Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಈಜಲು ನದಿಗಿಳಿದ ಯುವತಿ...

ಮೂಡುಬಿದಿರೆ: ಈಜಲು ನದಿಗಿಳಿದ ಯುವತಿ ಸಹಿತ ನಾಲ್ವರು ನೀರುಪಾಲು

ಇಬ್ಬರ ಮೃತದೇಹ ಪತ್ತೆ, ಇನ್ನಿಬ್ಬರಿಗಾಗಿ ಮುಂದುವರಿದ ಶೋಧ

ವಾರ್ತಾಭಾರತಿವಾರ್ತಾಭಾರತಿ24 Nov 2020 6:03 PM IST
share
ಮೂಡುಬಿದಿರೆ: ಈಜಲು ನದಿಗಿಳಿದ ಯುವತಿ ಸಹಿತ ನಾಲ್ವರು ನೀರುಪಾಲು

ಮಂಗಳೂರು, ನ. 24: ಕಡಂದಲೆಯ ಶಾಂಭವಿ ನದಿಯಲ್ಲಿ ಈಜಲು ತೆರಳಿದ ಯುವತಿ ಸಹಿತ ನಾಲ್ವರು ನೀರುಪಾಲಾದ ಧಾರುಣ ಘಟನೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ತುಲೆಮುಗೇರ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.

ವಾಮಂಜೂರು ಮೂಡುಶೆಡ್ಡೆ ನಿವಾಸಿಗಳಾದ ನಿಖಿಲ್ (18) ಹಾಗೂ ಹರ್ಷಿತಾ (20), ವೇಣೂರಿನ ಸುಭಾಷ್ (19) ಹಾಗೂ ಬಜ್ಪೆ ಪೆರಾರ ನಿವಾಸಿ ರವಿ (30) ನೀರುಪಾಲಾದವರು. ನದಿಪಾಲಾದವರ ಪೈಕಿ ಹರ್ಷಿತಾ ಹಾಗೂ ಇನ್ನೊಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ ಶೋಧ ಮುಂದುವರಿದಿದೆ.

ಮೂಡುಬಿದಿರೆ ತಾಲೂಕಿನ ಕಡಂದಲೆ ಗ್ರಾಮದ ಶ್ರೀಧರ ಆಚಾರ್ಯ ಎಂಬವರ ಮನೆಗೆ ವಿವಾಹ ಸಮಾರಂಭಕ್ಕೆಂದು ಓರ್ವ ಯುವತಿ, ಮೂವರು ಯುವಕರ ತಂಡ ಆಗಮಿಸಿತ್ತು. ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಡಂದಲೆಯ ಶಾಂಭವಿ ನದಿಯ ತೀರದಲ್ಲಿ ವಿಹಾರಕ್ಕೆಂದು ತೆರಳಿತ್ತು. ಈ ವೇಳೆ ಯುವತಿ ಸಹಿತ ಯುವಕರು ನದಿಗೆ ಇಳಿದು ಈಜಲು ಮುಂದಾಗಿದ್ದಾರೆ. ನದಿನೀರಿನ ಹರಿಯುವಿಕೆಯ ರಭಸಕ್ಕೆ ಕಾಲುಜಾರಿ ನದಿಪಾಲಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಮನೆಗೆ ಬಂದಿದ್ದವರು ಕಾಣದೇ ಇದ್ದಾಗ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಯವರು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಸ್ಥಳೀಯರಲ್ಲಿ ವಿಚಾರಿಸಿದಾಗ ಹುಡುಗರು ಶಾಂಭವಿ ನದಿ ತೀರಕ್ಕೆ ತೆರಳಿರುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಡರಾತ್ರಿವರೆಗೂ ಮುಂದುವರಿದ ಕಾರ್ಯಾಚರಣೆ: ನದಿಪಾಲಾದವರ ರಕ್ಷಣಾ ಕಾರ್ಯಾಚರಣೆಯು ಸಂಜೆಯಿಂದಲೇ ಆರಂಭಗೊಂಡಿತು. ಅಗ್ನಿಶಾಮಕ ದಳ, ಪರಿಣತ ಈಜುಪಟುಗಳು, ಅನುಭವಿ ಮೀನುಗಾರರು ಸಹಿತ ಸ್ಥಳೀಯರ ನೆರವಿನಿಂದ ಈಗಾಗಲೇ ಇಬ್ಬರನ್ನು ಮೃತದೇಹ ಹೊರತೆಗೆಯಲಾಗಿದೆ. ಉಳಿದವರ ರಕ್ಷಣಾ ಕಾರ್ಯ ಮುಂದುವರಿದಿದೆ. ನದಿ ಪ್ರದೇಶದಲ್ಲಿ ಸಂಜೆ ವೇಳೆ ಕತ್ತಲು ಆವರಿಸಿದಾಗ ಬೃಹತ್ ಲೈಟ್ ‌ಗಳನ್ನು ಬಳಸಿಕೊಳ್ಳಲಾಯಿತು. ಲೈಟ್‌ಗಳ ಹೊಂಬೆಳಕಿನಲ್ಲಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಸ್ಥಳಕ್ಕೆ ಗಣ್ಯರ ಭೇಟಿ: ಯುವಕರು ಈಜಲು ನದಿಗಿಳಿದು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನದಿ ತೀರದಲ್ಲಿ ಗಣ್ಯರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್‌ಕುಮಾರ್, ಡಿಸಿಪಿ ವಿನಯ್ ಗಾಂವ್ಕರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ, ಮೂಡುಬಿದಿರೆ ಠಾಣಾ ಇನ್‌ಸ್ಪೆಕ್ಟರ್ ದಿನೇಶ್‌ಕುಮಾರ್ ಬಿ.ಎಸ್. ಸಹಿತ ಹಲವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಕುತೂಹಲಿಗರ ದಂಡು: ಶಾಂಭವಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಮೃತಪಟ್ಟ ವಿಚಾರ ಸಾರ್ವಜನಿಕರಿಗೆ ತಿಳಿದ ಬೆನ್ನಲ್ಲೇ ಕುತೂಹಲಿಗರ ದಂಡೇ ನದಿ ತೀರದಲ್ಲಿ ನೆರೆದಿತ್ತು. ಸುಮಾರು 400ಕ್ಕೂ ಹೆಚ್ಚು ಜನರು ನದಿತೀರದಲ್ಲಿ ಜಮಾವಣೆಗೊಂಡಿದ್ದರು. ನಿಂತುಕೊಂಡು, ಕುಳಿತು ಕೊಂಡು ರಕ್ಷಣಾ ಕಾರ್ಯ ವೀಕ್ಷಿಸುತ್ತಿದ್ದರು. ಈ ವೇಳೆ ರಕ್ಷಣಾ ಕಾರ್ಯಾಚರಣೆಯ ದೃಶ್ಯಗಳನ್ನು ಹಲವರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿಯುತ್ತಿದ್ದರು. ಘಟನೆ ನಡೆದ ಕೆಲ ಸಮಯದಲ್ಲೇ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X