Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡೋಕ್ಲಮ್ ಬಳಿ ಚೀನಾದಿಂದ ಯುದ್ಧ ಸಾಮಗ್ರಿ...

ಡೋಕ್ಲಮ್ ಬಳಿ ಚೀನಾದಿಂದ ಯುದ್ಧ ಸಾಮಗ್ರಿ ಬಂಕರ್ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ23 Nov 2020 9:50 PM IST
share
ಡೋಕ್ಲಮ್ ಬಳಿ ಚೀನಾದಿಂದ ಯುದ್ಧ ಸಾಮಗ್ರಿ ಬಂಕರ್ ನಿರ್ಮಾಣ

ಹೊಸದಿಲ್ಲಿ, ನ.23: ಭಾರತ-ಚೀನಾ ಸೇನೆಗಳ ನಡುವಿನ ಬಿಕ್ಕಟ್ಟಿನ ಕೇಂದ್ರವಾಗಿದ್ದ ಡೋಕ್ಲಮ್‌ನ ಸಿಂಚೆಲ ಕಣಿವೆಯ 7 ಕಿ.ಮೀ. ದೂರದಲ್ಲಿ , ಭೂತಾನ್ ಮತ್ತು ಚೀನಾ ಗಡಿಭಾಗದ ಸಮೀಪ ಚೀನಾವು ಮಿಲಿಟರಿ ದರ್ಜೆಯ ಯುದ್ಧಸಾಮಾಗ್ರಿ ಶೇಖರಣಾ ಬಂಕರ್‌ಗಳನ್ನು ನಿರ್ಮಿಸಿರುವುದು ಉಪಗೃಹದ ಚಿತ್ರಗಳಿಂದ ತಿಳಿದು ಬಂದಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

ಇಲ್ಲಿರುವ ಸೇನಾ ನೆಲೆಗಳಲ್ಲಿರುವ ಸೇನೆಗಳ ಬಲವರ್ಧಿಸುವ ಮೂಲಕ , ಒಂದು ವೇಳೆ ಯುದ್ಧದ ಸಂದರ್ಭ ಬಂದರೆ ಹೆಚ್ಚು ಪರಿಣಾಮಕಾರಿಯಾಗಿ ಹೋರಾಟ ನಡೆಸಲು ಸೈನಿಕರನ್ನು ಸಜ್ಜುಗೊಳಿಸುವ ಪ್ರಮುಖ ಉದ್ದೇಶ ಇದರ ಹಿಂದಿರುವ ಸಾಧ್ಯತೆಯಿದೆ ಎಂದು ಉಪಗ್ರಹ ಚಿತ್ರಣ ತಜ್ಞ ಹಾಗೂ ಮಿಲಿಟರಿ ವಿಶ್ಲೇಷಕ ಸಿಮ್ ಟ್ಯಾಕ್ ಅಭಿಪ್ರಾಯಪಟ್ಟಿದ್ದಾರೆ.

ಭೂತಾನ್‌ನ ಗಡಿ ಭಾಗದಲ್ಲಿ ಚೀನಾದ ಗ್ರಾಮವನ್ನು ಪತ್ತೆಹಚ್ಚಿದ ಬಳಿಕ ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ. ಡೋಕ್ಲಮ್ ಪ್ರದೇಶದಲ್ಲಿ ಮತ್ತೆ ಬಿಕ್ಕಟ್ಟು ಸೃಷ್ಟಿಯಾಗುವ ಆತಂಕ ಮೂಡಿದೆ ಎಂದವರು ಹೇಳಿದ್ದಾರೆ. 2019ರ ಡಿಸೆಂಬರ್‌ನಲ್ಲಿ ಉಪಗ್ರಹ ರವಾನಿಸಿದ ಚಿತ್ರದಲ್ಲಿ ಬಂಕರ್‌ನ ಕುರುಹೇ ಇರಲಿಲ್ಲ. ಆದರೆ 2020ರ ಅಕ್ಟೋಬರ್ 28ರಂದು ಲಭಿಸಿದ ಚಿತ್ರದಲ್ಲಿ ಬಂಕರ್ ಬಹುತೇಕ ಸಜ್ಜುಗೊಂಡ ಸ್ಥಿತಿಯಲ್ಲಿದೆ. ಅಂದರೆ ಒಂದು ವರ್ಷಕ್ಕಿಂತಲೂ ಕಡಿಮೆ ಅವಧಿಯಲ್ಲಿ ಈ ಸುಸಜ್ಜಿತ ಬಂಕರ್ ನಿರ್ಮಿಸಲಾಗಿದೆ. ಈ ವರ್ಷದ ಮೇ ತಿಂಗಳಿನಲ್ಲಿ ಉಭಯ ಸೇನೆಗಳ ಮಧ್ಯೆ ಡೋಕ್ಲಮ್ ಬಿಕ್ಕಟ್ಟು ಆರಂಭವಾದ ಸಂದರ್ಭದಲ್ಲೂ ಬಂಕರ್ ನಿರ್ಮಾಣ ಕಾರ್ಯ ಸದ್ದಿಲ್ಲದೆ ಮುಂದುವರಿದಿತ್ತು ಎಂದು ಸಿಮ್ ಟ್ಯಾಕ್ ಹೇಳಿದ್ದಾರೆ.

ಬಂಕರ್ ನಿರ್ಮಿಸಿದ ಸ್ಥಳದಿಂದ ಸಿಂಚೆಲಾ ಕಣಿವೆಗೆ ಕಚ್ಚಾ ರಸ್ತೆಯಿದೆ. ಇಲ್ಲಿಂದ ಚೀನಾ ನಿರ್ಮಿಸಿದ ಸರ್ವಋತು ರಸ್ತೆಯ ಮೂಲಕ ಡೋಕ್ಲಮ್ ಪ್ರಸ್ಥಭೂಮಿಯನ್ನು ಸಂಪರ್ಕಿಸಬಹುದು. ಭೂತಾನ್ ತನ್ನ ಪ್ರದೇಶವೆಂದು ಹೇಳಿಕೊಂಡಿರುವ ಪ್ರದೇಶದಲ್ಲಿ ಚೀನಾ ನಿರ್ಮಾಣ ಕಾಮಗಾರಿಯನ್ನು ಮುಂದುವರಿಸಲು ದೃಢ ನಿರ್ಧಾರ ಮಾಡಿರುವುದು ಇದರಿಂದ ತಿಳಿಯುತ್ತದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X