Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ...

‘ಬ್ಯಾರಿ-ಕನ್ನಡ-ಇಂಗ್ಲಿಷ್-ಹಿಂದಿ-ರೋಮನ್-ಐಪಿ ಲಿಪಿ’ಯ ಶಬ್ಧಕೋಶ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 Nov 2020 6:32 PM IST
share
‘ಬ್ಯಾರಿ-ಕನ್ನಡ-ಇಂಗ್ಲಿಷ್-ಹಿಂದಿ-ರೋಮನ್-ಐಪಿ ಲಿಪಿ’ಯ ಶಬ್ಧಕೋಶ ಬಿಡುಗಡೆ

ಮಂಗಳೂರು,ನ.21: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಪ್ರಕಟಿಸಿದ ‘ಬ್ಯಾರಿ-ಕನ್ನಡ-ಇಂಗ್ಲಿಷ್-ಹಿಂದಿ-ರೋಮನ್-ಐಪಿ ಲಿಪಿ’ಯನ್ನು ಒಳಗೊಂಡ ಶಬ್ಧಕೋಶದ ಬಿಡುಗಡೆ ಕಾರ್ಯಕ್ರಮವು ಮಂಗಳೂರು ತಾಪಂ ಹೊಸ ಕಟ್ಟಡದಲ್ಲಿ ಶನಿವಾರ ನಡೆಯಿತು.

ಶಬ್ಧಕೋಶ ಬಿಡುಗಡೆಗೊಳಿಸಿ ಮಾತನಾಡಿದ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಕಳೆದ 11 ವರ್ಷದಲ್ಲಿ ಭಾಷಾ ಅಕಾಡಮಿಗಳ ಪೈಕಿ ಬ್ಯಾರಿ ಸಾಹಿತ್ಯ ಅಕಾಡಮಿಯು ಅನೇಕ ಮಹತ್ವದ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಬ್ಯಾರಿಯೇತರರಿಗೆ ಬ್ಯಾರಿ ಭಾಷೆ ಕಲಿಯುವ ಸಲುವಾಗಿ ಹೊಸ ಮಾದರಿಯ ಶಬ್ಧಕೋಶ ಹೊರತಂದಿರುವುದು ಶ್ಲಾಘನೀಯ. ಇತ್ತೀಚೆಗಷ್ಟೇ ಅಕಾಡಮಿಯು ಹೊಸ ಬ್ಯಾರಿ ಲಿಪಿ ರಚಿಸಿರುವುದು ಕೂಡ ಉತ್ತಮ ಬೆಳವಣಿಗೆಯಾಗಿದೆ. ಭವಿಷ್ಯದಲ್ಲಿ ಇದರ ಪರಿಷ್ಕರಣೆಗೆ ಅವಕಾಶ ನೀಡುವ ಅಗತ್ಯವೂ ಇದೆ ಎಂದರು.

ಅಖಿಲ ಭಾರತ ಬ್ಯಾರಿ ಪರಿಷತ್ ಮಾಜಿ ಅಧ್ಯಕ್ಷ ಅಬ್ದುಲ್ ಮಜೀದ್ ಸೂರಲ್ಪಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಬ್ಧಕೋಶ ಕೃತಿಯ ಮಾರ್ಗದರ್ಶಕರಾದ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಸ್ಟೀವನ್ ಕ್ವಾಡ್ರಸ್ ಮತ್ತು ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅಲ್ವಿನ್ ಡೇಸಾ ಅವರನ್ನು ಸನ್ಮಾನಿಸಲಾಯಿತು.

ಅತಿಥಿಗಳಾಗಿ ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಎಸ್.ಬಿ. ಅಪ್ಪಾಜಿ ಗೌಡ ಭಾಗವಹಿಸಿದ್ದರು.

ಬ್ಯಾರಿ ಭಾಷಾ ದಿನಾಚರಣೆ: ಬ್ಯಾರಿ ಭಾಷಾ ದಿನಾಚರಣೆಯ ಬಗ್ಗೆ ಮಾತನಾಡಿದ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಬ್ಯಾರಿ ಭಾಷೆಯಲ್ಲಿ ಸಾಕಷ್ಟು ಕೆಲಸ ಕಾರ್ಯಗಳಾಗುತ್ತಿದ್ದರೂ ಕೂಡ ಯುನೆಸ್ಕೋ ಪಟ್ಟಿಯಲ್ಲಿ ಇನ್ನೂ ಬ್ಯಾರಿ ಭಾಷೆಯ ಸೇರ್ಪಡೆ ಆಗಿಲ್ಲ. ಈ ನಿಟ್ಟಿನಲ್ಲಿ ಸಮುದಾಯದ ನಾಯಕರು ಪ್ರಯತ್ನ ನಡೆಸಬೇಕಿದೆ ಎಂದರು.

ರಿಜಿಸ್ಟ್ರಾರ್ ಪೂರ್ಣಿಮಾ ಬ್ಯಾರಿ ಭಾಷೆಯಲ್ಲೇ ಸ್ವಾಗತಿಸಿ ಭಾಷಾ ದಿನಾಚರಣೆಯ ಹಿರಿಮೆ ಹೆಚ್ಚಿಸಿದರು. ಅಕಾಡಮಿಯ ಸದಸ್ಯರಾದ ಶಂಶೀರ್ ಬುಡೋಳಿ, ರಾಧಾಕೃಷ್ಣ ನಾವಡ ಉಪಸ್ಥಿತರಿದ್ದರು. ಸದಸ್ಯ ಅಬ್ದುಲ್ ರಝಾಕ್ ಸಾಲ್ಮರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X