Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇಶದೊಳಗೆ ಚೀನಾದ ಗ್ರಾಮವಿಲ್ಲ: ಭೂತಾನ್

ದೇಶದೊಳಗೆ ಚೀನಾದ ಗ್ರಾಮವಿಲ್ಲ: ಭೂತಾನ್

ರಸ್ತೆ, ಮನೆಗಳನ್ನು ತೋರಿಸುತ್ತಿರುವ ಉಪಗ್ರಹ ಚಿತ್ರಗಳು

ವಾರ್ತಾಭಾರತಿವಾರ್ತಾಭಾರತಿ20 Nov 2020 11:11 PM IST
share

ಥಿಂಪು (ಭೂತಾನ್), ನ. 20: ಭೂತಾನ್ ಭೂಪ್ರದೇಶದಲ್ಲಿ ಎರಡು ಕಿಲೋಮೀಟರ್‌ಗಿಂತಲೂ ಹೆಚ್ಚು ಒಳಗೆ ವಿವಾದಾಸ್ಪದ ಡೋಕಾಲ ಪ್ರಸ್ಥಭೂಮಿಯ ಸಮೀಪ ಚೀನಾವು ಗ್ರಾಮವೊಂದನ್ನು ನಿರ್ಮಿಸಿದೆ ಎನ್ನುವ ವರದಿಗಳನ್ನು ಭೂತಾನ್ ಶುಕ್ರವಾರ ನಿರಾಕರಿಸಿದೆ.

ಉಪಗ್ರಹ ಚಿತ್ರಗಳು ಭೂತಾನ್ ಭೂಪ್ರದೇಶದಲ್ಲಿ ಚೀನಾ ಸ್ಥಾಪಿಸಿರುವ ಗ್ರಾಮವನ್ನು ಸ್ಪಷ್ಟವಾಗಿ ತೋರಿಸಿರುವ ಗ್ರಾಮದ ವಿವರವಾದ ನಕ್ಷೆಯ ಹೊರತಾಗಿಯೂ ಭೂತಾನ್ ಈ ನಿರಾಕರಣೆಯನ್ನು ನೀಡಿದೆ.

ಭೂತಾನ್ ತನ್ನದೆಂದು ಹೇಳಿಕೊಳ್ಳುವ ಪ್ರದೇಶದಲ್ಲೇ ಚೀನಾದ ಗ್ರಾಮವು ಸ್ಥಾಪನೆಯಾಗಿದೆ ಎನ್ನುವುದನ್ನು ಭೂತಾನ್ ಸರಕಾರದ ಅಧಿಕೃತ ನಕ್ಷೆಯೂ ತೋರಿಸಿದೆ.

ಚೀನಾದ ಅತಿಕ್ರಮಣಕ್ಕೆ ಸಂಬಂಧಿಸಿದ ‘ಎನ್‌ಡಿಟಿವಿ’ ವರದಿಗೆ ಪ್ರತಿಕ್ರಿಯಿಸಿರುವ ಭೂತಾನ್‌ನ ಭಾರತ ರಾಯಭಾರಿ ಮೇಜರ್ ಜನರಲ್ ವೆಟ್ಸೋಪ್ ನಮ್‌ಗ್ಯೆಲ್, ‘‘ಭೂತಾನ್ ಒಳಗೆ ಚೀನಾದ ಗ್ರಾಮವಿಲ್ಲ’’ ಎಂದಿದ್ದಾರೆ.

ವಿವಾದಿತ ಪ್ರದೇಶದಲ್ಲಿನ ಗಡಿಯನ್ನು ಮರುಹೊಂದಿಸುವ ಬಗ್ಗೆ ಭೂತಾನ್ ಮತ್ತು ಚೀನಾ ನಡುವೆ ಒಪ್ಪಂದವೇನಾದರೂ ಏರ್ಪಟ್ಟಿದೆಯೇ ಎಂಬ ಪ್ರಶ್ನೆಗೆ, ‘‘ಗಡಿ ವಿವಾದದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’’ ಎಂದರು.

ಅದೇ ವೇಳೆ, ಭೂತಾನ್ ಮತ್ತು ಚೀನಾಗಳು ಗಡಿ ವಿವಾದಕ್ಕೆ ಸಂಬಂಧಿಸಿ ಮಾತುಕತೆಯಲ್ಲಿ ತೊಡಗಿವೆ ಎಂಬುದನ್ನು ಅವರು ಖಚಿತಪಡಿಸಿದರು. ಆದರೆ, ಕೊರೋನ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ನಿಧಾನವಾಗಿ ಸಾಗುತ್ತಿದೆ.

ಚೀನಾದ ಸರಕಾರಿ ಒಡೆತನದ ಸಿಜಿಟಿಎನ್ ಟಿವಿಯ ಹಿರಿಯ ಅಧಿಕಾರಿ ಶೆನ್ ಶಿವೇ ಗುರುವಾರ ಭೂತಾನ್ ಗಡಿಯ ಒಳಗೆ ಚೀನಾ ಸ್ಥಾಪಿಸಿರುವ ಗ್ರಾಮದ ಹಲವು ಚಿತ್ರಗಳನ್ನು ಪ್ರಕಟಿಸಿದ್ದಾರೆ. ಚಿತ್ರಗಳು ರಸ್ತೆ ಮತ್ತು ನದಿಯೊಂದರ ಪಕ್ಕದಲ್ಲಿ ನಿರ್ಮಿಸಲಾಗಿರುವ ಮರದ ಮನೆಗಳನ್ನು ತೋರಿಸಿವೆ. ‘‘ಈಗ, ಹೊಸದಾಗಿ ನಿರ್ಮಿಸಲಾಗಿರುವ ಪಂಗ್ಡ ಗ್ರಾಮದಲ್ಲಿ ಖಾಯಂ ನಿವಾಸಿಗಳು ವಾಸಿಸುತ್ತಿದ್ದಾರೆ. ಗ್ರಾಮವು ಯಾಡೊಂಗ್ ಕೌಂಟಿಯಿಂದ ದಕ್ಷಿಣಕ್ಕೆ 35 ಕಿ.ಮೀ. ದೂರದಲ್ಲಿರುವ ಕಣಿವೆಯ ಉದ್ದಕ್ಕೂ ಹಬ್ಬಿದೆ. ಗ್ರಾಮದ ಸ್ಥಳವನ್ನು ತೋರಿಸುವ ನಕ್ಷೆ ಇಲ್ಲಿದೆ’’ ಎಂಬುದಾಗಿಯೂ ಅವರು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X