Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತದ ಕೋಮುವಾದ ಕೊರೋನಕ್ಕಿಂತ ಅಪಾಯಕಾರಿ...

ಭಾರತದ ಕೋಮುವಾದ ಕೊರೋನಕ್ಕಿಂತ ಅಪಾಯಕಾರಿ ವೈರಸ್: ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ24 Nov 2020 6:04 PM IST
share
ಭಾರತದ ಕೋಮುವಾದ ಕೊರೋನಕ್ಕಿಂತ ಅಪಾಯಕಾರಿ ವೈರಸ್: ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ನ.24: ಭಾರತದಲ್ಲಿ ಕೋಮುವಾದ ಎನ್ನುವುದು ಕೊರೋನಗಿಂತಲೂ ಅಪಾಯಕಾರಿಯಾದ ವೈರಸ್ ಎಂದು ಹಿರಿಯ ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್.ಜಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಅವಧಿ ಹಮ್ಮಿಕೊಂಡಿದ್ದ ಎಸ್.ಜಿ.ಸಿದ್ಧರಾಮಯ್ಯರವರ ಬಿಜ್ಜಳ ನ್ಯಾಯ ಹಾಗೂ ದಕ್ಕದ ದಾರಿಯಲ್ಲಿ ಕವನ ಸಂಕಲನಗಳ ಆನ್‍ಲೈನ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಶತಮಾನಗಳಿಂದ ಅಂಟಿಕೊಂಡು ಬಂದಿರುವ ಕೋಮುವಾದವೇ ಎಲ್ಲ ರೋಗಕ್ಕಿಂತ ಅತ್ಯಂತ ವಿಷಕಾರಿಯಾದ ರೋಗವಾಗಿದೆ ಎಂದು ಅಭಿಪ್ರಾಯಿಸಿದರು.

ಯಾವ ಸಮುದಾಯ ಕೋಮುವಾದಕ್ಕೆ ಬಲಿಯಾಗುತ್ತಿದ್ದಾರೋ, ಆ ಸಮುದಾಯದ ವ್ಯಕ್ತಿಗಳೇ ಈ ಕೋಮುವಾದದ ಮುನ್ನಡೆಗೆ ಕಾಲಾಳುಗಳಾಗಿರುವ ದುರಂತವನ್ನು ನಾವು ಕಾಣುತ್ತಿದ್ದೇವೆ. ಹೀಗಾಗಿ ಇವತ್ತು ಭಾರತಕ್ಕೆ ಕೋಮುವಾದವನ್ನು ಮೆಟ್ಟಿ ನಿಲ್ಲುವುದು ಮುಖ್ಯವಾದ ಸವಾಲಾಗಿದೆ. ಇದರಿಂದ ಮುಕ್ತವಾಗದ ಹೊರತು ಭಾರತಕ್ಕೆ ಭವಿಷ್ಯವಿಲ್ಲವೆಂದು ಅವರು ತಿಳಿಸಿದ್ದಾರೆ.

ವಿಮರ್ಶಕಿ ಎಂ.ಎಸ್.ಆಶಾದೇವಿ ಮಾತನಾಡಿ, ಹಿರಿಯ ಸಾಹಿತಿ ಎಸ್.ಜಿ ಸಿದ್ದರಾಮಯ್ಯನವರ ವ್ಯಕ್ತಿತ್ವ ಹಾಗೂ ಕಾವ್ಯ ಎರಡೂ ನಿಷ್ಠುರ ಗುಣವನ್ನು ಹೊಂದಿವೆ. ಮನುಷ್ಯರನ್ನು ಮನುಷ್ಯರನ್ನಾಗಿ ಉಳಿಸಿಕೊಳ್ಳಬೇಕಾಗಿರುವ ಈ ಕಾಲದಲ್ಲಿ ಸಿದ್ದರಾಮಯ್ಯನವರ ಕಾವ್ಯದ ತಾಯ್ತನ ಕಾಡುತ್ತದೆ ಎಂದರು.

ವಿಮರ್ಶಕ ರಾಮಲಿಂಗಪ್ಪ ಟಿ.ಬೇಗೂರು ಮಾತನಾಡಿ, ಹಿರಿಯ ಕವಿ, ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಜನಪರ, ಜೀವಪರ ದೃಷ್ಟಿಕೋನ ಅವರ ಬರವಣಿಗೆಯ ಮುಖ್ಯ ಕೇಂದ್ರವಾಗಿದೆ. ಓದುಗನೂ ಕವಿತೆಯನ್ನು ಅನುಭವಿಸುವಂತೆ ಸಿದ್ದರಾಮಯ್ಯ ಬರೆಯುತ್ತಾರೆ. ಅವರಿಗೆ ಅಪರಿಮಿತದ ಹಂಬಲ ಮತ್ತು ಓದುಗನಿಗೆ ಅರ್ಥದ ತೊಡಕಾಗಬಾರದು ಎನ್ನುವ ಕಾಳಜಿಯಿದೆ ಎಂದರು.

ಅವಧಿಯ ಪ್ರಧಾನ ಸಂಪಾದಕ ಜಿ.ಎನ್.ಮೋಹನ್ ಮಾತನಾಡಿ, ಬಿಜ್ಜಳ ನ್ಯಾಯದ ಮೂಲಕ ಸಿದ್ದರಾಮಯ್ಯನವರು ಸುಳ್ಳುಗಳ ಕೋಟೆಯಿಂದ ಆತನನ್ನು ಬಿಡಿಸಿಕೊಂಡು ಹೊರತಂದಿದ್ದಾರೆ. ಬಿಜ್ಜಳ ಜನಪರವಾಗಿದ್ದ ಎನ್ನುವುದನ್ನು ಮರೆಸುವ ಕುತಂತ್ರವನ್ನು ಸಿದ್ದರಾಮಯ್ಯನವರ ಕಾವ್ಯ ಬಯಲು ಮಾಡುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X