Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಂಗ್ಲಾ ಪ್ರವಾಸ: 2 ಟೆಸ್ಟ್ ಆಡಲು...

ಬಾಂಗ್ಲಾ ಪ್ರವಾಸ: 2 ಟೆಸ್ಟ್ ಆಡಲು ವಿಂಡೀಸ್ ಒಲವು

ವಾರ್ತಾಭಾರತಿವಾರ್ತಾಭಾರತಿ23 Nov 2020 11:19 PM IST
share
ಬಾಂಗ್ಲಾ ಪ್ರವಾಸ: 2 ಟೆಸ್ಟ್ ಆಡಲು ವಿಂಡೀಸ್ ಒಲವು

ಢಾಕಾ, ನ.23: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯ ವಾತಾವರಣದಲ್ಲಿ ಕಂಡು ಬಂದಿರುವ ‘ಒತ್ತಡ’ವನ್ನು ಉಲ್ಲೇಖಿಸಿ ಮುಂದಿನ ವರ್ಷದ ಆರಂಭದಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಮೂರರಿಂದ ಎರಡು ಪಂದ್ಯಗಳಿಗೆ ಇಳಿಸಬಹುದು ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ ಸೂಚಿಸಿದೆ.

ಏಕದಿನ ಸರಣಿ ಮತ್ತು ಎರಡು ಟ್ವೆಂಟಿ -20 ಸರಣಿಗಳೊಂದಿಗೆ ಮೂರು ಟೆಸ್ಟ್ ಪಂದ್ಯಗಳಿಗೆ ಲಭ್ಯವಿರುವ ಅತ್ಯುತ್ತಮ ತಂಡವನ್ನು ಜನವರಿಯಲ್ಲಿ ಪ್ರವಾಸಕ್ಕೆ ಕಳುಹಿಸಲಾಗುವುದು ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಭರವಸೆ ನೀಡಿತ್ತು. ಆದರೆ ಇದೀಗ ಟೆಸ್ಟ್ ಪಂದ್ಯಗಳನ್ನು ಕಡಿಮೆ ಮಾಡಲು ಬಯಸಿದೆ.

 ‘‘ಮೂರರಿಂದ ಎರಡು ಟೆಸ್ಟ್‌ಗೆ ಇಳಿಸುವ ಆಯ್ಕೆ ಇದೆ. ಆದರೆ ಅದನ್ನು ಇನ್ನೂ ಅಂತಿಮಗೊಳಿಸಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಇದನ್ನು ಅಂತಿಮಗೊಳಿಸಲಾಗುವುದು ’’ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ ಅಧ್ಯಕ್ಷ ರಿಕಿ ಸ್ಕೆರಿಟ್ ತಿಳಿಸಿದ್ದಾರೆ.

‘‘ನಾವು ಬಾಂಗ್ಲಾದೇಶಕ್ಕೆ ಬರಲು ಬಯಸುತ್ತೇವೆ ಏಕೆಂದರೆ ನಾವು ಹೊಂದಿರುವ ಸಂಬಂಧ ಮತ್ತು ದ್ವಿಪಕ್ಷೀಯ ಒಪ್ಪಂದಗಳನ್ನು ನಾವು ಗೌರವಿಸುತ್ತೇವೆ ’’ ಎಂದು ಅವರು ಹೇಳಿದ್ದಾರೆ.

ಮಾರ್ಚ್‌ನಿಂದ ಬಾಂಗ್ಲಾದೇಶ ಇನ್ನೂ ಯಾವುದೇ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಆಡಿಲ್ಲ. ಆದರೆ ವಿಂಡೀಸ್ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿತ್ತು. ಕೋವಿಡ್-19 ವಿರಾಮದ ನಂತರ ಪ್ರವಾಸ ಕೈಗೊಂಡ ವಿಶ್ವದ ಮೊದಲ ತಂಡವಾಗಿದೆ ವೆಸ್ಟ್ ಇಂಡೀಸ್. ವೆಸ್ಟ್ ಇಂಡೀಸ್ ಇದೀಗ ಮೂರು ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಮತ್ತು ಎರಡು ಟೆಸ್ಟ್ ಪಂದ್ಯಗಳಿಗಾಗಿ ನ್ಯೂಝಿಲ್ಯಾಂಡ್ ಪ್ರವಾಸದಲ್ಲಿದೆ. ಡಿಸೆಂಬರ್ 15ಕ್ಕೆ ಪ್ರವಾಸ ಸರಣಿ ಕೊನೆಗೊಳ್ಳಲಿದೆ.

‘‘ ಬಾಂಗ್ಲಾದೇಶ ಸೇರಿದಂತೆ  ಯಾವುದೇ ಪ್ರವಾಸಕ್ಕೂ ವಿಂಡೀಸ್ ಯಾವಾಗಲೂ ಲಭ್ಯವಿರುವ ಅತ್ಯುತ್ತಮ ತಂಡವನ್ನು ಕಳುಹಿಸಲಿದೆ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ಬಾಂಗ್ಲಾದೇಶ ಪ್ರವಾಸವು ಯಾವಾಗಲೂ ಸವಾಲಿನ ಪ್ರವಾಸವಾಗಿದೆ ಎಂದು ನಾವು ನಂಬುತ್ತೇವೆ.ಏಕೆಂದರೆ ಅಲ್ಲಿ ನಮ್ಮ ಪರಿಸ್ಥಿತಿಗಳಿಗೆ ಬಹಳ ಭಿನ್ನವಾದ ವಾತಾವರಣವಿದೆ’’ಎಂದು ಸ್ಕೆರಿಟ್ ಹೇಳಿದರು.

ವಿದೇಶ ಮತ್ತು ಸ್ವದೇಶ ಸರಣಿಯಲ್ಲಿ ಭಾಗವಹಿಸಲು ನಾವು ಎಲ್ಲವನ್ನು ಮಾಡುತ್ತಿದ್ದೇವೆ. ಆದರೆ ಕೋವಿಡ್-19 ಕಾರಣದಿಂದಾಗಿ ನಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅಡ್ಡಿಯಾಗುತ್ತಿದೆ ’’ ಎಂದು ಅವರು ಅಭಿಪ್ರಾಯಪಟ್ಟರು.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X