Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಮೊದಲು ಪಿಒಕೆ ವಾಪಸ್ ತನ್ನಿ": ದೇವೇಂದ್ರ...

"ಮೊದಲು ಪಿಒಕೆ ವಾಪಸ್ ತನ್ನಿ": ದೇವೇಂದ್ರ ಫಡ್ನವೀಸ್ ಕರಾಚಿ ಹೇಳಿಕೆಗೆ ರಾವತ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ23 Nov 2020 5:24 PM IST
share
ಮೊದಲು ಪಿಒಕೆ ವಾಪಸ್ ತನ್ನಿ: ದೇವೇಂದ್ರ ಫಡ್ನವೀಸ್ ಕರಾಚಿ ಹೇಳಿಕೆಗೆ ರಾವತ್ ತಿರುಗೇಟು

ಮುಂಬೈ: "ಪಾಕಿಸ್ತಾನದ ಕರಾಚಿ ಒಂದು ದಿನ ಭಾರತದ ಭಾಗವಾಗುವುದು'' ಹಾಗೂ ತಮ್ಮ ಪಕ್ಷ ಅಖಂಡ ಭಾರತ ಪರಿಕಲ್ಪನೆಯನ್ನು ಬೆಂಬಲಿಸುವುದು ಎಂದು ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಹೇಳಿಕೆಗೆ ಶಿವಸೇನೆ ನಾಯಕ ಸಂಜಯ್ ರಾವತ್ ತಿರುಗೇಟು ನೀಡಿದ್ದಾರೆ.

"ಮೊದಲು ಪಾಕಿಸ್ತಾನವು ಆಕ್ರಮಿಸಿರುವ ಕಾಶ್ಮೀರವನ್ನು (ಹಿಂದೆ) ತನ್ನಿ, ಕರಾಚಿಗೆ ನಂತರ ಹೋಗಬಹುದು,'' ಎಂದು ರಾವತ್ ಹೇಳಿದ್ದಾರೆ.

ಮುಂಬೈಯಲ್ಲಿರುವ 'ಕರಾಚಿ ಸ್ವೀಟ್ಸ್' ಮಾಲಕನಿಗೆ ಆತನ ಅಂಗಡಿಯ ಹೆಸರು ಬದಲಾಯಿಸಿ ಏನಾದರೂ ಮರಾಠಿ ಹೆಸರು ಇಡುವಂತೆ ಶಿವಸೇನೆ ನಾಯಕ ನಿತಿನ್ ನಂದಗಾಂವ್ಕರ್ ಇತ್ತೀಚೆಗೆ ಹೇಳಿದ್ದರು. "ನಿಮ್ಮ ಪೂರ್ವಜರು ಪಾಕಿಸ್ತಾನದವರು. ನೀವು ಆ ದೇಶದಿಂದ ವಿಭಜನೆಯ ಸಂದರ್ಭ ಇಲ್ಲಿಗೆ ಬಂದಿದ್ದೀರಿ. ನಿಮಗೆ ಸ್ವಾಗತವಿದೆ ಆದರೆ ಕರಾಚಿ ಹೆಸರು ನನಗಿಷ್ಟವಿಲ್ಲ. ಪಾಕಿಸ್ತಾನದ ಆ ನಗರ ಉಗ್ರರ ತಾಣವಾಗಿದೆ,'' ಎಂದೂ ನಿತಿನ್ ಹೇಳಿದ್ದರಲ್ಲದೆ 15 ದಿನಗಳ ನಂತರ ಆ ಮಳಿಗೆಗೆ ಭೇಟಿ ನೀಡಿ ಹೆಸರು ಬದಲಾಯಿಸುವ ಔಪಚಾರಿಕತೆಗಳಲ್ಲಿ ಸಹಾಯ ಮಾಡುವುದಾಗಿ ತಿಳಿಸಿದ್ದರು.

ಈ ಘಟನೆಯ ನಂತರ ಅಂಗಡಿ ಮಾಲಕ ತನ್ನ ನಾಮಫಲಕವನ್ನು ದಿನಪತ್ರಿಕೆಯಿಂದ  ಮುಚ್ಚಿ ತನಗೆ ಯಾವುದೇ ಸಮಸ್ಯೆ ಬೇಡ ಎಂದಿದ್ದರು. ಈ ಘಟನಾವಳಿಯ ನಂತರ ಫಡ್ನವೀಸ್ ಅವರ ಹೇಳಿಕೆ ಬಂದಿತ್ತು.

ಆದರೆ ತಮ್ಮ ಪಕ್ಷದ ನಾಯಕನ ಕರಾಚಿ ಸ್ವೀಟ್ಸ್ ಕುರಿತ ಹೇಳಿಕೆಯಿಂದ ಶಿವಸೇನೆ ದೂರ ಸರಿದು ನಿಂತಿತ್ತು. "ಕರಾಚಿ ಬೇಕರಿ ಮತ್ತು ಕರಾಚಿ ಸ್ವೀಟ್ಸ್ ಮುಂಬೈಯಲ್ಲಿ ಕಳೆದ 60 ವರ್ಷಗಳಿಂದ ಇದೆ. ಅವರಿಗೆ ಪಾಕಿಸ್ತಾನದ ಜತೆ ಯಾವುದೇ ಸಂಬಂಧವಿಲ್ಲ. ಅವರ ಹೆಸರುಗಳನ್ನು ಬದಲಾಯಿಸಲು ಈಗ ಹೇಳುವುದು ಸರಿಯಲ್ಲ. ಹೆಸರು ಬದಲಾಯಿಸಬೇಕೆಂಬುದು ಶಿವಸೇನೆಯ ಅಭಿಪ್ರಾಯವಲ್ಲ,'' ಎಂದು ರಾವತ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X