Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಕ್ಕಲಿಗ ಅಭಿವೃದ್ಧಿ ಮಂಡಳಿ...

ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆಯಾಗಬೇಕು: ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ24 Nov 2020 8:00 PM IST
share
ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆಯಾಗಬೇಕು: ಡಿಸಿಎಂ ಅಶ್ವತ್ಥ ನಾರಾಯಣ

ಬೆಳಗಾವಿ, ನ.24: ರಾಜ್ಯದಲ್ಲಿ ಒಕ್ಕಲಿಗ ಅಭಿವೃದ್ಧಿ ಮಂಡಳಿ ಕೂಡ ಆಗಲೇಬೇಕು ಎಂಬುದು ನನ್ನ ಒತ್ತಾಯ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಮಂಗಳವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸರಕಾರವು ಬೇಡಿಕೆಗೆ ಅನುಗುಣವಾಗಿ ಎಲ್ಲ ಸಮುದಾಯಗಳಿಗೂ ಆದ್ಯತೆ ನೀಡಲಿದೆ. ಈ ನಿಟ್ಟಿನಲ್ಲಿ ಒಕ್ಕಲಿಗ ಅಭಿವೃದ್ಧಿ ಮಂಡಳಿಯ ಅಗತ್ಯವಿದೆ. ಹೀಗಾಗಿ, ಮುಖ್ಯಮಂತ್ರಿಯು ಅದಕ್ಕೂ ಆದ್ಯತೆ ನೀಡಬೇಕು ಹಾಗೂ ಶೀಘ್ರದಲ್ಲಿಯೇ ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆಯಾಗಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಮಾಡಲೇಬೇಕಿತ್ತು. ಹಲವು ವರ್ಷಗಳಿಂದ ಈ ಬೇಡಿಕೆ ಇತ್ತು. ಮರಾಠಿಗರು ನಮ್ಮವರೇ. ನಮ್ಮ ರಾಜ್ಯದಲ್ಲೇ ನೆಲೆಸಿದ್ದಾರೆ. ಹೀಗಾಗಿ ಅವರ ಅಭಿವೃದ್ಧಿಗಾಗಿ ಸಹಕರಿಸುವುದರಲ್ಲಿ ತಪ್ಪೇನಿಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಸಮರ್ಥಿಸಿಕೊಂಡರು.

ರಜೆಗಳ ಕಡಿತ: ರಾಜ್ಯಾದ್ಯಂತ ಈಗಾಗಲೇ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಹಲವು ಸವಾಲು, ಸಮಸ್ಯೆಗಳ ಎದುರಾಗುತ್ತಿದೆ. ಆದರೂ, ಆಫ್‍ಲೈನ್ ಹಾಗೂ ಆನ್‍ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯದಂತೆ ಶೈಕ್ಷಣಿಕ ಅಭಿವೃದ್ಧಿಯಾಗುತ್ತಿದೆ. ಕೊರೋನ ಸೋಂಕು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರೂ, ಸಾಕಷ್ಟು ಸುರಕ್ಷತೆಯನ್ನು ಕೈಗೊಳ್ಳಲಾಗಿದೆ. ದಿನೇ ದಿನೇ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಅಧಿಕಗೊಂಡಿದ್ದು, ಕಾಲೇಜು ತಡವಾಗಿ ಆರಂಭವಾಗಿವೆ. ಸೆಮಿಸ್ಟರ್ ಪರೀಕ್ಷೆಗಳು ಕೂಡ ಲೇಟ್ ಆಗಲಿವೆ. ರಜೆ ಕಡಿತ ಮಾಡಿ ತರಗತಿಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಸಿಎಂ ಬದಲಾವಣೆ ಇಲ್ಲ: ಮುಖ್ಯಮಂತ್ರಿ ಬದಲಿಸುವ ಸಂಬಂಧ ಕೆಲವರು ಹೇಳಿಕೆ ನೀಡಿದ್ದಾರೆ. ಆದರೆ, ಪಕ್ಷದ ಎದುರು ಮುಖ್ಯಮಂತ್ರಿ ಬದಲಿಸುವ ಯಾವುದೇ ಪ್ರಸ್ತಾವನೆಯಿಲ್ಲ. ಸುಭದ್ರ ಸರಕಾರ ನಡೆಸಲು ಯಡಿಯೂರಪ್ಪ ಮುಂದುವರಿಯಲಿದ್ದಾರೆ. ಸಿಎಂ ಬದಲಾವಣೆ ಕುರಿತು ವದಂತಿಗಳು ಬರುತ್ತಿವೆ. ಅಂಥವರ ವಿರುದ್ಧ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಎಚ್ಚರಿಕೆ ರವಾನಿಸಿದರು.

ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಯಡಿಯೂರಪ್ಪ ಉತ್ಸುಕರಾಗಿದ್ದಾರೆ. ಸಮಯ ಬಂದಾಗ ಸಂಪುಟ ವಿಸ್ತರಣೆ ಆಗಲಿದೆ. ಈ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಸಿಪಿ ಯೋಗೀಶ್ವರ್ ಕೂಡ ಮಂತ್ರಿ ಆಗಬೇಕು. ನಾನು ಮೊದಲಿಂದಲೂ ಅವರು ಮಂತ್ರಿ ಆಗಬೇಕು ಎಂದು ಹೇಳುತ್ತಲೇ ಬಂದಿದ್ದೇನೆ. ಸರಕಾರ ರಚನೆಯಲ್ಲಿ ಅವರ ಪಾತ್ರವೂ ಬಹುಮುಖ್ಯ ಎಂದು ತಿಳಿಸಿದರು.

ಮುಖ್ಯಮಂತ್ರಿಗೆ ನಿಯೋಗದಿಂದ ಮನವಿ: ಒಕ್ಕಲಿಗರ ಅಭಿವೃದ್ಧಿ ನಿಗಮ ರಚಿಸುವಂತೆ ಒತ್ತಾಯಿಸಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಆರ್.ಅಶೋಕ್‍ಗೆ ವಿಧಾನಸೌಧದಲ್ಲಿ ಒಕ್ಕಲಿಗ ಸಮುದಾಯದ ನಿಯೋಗ ಮನವಿ ಸಲ್ಲಿಸಿತು. ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೇಗೌಡ, ಎ.ಎಚ್.ಆನಂದ್, ಕೆ.ಗಂಗಹನುಮಯ್ಯ, ಎನ್.ವೇಣುಗೋಪಾಲ್, ಬಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಜೀವರಾಜ್, ಎಸ್.ಆರ್.ವಿಶ್ವನಾಥ್ ನಿಯೋಗದಲ್ಲಿದ್ದರು.

ರಾಜ್ಯದಲ್ಲಿ ಎರಡನೇ ಅತಿ ದೊಡ್ಡ ಸಮುದಾಯ ನಮ್ಮದು. 5 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸಮುದಾಯ. ಒಕ್ಕಲುತನವನ್ನೇ ನಂಬಿಕೊಂಡಿರುವ ಜನಾಂಗ, ಶೇ. 65ರಷ್ಟು ಆದಾಯವನ್ನು ಸರಕಾರಕ್ಕೆ ನೀಡುತ್ತಿದೆ. ನಮ್ಮ ಸಮುದಾಯದಲ್ಲೂ ಬಡವರಿದ್ದಾರೆ. ಹೀಗಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಎಂದು ಸಿಎಂಗೆ ಮನವಿ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X