Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2021ನೇ ಸಾಲಿನ ರಜಾ ದಿನಗಳ ಪಟ್ಟಿ ಪ್ರಕಟ

2021ನೇ ಸಾಲಿನ ರಜಾ ದಿನಗಳ ಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ21 Nov 2020 6:09 PM IST
share
2021ನೇ ಸಾಲಿನ ರಜಾ ದಿನಗಳ ಪಟ್ಟಿ ಪ್ರಕಟ

ಬೆಂಗಳೂರು, ನ. 21: ರಾಜ್ಯ ಸರಕಾರವು 2021ನೆ ಸಾಲಿನ 'ಸಾರ್ವತ್ರಿಕ ರಜಾ ದಿನಗಳ ಪಟ್ಟಿ'ಯನ್ನು ಬಿಡುಗಡೆ ಮಾಡಿದ್ದು, ರವಿವಾರ, ಎರಡನೇ ಮತ್ತು ನಾಲ್ಕನೆ ಶನಿವಾರಗಳಲ್ಲದೆ ಒಟ್ಟು 20 ದಿನಗಳ ರಜೆಯನ್ನು ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಮುಹಮ್ಮದ್ ನಯೀಮ್ ಮೊಮಿನ್ ಆದೇಶ ಹೊರಡಿಸಿದ್ದಾರೆ.

2021ರ ಜನವರಿ 14 ಮಕರ ಸಂಕ್ರಾಂತಿ, ಜನವರಿ 26 ಗಣರಾಜ್ಯೋತ್ಸವ, ಮಾರ್ಚ್ 11 ಮಹಾ ಶಿವರಾತ್ರಿ, ಎಪ್ರಿಲ್ 2 ಗುಡ್ ಫ್ರೈಡೇ, ಎಪ್ರಿಲ್ 13 ಯುಗಾದಿ, ಎಪ್ರಿಲ್ 14 ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮೇ 1 ಕಾರ್ಮಿಕ ದಿನಾಚರಣೆ, ಮೇ 14 ಬಸವ ಜಯಂತಿ/ ರಂಝಾನ್, ಜುಲೈ 21 ಬಕ್ರೀದ್, ಆಗಸ್ಟ್ 20  ಮೊಹರಂ ಕಡೇ ದಿನ.

ಸೆಪ್ಟೆಂಬರ್ 10 ವರಸಿದ್ಧಿ ವಿನಾಯಕ ವ್ರತ, ಅಕ್ಟೋಬರ್ 2 ಗಾಂಧಿ ಜಯಂತಿ, ಅಕ್ಟೋಬರ್ 6 ಮಹಾಲಯ ಅಮವಾಸ್ಯೆ, ಅಕ್ಟೋಬರ್ 14 ಮಹಾನವಮಿ, ಆಯುಧ ಪೂಜೆ, ಅಕ್ಟೋಬರ್ 15 ವಿಜಯ ದಶಮಿ, ಅಕ್ಟೋಬರ್ 20 ಮಹರ್ಷಿ ವಾಲ್ಮೀಕಿ ಜಯಂತಿ/ಮೀಲಾದುನ್ನಬಿ, ನವೆಂಬರ್ 1 ಕನ್ನಡ ರಾಜ್ಯೋತ್ಸವ, ನವೆಂಬರ್ 3 ನರಕ ಚತುರ್ದಶಿ, ನವೆಂಬರ್ 5 ಬಲಿ ಪಾಢ್ಯಮಿ, ದೀಪಾವಳಿ ಹಾಗೂ ನವೆಂಬರ್ 22 ಕನಕದಾಸ ಜಯಂತಿ ಸಾರ್ವತ್ರಿಕ ರಜೆ ಎಂದು ಪ್ರಕಟಿಸಲಾಗಿದೆ.

ಎಪ್ರಿಲ್ 25ರಂದು ಮಹಾವೀರ ಜಯಂತಿ ಹಾಗೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ರವಿವಾರ ಬರಲಿದೆ. ಡಿಸೆಂಬರ್ 25ರಂದು ಕ್ರಿಸ್‍ಮಸ್ ನಾಲ್ಕನೆ ಶನಿವಾರದಂದು ಬರಲಿದೆ. ಹಾಗಾಗಿ ಈ ದಿನಗಳಂದು ಸಾರ್ವತ್ರಿಕ ರಜೆ ಘೋಷಿಸಿಲ್ಲ.

ಕೊಡವರಿಗೆ ವಿಶೇಷ ರಜೆ: ಸೆಪ್ಟೆಂಬರ್ 3ರ ಶುಕ್ರವಾರದಂದು ‘ಕೈಲ್ ಮುಹೂರ್ತ'ಕ್ಕೆ, ಅಕ್ಟೋಬರ್ 18ರ ಸೋಮವಾರದಂದು ತುಲಾ ಸಂಕ್ರಮಣಕ್ಕೆ ಮತ್ತು ನವೆಂಬರ್ 20ರ ಶನಿವಾರದಂದು ‘ಹುತ್ತರಿ ಹಬ್ಬ’ಕ್ಕೆ ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸ್ಲಿಂ ಸಮುದಾಯದ ಹಬ್ಬಗಳು ಘೋಷಿತ ದಿನಾಂಕದ ಬದಲು ಬೇರೆ ದಿನ ಬಂದರೆ, ನಿಗದಿತ ದಿನಾಂಕದಂದು ರಜೆ ನೀಡದೆ ಹಬ್ಬದ ದಿನ ಆ ಸಮುದಾಯದ ಸರಕಾರಿ ನೌಕರರಿಗೆ ರಜೆ ಮಂಜೂರು ಮಾಡಬಹುದು ಎಂದು ಆದೇಶದಲ್ಲಿ ಇದೇ ವೇಳೆ ಸ್ಪಷ್ಟನೆ ನೀಡಲಾಗಿದೆ.

ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರತ್ಯೇಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರತ್ಯೇಕ ರಜೆ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಸಾರ್ವತ್ರಿಕ ರಜಾ ದಿನಗಳ ಜೊತೆಗೆ ರಾಜ್ಯ ಸರಕಾರಿ ನೌಕರರು ಎರಡು ದಿನಗಳಿಗಳಿಗೆ ಮೀರದಂತೆ 2021ನೇ ವರ್ಷದಲ್ಲಿ ಅನುಬಂಧದಲ್ಲಿ ತಿಳಿಸಿರುವ ಪರಿಮಿತಿ ರಜೆಯನ್ನು ಪೂರ್ವಾನುಮತಿ ಪಡೆದು ಉಪಯೋಗಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X