Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ-ಅಡ್ಯಾರ್ ಸೇತುವೆಯ ಅಗಲ 10...

ಹರೇಕಳ-ಅಡ್ಯಾರ್ ಸೇತುವೆಯ ಅಗಲ 10 ಮೀಟರ್‌ಗೆ ಹೆಚ್ಚಳ: ಸಚಿವ ಮಾಧುಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 Nov 2020 8:57 PM IST
share
ಹರೇಕಳ-ಅಡ್ಯಾರ್ ಸೇತುವೆಯ ಅಗಲ 10 ಮೀಟರ್‌ಗೆ ಹೆಚ್ಚಳ: ಸಚಿವ ಮಾಧುಸ್ವಾಮಿ

ಮಂಗಳೂರು, ನ.24: ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಬಹು ಉದ್ದೇಶಿತ ಹರೇಕಳ-ಅಡ್ಯಾರ್‌ಗೆ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪುನೀರು ತಡೆ ಅಣೆಕಟ್ಟಿನ ಅಗಲವನ್ನು 10 ಮೀಟರ್‌ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಭವಿಷ್ಯದಲ್ಲಿ ವಾಹನ ದಟ್ಟನೆ ಯನ್ನು ನಿರ್ವಹಿಸಲು ಅನುಕೂಲವಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಮಂಗಳವಾರ ಸೇತುವೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು.

ಇದೀಗ ಸೇತುವೆಯನ್ನು 7 ಮೀಟರ್ ಅಗಲಕ್ಕೆ ಮತ್ತು ಇಕ್ಕೆಲಗಳಲ್ಲಿ ತಲಾ ಒಂದೂವರೆ ಮೀಟರ್ ಅಗಲದ ಫುಟ್‌ಪಾತ್‌ಗೆ ವಿನ್ಯಾಸ ಗೊಳಿಸಲಾ ಗಿದೆ. ಅದನ್ನು ಸ್ವಲ್ಪ ಬದಲಾವಣೆ ಮಾಡಲಾಗುವುದು. ಸೇತುವೆಯ ಅಗಲವೇ 10 ಮೀಟರ್ ಇರುತ್ತದೆ. ಫುಟ್‌ಪಾತ್‌ನ ಅಗಲ ತಲಾ ಒಂದೊಂದು ಮೀಟರ್ ಇರಲಿದೆ. ಕ್ರಿಯಾ ಯೋಜನೆಯನ್ನು ಪುನಃ ವಿನ್ಯಾಸಕ್ಕೆ ಪೂರಕವಾಗಿ ಬದಲಾಯಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ನುಡಿದರು.

2017-18 ನೇ ಸಾಲಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಪಶ್ಚಿಮವಾಹಿನಿ ಯೋಜನೆಯಡಿಯಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಯೋಜನೆಯ ಒಟ್ಟು ವೆಚ್ಚ 174 ಕೋ.ರೂ.ಗಳಾಗಿವೆ. ಒಪ್ಪಂದಂತೆ 2021ರ ನವೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಯ ಬೇಕಿದೆ. ಅವಧಿಗಿಂತ ಮುಂಚಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ. ಅಣೆಕಟ್ಟು 0.66 ಟಿಎಂಸಿ ನೀರು ಶೇಖರಣೆಯ ಸಾಮರ್ಥ್ಯ ಹೊಂದಲಿದೆ. 261.20 ಹೆಕ್ಟೇರ್ ಕೃಷಿ ಜಮೀನಿಗೆ ಯೋಜನೆಯಿಂದ ನೀರು ದೊರಕಲಿದೆ ಎಂದು ಸಚಿವರು ಹೇಳಿದರು.

