Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತವು ಬದಲಾವಣೆಯ ಮಹತ್ವದ ಹಂತದಲ್ಲಿದೆ,...

ಭಾರತವು ಬದಲಾವಣೆಯ ಮಹತ್ವದ ಹಂತದಲ್ಲಿದೆ, ಮುಂದಿನ 25 ವರ್ಷಗಳು ನಿರ್ಣಾಯಕ: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ21 Nov 2020 8:28 PM IST
share
ಭಾರತವು ಬದಲಾವಣೆಯ ಮಹತ್ವದ ಹಂತದಲ್ಲಿದೆ, ಮುಂದಿನ 25 ವರ್ಷಗಳು ನಿರ್ಣಾಯಕ: ಪ್ರಧಾನಿ

ಗಾಂಧಿನಗರ,ನ.21: ದೇಶದ ನೂರನೇ ಸ್ವಾತಂತ್ರ್ಯ ದಿನಾಚರಣೆಗೆ ಶನಿವಾರ ಪೀಠಿಕೆ ಹಾಕಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಬದಲಾವಣೆಯ ಮಹತ್ವದ ಹಂತದಲ್ಲಿ ಸಾಗುತ್ತಿದೆ ಮತ್ತು ಮುಂದಿನ 25 ವರ್ಷಗಳು ದೇಶದ ಪಾಲಿಗೆ ನಿರ್ಣಾಯಕವಾಗಿರಲಿವೆ ಎಂದು ಹೇಳಿದರು.

ಇಲ್ಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿವಿಯ ಘಟಿಕೋತ್ಸವದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಮೋದಿ,ಇಂದಿನ ಭಾರತವು ಬದಲಾವಣೆಯ ಮಹತ್ವದ ಹಂತದ ಮೂಲಕ ಸಾಗುತ್ತಿದೆ. ದೇಶದ ವರ್ತಮಾನ ಮತ್ತು ಭವಿಷ್ಯವನ್ನು ರೂಪಿಸುವ ಹೊಣೆಗಾರಿಕೆ ನಿಮ್ಮದಾಗಿದೆ. ಒಂದು ಕ್ಷಣ ಯೋಚಿಸಿ,ನಾವು ಸುವರ್ಣ ಯುಗದಲ್ಲಿ ಬದುಕುತ್ತಿದ್ದೇವೆ. ಈ ಬಗ್ಗೆ ನೀವು ಚಿಂತನೆ ಮಾಡಿರದಿರಬಹುದು,ಆದರೆ ನೀವು ಸುವರ್ಣ ಯುಗದಲ್ಲಿರುವುದು ಹೌದು ಎಂದರು.

ಭಾರತವು 2022ನೇ ಇಸ್ವಿಯಲ್ಲಿ ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಲಿದೆ ಮತ್ತು 2047ರಲ್ಲಿ ನಾವು ಸ್ವಾತಂತ್ರ್ಯದ ನೂರು ವರ್ಷಗಳನ್ನು ಪೂರೈಸಲಿದ್ದೇವೆ. ಅಂದರೆ ಈ 25 ವರ್ಷಗಳು ಅತ್ಯಂತ ಮುಖ್ಯವಾಗಿವೆ. ಭಾರತದ ಅತ್ಯಂತ ಮುಖ್ಯ 25 ವರ್ಷಗಳು ನಿಮ್ಮ ಬದುಕಿನ ಮುಖ್ಯ ವರ್ಷಗಳೂ ಆಗಿರಲಿವೆ ಎಂದ ಮೋದಿ,ಹೊಣೆಗಾರಿಕೆಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡಿರುವ ಜನರು ಮಾತ್ರ ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದು ತಿಳಿಸಿದರು.

ಕೊರೋನ ವೈರಸ್ ಸಾಂಕ್ರಾಮಿಕದ ಬಗ್ಗೆಯೂ ಮಾತನಾಡಿದ ಪ್ರಧಾನಿ,ಪರಿಸ್ಥಿತಿ ಸುಧಾರಿಸುವ ಆಶಯವನ್ನು ವ್ಯಕ್ತಪಡಿಸಿದರು.

 ವಿಶ್ವದಾದ್ಯಂತ ಮಹತ್ವದ ಬದಲಾವಣೆಗಳಾಗುತ್ತಿವೆ ಮತ್ತು ಉದ್ಯಮಶೀಲತೆ ಹಾಗೂ ಉದ್ಯೋಗಾವಕಾಶಗಳ ಅಭಿವೃದ್ಧಿಗೆ ಹಲವಾರು ಅವಕಾಶಗಳಿವೆ. ವಿಶ್ವವು ಇಂತಹ ಬೃಹತ್ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಪದವೀಧರರಾಗಿ ಹೊರಬೀಳುವುದು ಸುಲಭವಲ್ಲ. ಆದರೆ ನಿಮ್ಮ ಸಾಮರ್ಥ್ಯಗಳು ಈ ಸವಾಲುಗಳಿಗಿಂತ ಹೆಚ್ಚು ಪ್ರಬಲವಾಗಿವೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X