Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುರಿ ಮತ್ತು ದಾರಿ ಮರೆತ ಕಾಂಗ್ರೆಸ್...

ಗುರಿ ಮತ್ತು ದಾರಿ ಮರೆತ ಕಾಂಗ್ರೆಸ್ ವಿರೋಧ ಪಕ್ಷದಲ್ಲಿರಲು ನಾಲಾಯಕ್: ನಳಿನ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Nov 2020 11:19 PM IST
share
ಗುರಿ ಮತ್ತು ದಾರಿ ಮರೆತ ಕಾಂಗ್ರೆಸ್ ವಿರೋಧ ಪಕ್ಷದಲ್ಲಿರಲು ನಾಲಾಯಕ್: ನಳಿನ್ ಕುಮಾರ್

ದಾವಣಗೆರೆ, ನ.24: ಗುರಿ ಮತ್ತು ದಾರಿ ಮರೆತ ಪರಿಣಾಮ ದೇಶದಲ್ಲಿ ವಿರೋಧ ಪಕ್ಷ ಸ್ಥಾನದಲ್ಲಿರಲು ಕಾಂಗ್ರೆಸ್ ಪಕ್ಷ ನಾಲಾಯಕ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಾಗ್ದಾಳಿ ನಡೆಸಿದರು. 

ಮಂಗಳವಾರ ನಗರದ ಅಪೂರ್ವ ರೇಸಾರ್ಟ್ ನಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಬಿಜೆಪಿ 25 ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹಸಂಚಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಪ್ರಧಾನ ಮಂತ್ರಿಯಾಗಿದ್ದ ಇಂದಿರಾಗಾಂಧಿ ಅವರ ಕಾಲದಲ್ಲಿ ಕಾಂಗ್ರೆಸ್ 1,800 ಶಾಸಕರಿದ್ದರು. ಬಿಜೆಪಿ 100 ಶಾಸಕರಿದ್ದರು. ಅದರೆ ಈಗ ದೇಶದಲ್ಲಿ ಬಿಜೆಪಿಯ 1800 ಶಾಸಕರಿದ್ದಾರೆ. ಕಾಂಗ್ರೆಸ್ ಗೆ 700 ಶಾಸಕರಿದ್ದಾರೆ. ಇದಕ್ಕೆ ಕಾರಣ ಬಿಜೆಪಿಯ ಅಧಿಕಾರಕ್ಕಿಂತ ಮೊದಲು ಸೇವೆ. ಗುರಿ ಮತ್ತು ದಾರಿ ಮುಖ್ಯವಾದುದ್ದರಿಂದ ಇಂದು ಬಿಜೆಪಿ ವಿಶ್ವದಲ್ಲಿಯೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದು ಹೇಳಿದರು. 

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಮಾತ್ರ ಎದ್ದು ಕೂರುತ್ತದೆ. ಅದರೆ ಬಿಜೆಪಿ ಚುನಾವಣೆ ಇರಲಿ, ಬಿಡಲಿ ಅಧಿಕಾರ ಸಿಗಲಿ ಬಿಡಲಿ ಸಂಘಟನೆ ಮಾತ್ರ ಬಿಡುವುದಿಲ್ಲ. ಸಂಘಟನೆ ಹಾಗೂ ಜನರೊಂದಿಗೆ ನಿರಂತರ ಸಂಪರ್ಕದಿಂದಾಗಿ ಹಾಗೂ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಇಂದು ದೇಶದ ಚುಕ್ಕಾಣಿ ಹಿಡಿದಿದೆ ಎಂದರು. 

ರಾಜಕೀಯವೆಂದರೆ ಅದು ಸಮಾಜ ಸೇವೆ. ಸೇವೆಯಿಂದ ಹೊರತಾಗಿ ರಾಜಕೀಯವಿಲ್ಲ. ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುವವರು ರಾಜಕಾರಣಿಗಳು ಆಗಲು ಸಾಧ್ಯ. ತಮ್ಮಲ್ಲಿರುವ ಕೌಶಲ್ಯವನ್ನು ರಾಜಕಾರಣದಲ್ಲಿ ಬಳಸಿಕೊಂಡು ಬೆಳೆಯಲು ಪ್ರಕೋಷ್ಠಗಳು ರಾಜಕಾರಣದ ಬಾಗಿಲು ಆಗಿದೆ. ಸರ್ವರನ್ನು ಪಕ್ಷದೊಳಗೆ ಕರೆದುಕೊಂಡು ಬರುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು. 

