Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಲ್ವರ್ಗದವರಿಂದ ಒಂಟಿ ದಲಿತ ಮಹಿಳೆಯ ಮನೆ...

ಮೇಲ್ವರ್ಗದವರಿಂದ ಒಂಟಿ ದಲಿತ ಮಹಿಳೆಯ ಮನೆ ಧ್ವಂಸ ಆರೋಪ: ಎಫ್‍ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ21 Nov 2020 9:05 PM IST
share
ಮೇಲ್ವರ್ಗದವರಿಂದ ಒಂಟಿ ದಲಿತ ಮಹಿಳೆಯ ಮನೆ ಧ್ವಂಸ ಆರೋಪ: ಎಫ್‍ಐಆರ್ ದಾಖಲು

ಚಿಕ್ಕಮಗಳೂರು, ನ.21: ಮೇಲ್ವರ್ಗದ ಪ್ರಭಾವಿಯೊಬ್ಬರು ದಲಿತ ಕುಟುಂಬಕ್ಕೆ ಸೇರಿದ್ದ ಮನೆಯೊಂದನ್ನು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೆಡವಿದ್ದಲ್ಲದೇ ಮನೆ ಇದ್ದ ಜಾಗಕ್ಕೆ ಬೇಲಿ ಹಾಕಿ ಕಾಫಿ, ಅಡಿಕೆ ಗಿಡಗಳನ್ನು ನೆಟ್ಟಿ ಜಾಗವನ್ನು ಕಬಳಿಸಿದ್ದಾರೆನ್ನಲಾದ ಘಟನೆ ಮೂಡಿಗೆರೆ ತಾಲೂಕಿನ ಹುಯಿಗೆರೆ ಗ್ರಾಮದಲ್ಲಿ ವರದಿಯಾಗಿದೆ.

ಮೂಡಿಗೆರೆ ತಾಲೂಕು ಸರಗೋಡು ಗ್ರಾಮ ವ್ಯಾಪ್ತಿಯ ಹುಯಿಗೆರೆ ಗ್ರಾಮದಲ್ಲಿ ಪತಿಯನ್ನು ಕಳೆದುಕೊಂಡ ಗಿರಿಜಾ ಎಂಬ ಮಹಿಳೆ ತನ್ನ ಮನೆಯಲ್ಲಿ ಒಬ್ಬರೇ ನೆಲೆಸಿದ್ದು, ಮನೆ ಹಾಗೂ ಜಾಗದ ಪಕ್ಕದಲ್ಲೇ ಹಳ್ಳವೊಂದು ಹರಿಯುತ್ತಿದೆ. ಈ ಹಳ್ಳ ಭಾರೀ ಮಳೆಗೆ ನೆರೆ ನೀರು ಮನೆಯನ್ನೂ ಆವರಿಸುತ್ತಿದ್ದರಿಂದ ಮಳೆಗಾಲ ಆರಂಭವಾದಾಗಿನಿಂದ ಗಿರಿಜಮ್ಮ ತಮ್ಮ ಸಂಬಂಧಿಕರ ಮನೆಗೆ ತೆರಳಿ ಅಲ್ಲೇ ನೆಲಸಿದ್ದರೆಂದು ತಿಳಿದು ಬಂದಿದೆ.

ಆದರೆ ಕಳೆದ ಗುರುವಾರ ಗಿರಿಜಮ್ಮ ಅವರ ಮನೆ ಸಮೀಪದಲ್ಲಿರುವ ಮೇಲ್ವರ್ಗದ ಕಾಫಿ ತೋಟವೊಂದರ ಮಾಲಕನ ಪತ್ನಿ ಪ್ರೇಮಾ ಎಂಬವರು ಮಹಿಳೆ ಮನೆಯಲ್ಲಿರುವುದು ಹಾಗೂ ಆಕೆಗೆ ಮಕ್ಕಳಿಲ್ಲದಿರುವುದನ್ನು ಗಮನಿಸಿ ಜಾಗ ಕಬಳಿಸುವ ಉದ್ದೇಶದಿಂದ ಜೆಸಿಬಿಯಿಂದ ಮನೆಯನ್ನು ಉರುಳಿಸಿದ್ದಾರೆ. ಅಲ್ಲದೇ ಮನೆಯ ಜಾಗ ಸಮತಟ್ಟು ಮಾಡಿ, ಮನೆಯಿದ್ದ ಜಾಗದಲ್ಲಿ ಕಾಫಿ, ಅಡಿಕೆ ಗಿಡಗಳನ್ನು ನೆಟ್ಟು ಜಾಗಕ್ಕೆ ಬೇಲಿ ಹಾಕಿದ್ದಾರೆಂದು ತಿಳಿದು ಬಂದಿದೆ. 

ಸುದ್ದಿ ತಿಳಿದ ಗಿರಿಜಮ್ಮ ತನ್ನ ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರೇಮಾ ಅವರ ಬಳಿ ವಿಚಾರಿಸಿದಾದ ಆರಂಭದಲ್ಲಿ ಜಾಗ ತನ್ನದೆಂದು ಹೇಳಿ, ಮನೆಯನ್ನು ಕೆಡವಿಸಿದ್ದು ಯಾರೆಂದು ತಿಳಿದಿಲ್ಲ ಎಂದು ಗಿರಿಜಾರಿಗೆ ಹೇಳಿದ್ದರಿಂದ ಅವರು ಪ್ರೇಮಾ ವಿರುದ್ಧ ಆಲ್ದೂರು ಪೊಲೀಸರಿಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.

ಘಟನೆ ಸಂಬಂಧ ಸ್ಥಳ ಪರಿಶೀಲಿಸಿದ ಪೊಲೀಸರು ಗ್ರಾಪಂ, ಕಂದಾಯಾಧಿಕಾರಿಗಳಿಂದ ಮಾಹಿತಿ ಪಡೆದು ಮನೆ ಹಾಗೂ ಜಾಗ ದಲಿತ ಮಹಿಳೆ ಗಿರಿಜಮ್ಮ ಅವರದ್ದೇ ಎಂದು ತಿಳಿದು ಬಂದಿದ್ದರಿಂದ ಆಲ್ದೂರು ಪೊಲೀಸರು ಪ್ರೇಮಾ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X