Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ 4 ರವಿವಾರ ಮಿಂಚಿನ...

ದ.ಕ. ಜಿಲ್ಲೆಯಲ್ಲಿ 4 ರವಿವಾರ ಮಿಂಚಿನ ನೋಂದಣಿ: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ21 Nov 2020 4:06 PM IST
share
ದ.ಕ. ಜಿಲ್ಲೆಯಲ್ಲಿ 4 ರವಿವಾರ ಮಿಂಚಿನ ನೋಂದಣಿ: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ನ.21: ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ಅವಕಾಶ ನೀಡಲಾಗಿದ್ದು, ನ.22 ಸೇರಿದಂತೆ ಮುಂದಿನ ನಾಲ್ಕು ರವಿವಾರಗಳಂದು (ನ.29, ಡಿ.6 ಮತ್ತು 13ರಂದು) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಿಂಚಿನ ನೋಂದಣಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಎಲ್ಲ ಮತಗಟ್ಟೆಗಳಲ್ಲಿ ಈ ದಿನಗಳಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ಎಲ್ಲ ಅರ್ಹ ಮತದಾರರು ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಬಹುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಈಗಾಗಲೇ ನ.18ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಡಿ.17ರವರೆಗೆ ಹಕ್ಕು ಮತ್ತು ಆಕ್ಷೇಪ ಸ್ವೀಕರಿಸಲಾಗುವುದು. ಜ.7ಕ್ಕೆ ಇವುಗಳ ವಿಲೇವಾರಿ ನಡೆಯಲಿದೆ. ಜ.18ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು 2021ರ ಜನವರಿ 1ಕ್ಕೆ 18 ವರ್ಷ ವಯಸ್ಸಾಗಿರಬೇಕು. ವಯಸ್ಸಿನ ಬಗ್ಗೆ ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾರ್ಸ್‌ಪೋರ್ಟ್, ಎಸೆಸೆಲ್ಸಿ/ಪಿಯುಸಿ ಅಂಕಪಟ್ಟಿ, ಪಾನ್ ಕಾರ್ಡ್‌ನ್ನು ದಾಖಲೆಯಾಗಿ ಒದಗಿಸಬೇಕು, ವಾಸಸ್ಥಳದ ಬಗ್ಗೆ ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಪಾಸ್‌ಪೋರ್ಟ್, ವಾಹನ ಚಾಲನಾ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ ಮುಂತಾದವುಗಳನ್ನು ನೀಡಬಹುದು. ಜತೆಗೆ ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ ನೀಡಬೇಕು ಎಂದರು.

18 ವರ್ಷ ಪೂರೈಸಿದ ಹೊಸ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ನಮೂನೆ 6ರಲ್ಲಿ ಅರ್ಜಿ ನೀಡಬೇಕು. ಅನಿವಾಸಿ ಭಾರತೀಯರು ಹೆಸರು ಸೇರ್ಪಡೆಗೆ ನಮೂನೆ 6 ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ -7, ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು (ಹೆಸರು, ತಂದೆಯ ಹೆಸರು, ವಿಳಾಸ, ವಯಸ್ಸು, ಲಿಂಗ) ತಿದ್ದುಪಡಿ ಮಾಡಲು ನಮೂನೆ -8, ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭ ನಮೂನೆ -8ಎಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

2020ರ ಮತದಾರರ ಪಟ್ಟಿಯ ಪ್ರಕಾರ ಜಿಲ್ಲೆಯಲ್ಲಿ 17,23,960 ಮತದಾರರಿದ್ದಾರೆ. ನ.18ರಂದು ಪ್ರಕಟವಾದ ಕರಡು ಮತದಾರರ ಪಟ್ಟಿಯಲ್ಲಿ 17,32,641 ಮಂದಿ ಮತದಾರರಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲೆಯ ಮತದಾರರ ನೋಂದಣಾಧಿಕಾರಿಯನ್ನಾಗಿ ಸಹಾಯಕ ಆಯುಕ್ತರು, ಸಹಾಯಕ ಅಧಿಕಾರಿಯನ್ನಾಗಿ ತಹಶೀಲ್ದಾರ್ ಅವರನ್ನು ನೇಮಿಸಲಾಗಿದೆ ಎಂದರು.

ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟುಹೋಗಿದೆ, ವಿಳಾಸ, ವಾರ್ಡ್ ಬದಲಾಗಿದೆ, ವಯಸ್ಸು, ಜನ್ಮದಿನಾಂಕ ಬದಲಾಗಿದೆ ಎಂದು ಮತದಾರರು ಚುನಾವಣೆ ಸಂದರ್ಭ ದೂರುವ ಬದಲಿಗೆ ಈಗ ಮತದಾರರ ನೋಂದಣಾಧಿಕಾರಿ, ಸಹಾಯಕ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿ ಲೋಪದೋಷಗಳಿದ್ದರೆ ಸರಿಪಡಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಬಳಿಯೂ ಪರಿಶೀಲನೆ ನಡೆಸಬಹುದು. www.ceokarnataka.kar.nic.in , www.nvsp.in, www.dk.nic.inನಲ್ಲಿ ವಿವರ ಪರಿಶೀಲಿಸಬಹುದು. ಮತದಾರರ ಸಹಾಯವಾಣಿ 1950ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X