ಮಂಗಳೂರು ನಗರಪಾಲಿಕೆಯವರು ಕೂಡ ನೀರಿಗೆ ಬೇಡಿಕೆ ಇಟ್ಟಿದ್ದಾರೆ. ಜೊತೆಗೆ ಸುತ್ತುಮುತ್ತಲಿನ ಇತರ ನಗರಾಡಳಿತ ಸಂಸ್ಥೆಗಳು ಮತ್ತು ಗ್ರಾಪಂಗಳು ಕುಡಿಯುವ ನೀರನ್ನು ಬಳಸಬಹುದಾಗಿದೆ. ಆದರೆ ಅದಕ್ಕೆ ತಕ್ಕುದಾದ ವ್ಯವಸ್ಥೆಗಳನ್ನು ಆಯಾ ಸಂಸ್ಥೆಗಳೇ ರೂಪಿಸಬೇಕಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹರೇಕಳದಲ್ಲಿ ನೇತ್ರಾವತಿ ನದಿಗೆ ಕಟ್ಟುತ್ತಿರುವ ಕಿಂಡಿ ಅಣೆಕಟ್ಟಿನ ಎತ್ತರವನ್ನು ಮೂರು ಮೀಟರ್‌ಗಳಿಗೆ ನಿಗದಿ ಪಡಿಸಲಾಗಿದೆ. ಇದರಿಂದ ಕೃಷಿ ಭೂಮಿ ಮುಳಗಡೆ ಆಗುವುದನ್ನು ತಪ್ಪಿಸಬಹುದಾಗಿದೆ. ಸೇತುವೆಯ ಉದ್ದ 520 ಮೀಟರ್ ಆಗಿದೆ. ವರ್ಟಿಲ್ ಲಿಫ್ಟ್‌ಗೇಟ್ ಮಾದರಿಯ 52 ಕಿಂಡಿಗಳಿರುತ್ತವೆ. ಕಾಮಗಾರಿ ಪೂರ್ಣಗೊಂಡಾಗ ಕಾಸರಗೋಡು ಕಡೆಯಿಂದ ಬೆಂಗಳೂರು ಕಡೆಗೆ ತೆರಳುವ ವಾಹನಗಳು ಮಂಗಳೂರು ನಗರವನ್ನು ಪ್ರವೇಶಿಸದೆ ತೊಕ್ಕೊಟ್ಟು-ಕೊಣಾಜೆ-ಹರೇಕಳ-ಅಡ್ಯಾರ್ ಮಾರ್ಗವಾಗಿ ಮುಂದೆ ತೆರಳಬಹುದಾಗಿದೆ ಎಂದು ಮಾಧುಸ್ವಾಮಿ ವಿವರಿಸಿದರು.

ಇನ್ನಷ್ಟು ವೆಂಟೆಡ್ ಡ್ಯಾಮ್‌ಗಳ ನಿರ್ಮಾಣ

ದ.ಕ. ಮತ್ತು ಉಡುಪಿ ಜಿಲ್ಲೆಗಳ ನದಿಗಳಲ್ಲಿ ಕುಡಿಯುವ ನೀರಿನ ಶೇಖರಣೆಗಾಗಿ ವೆಂಟೆಡ್ ಡ್ಯಾಂ ನಿರ್ಮಾಣದ ಯೋಜನೆಗಳನ್ನು ರೂಪಿಸಲಾ ಗಿದೆ. ಇದಕ್ಕಾಗಿ ಹಲವು ಪ್ರದೇಶಗಳನ್ನು ಗುರುತಿಸಲಾಗಿದ್ದು ಕೇಂದ್ರ ಸರಕಾರದ ಅನುದಾನ ದೊರೆತರೆ ಕೂಡಲೇ ಯೋಜನೆಗಳನ್ನು ಕಾರ್ಯ ಗತಗೊಳಿಸಲಾಗುವುದು. ಈಗಾಗಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉಪ್ಪು ನೀರು,ಸಿಹಿ ನೀರು ಬೇರ್ಪಡಿಸುವ ಕಾರ್ಲ್ಯಾಂಡ್ ಡ್ಯಾಮ್ ನಿರ್ಮಾಣ ಯೋಜನೆಯಿದೆ ಎಂದು ಸಚಿವ ಜೆ.ಸಿ ಮಾಧು ಸ್ವಾಮಿ ಹೇಳಿದರು.

ಅಣೆಕಟ್ಟು ಗುತ್ತಿಗೆದಾರರಾದ ಜಿ.ಶಂಕರ್ ಉಡುಪಿ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X