ಅಧಿಕಾರವಿಲ್ಲದಿದ್ದಾಗ ಸೇವೆ ಮರೆತಿಲ್ಲ. ಅಧಿಕಾರವಿದ್ದಾಗ ಕೊಟ್ಟ ಮಾತು ಮರೆತಿಲ್ಲ. ಅದ್ದರಿಂದ ಅಧಿಕಾರಕ್ಕೆ ಬಂದ ತಕ್ಷಣವೇ ಕಾಶ್ಮೀರಕ್ಕೆ ನೀಡಿದ್ದ 372 ವಿಶೇಷ ಸ್ಥಾನ ಮಾನ ರದ್ದು ಮಾಡಿದ್ದೇವೆ. ದಾರಿ ತಪ್ಪಿಲ್ಲ. ಗುರಿ ಮುಟ್ಟಿದ್ದೇವೆ. ರಾಷ್ಟ್ರದ ಅಭಿವೃದ್ದಿಯ ಚಿಂತನೆ, ಕುಟುಂಬ ರಾಜಕಾರಣ ಮಾಡಿಲ್ಲ ಎಂದ ಅವರು, ತಳಮಟ್ಟದಲ್ಲಿ ಪಕ್ಷಗಳನ್ನು ಕಟ್ಟುವ ದೃಷ್ಠಿಯಿಂದ ಪ್ರಕೋಷ್ಠಗಳ ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದರು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಸಿದ್ದೇಶ್ವರ್, ಕರ್ನಾಟಕದಲ್ಲಿ ಮುಂದೆ ಬರುವ ಚುನಾವಣೆಗಳಲ್ಲಿ ನಮ್ಮ ಪಕ್ಷ ಸಂಪೂರ್ಣವಾಗಿ ಬಹುಮತ ಬರಬೇಕು ಆ ನಿಟ್ಟಿನಲ್ಲಿ ಕಾರ್ಯಕರ್ತರು ಸನ್ನದ್ದರಾಗಬೇಕು. ಮುಂದೆ ಜಿಪಂ, ತಾಪಂ, ಗ್ರಾಮ ಪಂಚಾಯತ್ ಚುನಾವಣೆಗಳು ಬರಲಿವೆ. ಅದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ರೀತಿಯಲ್ಲಿ ಗೆಲವು ಸಾಧಿಸಬೇಕಿದೆ. ಕಾರ್ಯಕರ್ತರು ನಮ್ಮ ಶಕ್ತಿಯಾಗಿದ್ದಾರೆ ಎಂದರು. 

ಶಾಸಕ ರವೀಂದ್ರನಾಥ ಮಾತನಾಡಿ, ಮುಂದಿನ ದಿನಗಳಲ್ಲಿ ಬರುವ ಚುನಾವಣೆಗಳಲ್ಲಿ ಪಕ್ಷ ಸ್ಪಷ್ಟವಾಗಿ ಬಹುಮತ ಬರುವ ನಿಟ್ಟಿನಲ್ಲಿ ತಳಮಟ್ಟದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಮನವಿ ಮಾಡಿದರು. 

ಪ್ರಕೋಷ್ಠದ ಸಂಯೋಜಕ ಭಾನುಪ್ರಕಾಶ್ ಮಾತನಾಡಿ, ಸಮಾಜದ ಎಲ್ಲರನ್ನು ದೇಶದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಪ್ರಕೋಷ್ಠಗಳ ಅಗತ್ಯವಿದೆ. ಈಗಾಗಲೇ 25 ಪ್ರಕೋಷ್ಠಗಳ ರಚನೆ ಮಾಡಲಾಗಿದೆ. ಮುಂದಿನ ದಿನಗಳ ಪ್ರಕೋಷ್ಠಗಳ ಮೂಲಕ ಹೆಚ್ಚಿನ ರೀತಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಕೊಳ್ಳಲಾಗುವುದು ಎಂದರು. 

ಸಭೆಯಲ್ಲಿ ಶಾಸಕರಾದ ಮಾಡಾಳ ವಿರುಪಾಕ್ಷಪ್ಪ, ಎಸ್.ವಿ.ರಾಮಚಂದ್ರಪ್ಪ, ಪ್ರೋ.ಲಿಂಗಣ್ಣ, ರೇಣುಕಾಚಾರ್ಯ, ಮೇಯರ್ ಅಜಯಕುಮಾರ್, ಜಿಲ್ಲಾಧ್ಯಕ್ಷ ವಿರೇಶ್ ಹನಗವಾಡಿ ಇದ್ದರು. ಜಿಲ್ಲಾ ಕಾರ್ಯದರ್ಶಿ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X