Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಚ್ಛೇದಿತ ಪತ್ನಿಯ ಮಾನಹಾನಿ ಪ್ರಕರಣ:...

ವಿಚ್ಛೇದಿತ ಪತ್ನಿಯ ಮಾನಹಾನಿ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ23 Nov 2020 9:44 PM IST
share

ಮಂಗಳೂರು, ನ.23: ವಿಚ್ಛೇದಿತ ಪತ್ನಿಯ ಮಾನಹಾನಿ ಮಾಡಿರುವ ಕುರಿತಾದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಪಿಟಿಸಿಎಲ್ ನಿವೃತ್ತ ಇಂಜಿನಿಯರ್ ಕೋಚು ಶೆಟ್ಟಿಯನ್ನು ದೋಷಿ ಎಂದು ತೀರ್ಮಾನಿಸಿರುವ ಹೈಕೋರ್ಟ್ ಆತನಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮಂಗಳೂರು ಎಲಿಂಜೆ ನಿವಾಸಿ ಕೋಚು ಶೆಟ್ಟಿ ಕೆಪಿಟಿಸಿಎಲ್‌ನಲ್ಲಿ ಮಂಗಳೂರು ಮತ್ತು ಪುತ್ತೂರಿನಲ್ಲಿ ಕರ್ತವ್ಯದಲ್ಲಿದ್ದರೆ, ವಿಚ್ಛೇದಿತ ಪತ್ನಿ ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಉದ್ಯೋಗದಲ್ಲಿದ್ದರು. ಕೋಚು ಶೆಟ್ಟಿ ವಿಚ್ಛೇದನದ ಬಳಿಕವೂ ಆಕೆಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದ. ಬೇರೆಯವರ ಹೆಸರಿನಲ್ಲಿ ಪತ್ರಗಳನ್ನು ಬರೆದು ಸುಳ್ಳು ಕತೆಕಟ್ಟಿ ಚಾರಿತ್ರಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದ. ಅಶ್ಲೀಲ ಕತೆ ಚಾರಿತ್ರದ ಕುರಿತು ಸಿಬ್ಬಂದಿಯವರೂ ಓದಬೇಕು ಎನ್ನುವ ಉದ್ದೇಶದಿಂದ ಬ್ಯಾಂಕ್ ವಿಳಾಸಕ್ಕೂ ತೆರೆದ ಅಂಚೆಯ ಮೂಲಕ ಪತ್ರ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ.

ಪತ್ರದಲ್ಲಿರುವುದು ವಿಚ್ಛೇದಿತ ಪತಿಯ ಕೈಬರಹ ಎಂದು ತಿಳಿದು ನ್ಯಾಯವಾದಿ ಮೂಲಕ ಎಚ್ಚರಿಕೆ ನೋಟಿಸ್ ನೀಡಿದರೂ, ಪತ್ರ ಕಳುಹಿಸುವುದನ್ನು ನಿಲ್ಲಿಸಿರಲಿಲ್ಲ. ಇದರಿಂದ ಮನನೊಂದು ಮಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನಹಾನಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಅಲ್ಲಿಯೂ ಆತ ಕೈಬರಹ ತನ್ನದಲ್ಲ ಎನ್ನುವ ಸುಳ್ಳುವಾದ ಮುಂದುವರಿಸಿದ್ದ. ಆತನ ಕೈಬರಹದ ಪತ್ರಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದನ್ನು ಪರಿಶೀಲಿಸಿದ ತಜ್ಞರು, ಕೈಬರಹವು ಕೋಚು ಶೆಟ್ಟಿಯದ್ದೇ ಎಂದು ವರದಿ ನೀಡಿದ್ದರು. ಎಲ್ಲ ಸಾಕ್ಷಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಈ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ, ಕೇವಲ ಬೆರಳಚ್ಚು ತಜ್ಞರ ವರದಿ ಆಧಾರದಲ್ಲಿ ಶಿಕ್ಷೆ ನೀಡಿರುವುದು ತಪ್ಪು ಹಾಗೂ ಪತ್ರಗಳ ಮೂಲಕ ಮಾನಹಾನಿಯಾಗಿದೆ ಎನ್ನುವ ಬಗ್ಗೆ ಯಾವುದೇ ಪುರಾವೆ ಇಲ್ಲ ಎಂದು ಆರೋಪಿ ವಾದಿಸಿದ್ದ. ಈ ವಾದ ತಳ್ಳಿಹಾಕಿರುವ ಉಚ್ಚ ನ್ಯಾಯಾಲಯ, ಸಂವಿಧಾನವು ದೇಶದ ಪ್ರತಿ ಪ್ರಜೆಗೆ ಆತನ ಹೆಸರು ಮತ್ತು ಗೌರವ ಅತ್ಯಮೂಲ್ಯ ಆಸ್ತಿಯಾಗಿದ್ದು ಅದು ಮೂಲಭೂತ ಹಕ್ಕಿನ ಅವಿಭಾಜ್ಯ ಅಂಗವಾಗಿದೆ ಎಂದು ಮಹತ್ತರ ತೀರ್ಪು ನೀಡಿದೆ.

ನಮ್ಮ ದೇಶದಲ್ಲಿ ಜೀವಕ್ಕಿಂತಲೂ ಮಾನಕ್ಕೆ ಅಧಿಕವಾದ ಮೌಲ್ಯವಿದೆ, ಮಾನಕ್ಕಾಗಿ ಜೀವವನ್ನೇ ಪಣಕ್ಕಿಟ್ಟ ಸಾವಿರಾರು ಉದಾಹರಣೆಗಳು ಈ ದೇಶದ ಸಂಸ್ಕೃತಿ ದೇಶದ ಚರಿತ್ರೆಯಲ್ಲಿದೆ. ಮಹಿಳೆಯ ಮಾನವನ್ನು ಅನಾಮಧೇಯ ಪತ್ರಗಳ ಮೂಲಕ ಹಾನಿಗೊಳಿಸುವುದು ಗಂಭೀರವಾದ ಶಿಕ್ಷಾರ್ಹ ಅಪರಾಧವೆಂದು ಘೋಷಿಸಿ, ಆರೋಪಿ ಯಾವುದೇ ರೀತಿಯ ಕನಿಕರಕ್ಕೆ ಅರ್ಹನಲ್ಲ ಎಂದು ತೀರ್ಮಾನಿಸಿ ಮಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದೆ. ಆತನ್ನು ತಕ್ಷಣವೇ ಬಂಧಿಸಿ ಜೈಲು ಶಿಕ್ಷೆಗೆ ಗುರಿ ಪಡಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆದೇಶ ನೀಡಿದೆ.

ಪಿರ್ಯಾದುದಾರರ ಪರವಾಗಿ ಪಿ.ಪಿ.ಹೆಗ್ಡೆ ಅಸೋಸಿಯೇಟ್ಸ್ ವಕೀಲರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X