Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂಧನ ಇಲಾಖೆ ನಿರ್ಲಕ್ಷ್ಯದಿಂದ 15 ಸಾವಿರ...

ಇಂಧನ ಇಲಾಖೆ ನಿರ್ಲಕ್ಷ್ಯದಿಂದ 15 ಸಾವಿರ ಕೋಟಿ ರೂ.ನಷ್ಟ: ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ21 Nov 2020 8:48 PM IST
share
ಇಂಧನ ಇಲಾಖೆ ನಿರ್ಲಕ್ಷ್ಯದಿಂದ 15 ಸಾವಿರ ಕೋಟಿ ರೂ.ನಷ್ಟ: ಈಶ್ವರ್ ಖಂಡ್ರೆ

ಬೆಂಗಳೂರು, ನ.21: ರಾಜ್ಯ ಇಂಧನ ಇಲಾಖೆಯ ಉನ್ನತಾಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಜ್ಯದ ಬೊಕ್ಕಸಕ್ಕೆ ಈಗಾಗಲೆ 15 ಸಾವಿರ ಕೋಟಿ ರೂ.ನಷ್ಟವಾಗಿದ್ದು, ಸರಕಾರ ಈ ನಷ್ಟದ ಹೊರೆಯನ್ನು ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರ ಮೇಲೆ ಹಾಕಿರುವುದು ಅಕ್ಷಮ್ಯ ಮತ್ತು ಅಮಾನವೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸೌರ ವಿದ್ಯುತ್ ಪಾರ್ಕ್ ಮತ್ತು ಘಟಕಗಳ ಸ್ಥಾಪನೆ, ಇತರ ಮೂಲಗಳ ಹೆಚ್ಚುವರಿ ಸಾಮರ್ಥ್ಯದಿಂದಾಗಿ ಪ್ರಸ್ತುತ ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದ್ದು, ಕೇಂದ್ರದಿಂದ ಮತ್ತು ಇತರ ರಾಜ್ಯಗಳಿಂದ ಹೆಚ್ಚುವರಿ ವಿದ್ಯುತ್ ಖರೀದಿ ಮಾಡುವ ಅಗತ್ಯ ಇಲ್ಲ ಎಂದರು.

ಈಗಾಗಲೆ ಮಾಡಿಕೊಂಡಿರುವ ದೀರ್ಘಾವಧಿ ವಿದ್ಯುತ್ ಖರೀದಿಗೆ ಒಪ್ಪಂದ ರದ್ದುಪಡಿಸುವ ಅವಕಾಶವಿದ್ದರೂ ಇಂಧನ ಇಲಾಖೆ ಕಣ್ಣು ಮುಚ್ಚಿ ಕುಳಿತಿರುವ ಕಾರಣ ಕಳೆದ ಒಂದೂವರೆ ವರ್ಷದಿಂದ ರಾಜ್ಯದ ಬೊಕ್ಕಸಕ್ಕೆ 15 ಸಾವಿರ ಕೋಟಿ ರೂ.ನಷ್ಟ ಉಂಟಾಗಿದ್ದು, ಸರಕಾರ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ 4 ವರ್ಷದಲ್ಲಿ 44 ಸಾವಿರ ಕೋಟಿ ರೂ.ನಷ್ಟದ ಹೊರೆಯನ್ನು ರಾಜ್ಯದ ಜನತೆ ಹೊರಬೇಕಾಗುತ್ತದೆ ಎಂದು ಅವರು ಹೇಳಿದರು.

ನಮ್ಮ ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಉತ್ಪಾದನೆ ತಗ್ಗಿಸಿ ಅಥವಾ ನಿಲ್ಲಿಸಿ, ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಸರಕಾರ, ಕೇಂದ್ರದಿಂದ ಮತ್ತು ಅನ್ಯ ರಾಜ್ಯದಿಂದ ವಿದ್ಯುತ್ ಖರೀದಿಸುತ್ತಿರುವುದರ ಹಿಂದಿನ ಉದ್ದೇಶ ಏನು ಎಂದು ಪ್ರಶ್ನಿಸಿದ ಅವರು, ಇಂಧನ ಇಲಾಖೆ ಸೂಕ್ತ ಲೆಕ್ಕಾಚಾರ ಇಲ್ಲದೆ ವಿದ್ಯುತ್ ಖರೀದಿಸುತ್ತಿರುವುದರಿಂದ ಮತ್ತು ಸೂಕ್ತ ಕಾಲದಲ್ಲಿ ಒಪ್ಪಂದ ರದ್ದು ಮಾಡದೆ ಇರುವುದರಿಂದಾಗಿ 15 ಸಾವಿರ ಕೋಟಿ ರೂ.ನಷ್ಟ ಉಂಟಾಗಿರುವ ಕುರಿತಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರೆ ಸರಕಾರಕ್ಕೆ ಅ.14 ಹಾಗೂ 15ರಂದು 40 ಪುಟಗಳ ಸವಿವರವಾದ ಪತ್ರ ಬರೆದಿದ್ದಾರೆ ಎಂದರು.

ರಾಜ್ಯದಲ್ಲಿ 55,387 ದಶಲಕ್ಷ ಯುನಿಟ್ ಹೆಚ್ಚುವರಿ ಬಳಕೆಯಾಗದ ಸಾಮರ್ಥ್ಯವನ್ನು ಹೊಂದಿದೆ. ಎನ್.ಸಿ.ಇ ಮತ್ತು ಕೆಪಿಸಿಎಲ್ ಸೇರಿದಂತೆ ಇದಕ್ಕಾಗಿ 11,069 ಕೋಟಿ ರೂ.ಪಾವತಿಸಿದೆ. ಈ ಪೈಕಿ 9284 ಕೋಟಿ ರೂ.ಗಳನ್ನು ಸಾಮರ್ಥ್ಯದ ಬಳಕೆ ಮಾಡಿಕೊಳ್ಳದಿರುವುದಕ್ಕಾಗಿ ವೆಚ್ಚ ಮಾಡಲಾಗಿದೆ. ಉಳಿದ 1785 ಕೋಟಿ ರೂ.ಗಳನ್ನು ಪಿಜಿಸಿಐಎಲ್‍ನೊಂದಿಗೆ ಸಂಪರ್ಕಿತವಾದ ವಿದ್ಯುತ್ ಪ್ರಸರಣ ಕಾರಿಡಾರ್ ಬಳಕೆ ಮಾಡಿಕೊಳ್ಳದಿರುವುದಕ್ಕೆ ವೆಚ್ಚ ಮಾಡಲಾಗಿದೆ. ಇದನ್ನು ರದ್ದು ಮಾಡದಿದ್ದರೆ, ರಾಜ್ಯ ತಾನು ಪಡೆಯದ ವಿದ್ಯುತ್‍ಗೆ ಹಣ ಪಾವತಿ ಮಾಡುವುದರಿಂದ ಅದರ ಹೊರೆ ಬೆಲೆ ಏರಿಕೆಯ ರೂಪದಲ್ಲಿ ಜನತೆಗೆ ಆಗುತ್ತದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X