರ ಟ್ವಿಟರ್ ಟ್ರೂ ಇಂಡಾಲಾಜಿ ಖಾತೆಯನ್ನು ನಿರ್ಬಂಧಿಸಿದೆ.

ಇನ್ನು ಈ ಖಾತೆಯನ್ನು ನಿರ್ಬಂಧಿದ್ದಕ್ಕೆ ನಟಿ ಕಂಗನಾ ಟ್ವಿಟರ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಪ್ರಶ್ನೆಗಳಳಿಗೆ ಉತ್ತರ ನೀಡದಿದ್ದರೆ, ನಿಮ್ಮ ಮನೆ ಮುರಿಯುತ್ತಾರೆ, ನಿಮ್ಮನ್ನು ಜೈಲಿಗಟ್ಟುತ್ತಾರೆ. ನಿಮ್ಮ ಧ್ವನಿ ಅಡಗಿಸುತ್ತಾರೆ. ಒಬ್ಬರ ಡಿಜಿಟಲ್​ ಗುರುತನ್ನು ತೆಗೆದು ಹಾಕುವುದು ವರ್ಚುಯಲ್​ ಜಗತ್ತಿನಲ್ಲಿ ಕೊಲೆಗಿಂತ ಕಡಿಮೆ ಅಪರಾಧವಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

''ಮೀಸಲಾತಿಯ ಅಡ್ಡಪರಿಣಾಮಗಳು. ಅನರ್ಹರು ಅಧಿಕಾರ ಪಡೆದಾಗ ಗಾಯ ವಾಸಿ ಮಾಡುವ ಬದಲು ಘಾಸಿಗೊಳಿಸುತ್ತಲೇ ಇರುತ್ತಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ನನಗೆ ಏನೂ ತಿಳಿದಿಲ್ಲ. ಆದರೆ ಅವರ ಅಸಾಮರ್ಥ್ಯದಿಂದಾಗಿ ಹತಾಶೆ ಹೊರಬರುತ್ತಿರುವುದಂತೂ ಖಂಡಿತ'' ಎಂದು ಕಂಗನಾ ಐಪಿಎಸ್‌ ಅಧಿಕಾರಿ ರೂಪಾ ಅವರ ನಡೆಯನ್ನು ಟೀಕಿಸಿದ್ದಾರೆ.

ಅಲ್ಲದೇ, ಡಿ.ರೂಪಾ ಅವರನ್ನು ಅಮಾನತುಗೊಳಿಸಬೇಕು ಎಂದು ಕಂಗನಾ ಒತ್ತಾಯಿಸಿದ್ದು, "ಅವರನ್ನು ಅಮಾನತುಗೊಳಿಸಬೇಕು. ಅವರಂತಹ ಪೊಲೀಸ್ ಅಧಿಕಾರಿಗಳು ಪೊಲೀಸ್ ಪಡೆಗೆ ನಾಚಿಕೆಗೇಡಿನ ಸಂಗತಿ. ಆಕೆ ಆಯ್ದುಕೊಂಡಿರುವ ಕೆಟ್ಟ ಮಾರ್ಗಗಳನ್ನು ನಾವು ತಡೆಯದೇ ಬಿಡಲಾರೆವು. #ShameOnYouIPSRoopa'' ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ, #BringBackTrueIndology ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಖಾತೆಯ ಅಮಾನತುಗೊಳಿಸುವ ಬಗ್ಗೆ ಅವರು ಟ್ವಿಟರ್ ಮತ್ತು ಅದರ ಮುಖ್ಯ ಕಾರ್ಯನಿರ್ವಾಹಕರನ್ನು ಪ್ರಶ್ನಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. "ಟ್ವಿಟರ್ ಇಂಡಿಯಾ ನಿಮ್ಮ ಪಕ್ಷಪಾತ ಮತ್ತು ಇಸ್ಲಾಮಿಸ್ಟ್ ಪ್ರಚಾರವು ಮುಜುಗರದ ಸಂಗತಿಯಾಗಿದೆ. ಟ್ರೂ ಇಂಡಾಲಜಿ ಖಾತೆಯನ್ನು ಏಕೆ ಅಮಾನತುಗೊಳಿಸಿದ್ದೀರಿ? ನಿಮಗೆ ನಾಚಿಕೆಯಾಗಬೇಕು. ಭಾರತದಲ್ಲಿ ನಿಮ್ಮನ್ನು ನಿಷೇಧಿಸುವ ದಿನಕ್ಕಾಗಿ ಕಾಯುತ್ತಿದ್ದೇನೆ. ಪ್ರಧಾನಿ ಟ್ವಿಟರ್ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇವೆ ”ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಗೃಹ ಇಲಾಖೆಯ ಕಾರ್ಯದರ್ಶಿ ಆಗಿರುವ ಡಿ.ರೂಪಾ ಅವರು ಇಂದು ಪ್ರತಿಕ್ರಿಯೆ ನೀಡಿದ್ದು, ನಾನು ಕಾನೂನು ಪಾಲನೆ ದೃಷ್ಟಿಯಿಂದ ಟ್ವೀಟ್ ಮಾಡಿದ್ದೇನೆ ಹೊರತು ಬೇರೆ ಉದ್ದೇಶವಿಲ್ಲ. ಪಟಾಕಿ ಸಿಡಿಸದಂತೆ ಜನರಿಗೆ ತಿಳಿಸಿದ್ದೆ ಅಷ್ಟೇ. ನನ್ನ ಶ್ರದ್ಧೆ, ಪ್ರಾಮಾಣಿಕತೆ ಜನರಿಗೆ ಗೊತ್ತಿದೆ. ಅಲ್ಲದೆ, ನಾನು ಕಾನೂನು ಪಾಲನೆ ಬಿಟ್ಟು ಬೇರೆನನ್ನೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

Imposition should be fair. Crackers are not basically Hindu. They came with advent of Europeans. Deepawali is more about diyas, distributing sweets etc. Crackers cannot be only source of pleasure.

— D Roopa IPS (@D_Roopa_IPS) November 14, 2020

Side effects of reservations, when unworthy and undeserving gets the power they don’t heal they only hurt, I don’t know anything about her personal life but I guarantee that her frustration is stemming out of her incompetence #BringBackTrueIndology https://t.co/BUrVm1Fjz3

— Kangana Ranaut (@KanganaTeam) November 18, 2020

When they don’t have answers to your questions they break your house, put you in jail, gag your voice or kill your digital identity. Eliminating one’s digital identity is no less than a murder in virtual world, there must be strict laws against it #BringBackTrueIndology https://t.co/tvPiWidQez

— Kangana Ranaut (@KanganaTeam) November 18, 2020

@jack @Twitter @TwitterIndia your bias and Islamist’s propaganda is embarrassing, why did you suspend @TIinExile ? Because he busted fake narratives of our history? Shame on you, waiting for the day when you will be banned in India, hope @PMOIndia takes action against twitter.

— Kangana Ranaut (@KanganaTeam) November 18, 2020

Mam true indology account was suspended because he fought in a conversation with police officer Roopa. Please trend bring back true indology

— Rohit. (@Rohithkumar_) November 18, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X