Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಶಾಲೆ ಪುನರಾರಂಭಕ್ಕೆ ಗೊಂದಲ ಏಕೆ?

ಶಾಲೆ ಪುನರಾರಂಭಕ್ಕೆ ಗೊಂದಲ ಏಕೆ?

ವಾರ್ತಾಭಾರತಿವಾರ್ತಾಭಾರತಿ25 Nov 2020 12:10 AM IST
share
ಶಾಲೆ ಪುನರಾರಂಭಕ್ಕೆ ಗೊಂದಲ ಏಕೆ?

ಜಾತಿ ಮತಗಳ ಹೆಸರಿನಲ್ಲಿ ದೇವರು ಮತ್ತು ಧರ್ಮಗಳನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಕ್ಕೆ ಬರುವ ಪಕ್ಷ ಸಂವಿಧಾನಾತ್ಮಕ ಆಡಳಿತ ನಿರ್ವಹಣೆಯಲ್ಲಿ ಹೇಗೆ ವಿಫಲಗೊಳ್ಳುತ್ತದೆ ಎಂಬುದಕ್ಕೆ ಈಗ ದೇಶವನ್ನು ಮತ್ತು ಕರ್ನಾಟಕವನ್ನು ಆಳುತ್ತಿರುವ ಭಾರತೀಯ ಜನತಾ ಪಕ್ಷ ಪ್ರತ್ಯಕ್ಷ ಉದಾಹರಣೆಯಾಗಿದೆ. ಬೇರೆ ವಿಷಯಗಳು ಒತ್ತಟ್ಟಿಗಿರಲಿ, ಕೊರೋನ ನಿಭಾಯಿಸುವಲ್ಲಿ ಈ ಸರಕಾರಗಳು ಎಲ್ಲೆಲ್ಲಿ ಎಡವಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಶಾಲಾಕಾಲೇಜುಗಳ ಪುನರಾರಂಭದ ಪ್ರಶ್ನೆಯಲ್ಲಿ ಕರ್ನಾಟಕದ ಬಿಜೆಪಿ ಸರಕಾರ ಗೊಂದಲದಲ್ಲಿದೆ. ಒಮ್ಮೆ ಶಾಲಾಕಾಲೇಜುಗಳನ್ನು ಆರಂಭಿಸುವುದಾಗಿ, ಇನ್ನೊಮ್ಮೆ ಇಲ್ಲ ಎಂದು ಹೇಳುತ್ತ್ತಾ ವಿದ್ಯಾರ್ಥಿಗಳನ್ನು ಮತ್ತು ಅವರ ಪಾಲಕರನ್ನು ಅತಂತ್ರ ಸ್ಥಿತಿಗೆ ದೂಡುತ್ತಾ ಬಂದಿದೆ. ಈಗ ಡಿಸೆಂಬರ್ ಮೂರನೇ ವಾರದವರೆಗೆ ಶಾಲಾಕಾಲೇಜುಗಳನ್ನು ತೆರೆಯದಿರಲು ತೀರ್ಮಾನಿಸಿದೆ. ಕೋವಿಡ್ ಕಾರಣದಿಂದ ಕಳೆದ ಎಂಟು ತಿಂಗಳಿಂದ ಮುಚ್ಚಿರುವ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಾಲೋಚನೆ ಮಾಡಿದ ನಂತರ ಈ ತೀರ್ಮಾನಕ್ಕೆ ಬರಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೆಲ ತಜ್ಞರ ಸಲಹೆಯಂತೆ ಈ ಕ್ರಮ ಕೈಗೊಂಡಿದ್ದರೆ ಅಭ್ಯಂತರವಿಲ್ಲ. ಆದರೆ ಶಾಲಾಕಾಲೇಜು ಪುನರಾರಂಭದ ಬಗ್ಗೆ ವೈದ್ಯಕೀಯ ಮತ್ತು ಶೈಕ್ಷಣಿಕ ಪರಿಣಿತರಲ್ಲೇ ವಿವಿಧ ಅಭಿಪ್ರಾಯಗಳಿವೆ. ಡಾ. ಶ್ರೀನಿವಾಸ ಕಕ್ಕಿಲ್ಲಾಯರಂತಹ ವೈದ್ಯಕೀಯ ಪರಿಣಿತರು ಶಾಲಾಕಾಲೇಜುಗಳ ಆರಂಭಕ್ಕೆ ಒಲವು ತೋರಿಸಿದ್ದಾರೆ. ‘‘ಅತ್ಯಂತ ಜನ ಸಂದಣಿಯ ಮಾರುಕಟ್ಟೆ ಮತ್ತು ಅಂಗಡಿಗಳು ಹಾಗೂ ಚಲನಚಿತ್ರ ಮಂದಿರಗಳು ಮುಂತಾದವುಗಳು ತೆರೆದಿರುವಾಗ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಅಗತ್ಯವಾದ ಶಾಲಾಕಾಲೇಜುಗಳನ್ನು ತೆರೆದರೆ ತಪ್ಪಿಲ್ಲ’’ ಎಂದು ಡಾ. ಕಕ್ಕಿಲ್ಲಾಯರು ಹೇಳಿದ್ದಾರೆ. ನಾಡಿನ ಶಿಕ್ಷಣ ತಜ್ಞರಲ್ಲೊಬ್ಬರಾದ ಪ್ರೊ.ವಿ.ಪಿ.ನಿರಂಜನಾರಾಧ್ಯ ಅವರು ಮಕ್ಕಳ ಹಿತದೃಷ್ಟಿಯಿಂದ ಸೂಕ್ತವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶಾಲಾಕಾಲೇಜುಗಳನ್ನು ಪುನರಾರಂಭಿಸುವಂತೆ ಸರಕಾರಕ್ಕೆ ಸಲಹೆ ನೀಡಿದ್ದಾರೆ. ಇವರಿಬ್ಬರು ಮಾತ್ರವಲ್ಲ ಅನೇಕ ಪರಿಣಿತರ ಅಭಿಪ್ರಾಯ ಕೂಡ ಇದೇ ಆಗಿದೆ.

ಮಕ್ಕಳು ಶಾಲೆಗೆ ಹೋಗದೆ ಈಗಾಗಲೇ ಎಂಟು ತಿಂಗಳು ದಾಟಿತು. ಕ್ರಮೇಣ ಮಕ್ಕಳಲ್ಲಿ ವಿದ್ಯಾಭ್ಯಾಸದ ಆಸಕ್ತಿ ಕಡಿಮೆಯಾಗತೊಡಗಿದೆ. ಸದ್ಯ ಆನ್‌ಲೈನ್ ಶಿಕ್ಷಣ ಲಭ್ಯವಿದ್ದರೂ ಅದು ಎಲ್ಲ ಮಕ್ಕಳಿಗೂ ಸಿಗುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಅದರಿಂದ ಹೆಚ್ಚಿನ ಪ್ರಯೋಜನವಿಲ್ಲ. ಹೀಗಾಗಿ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಪಾಲಕರಲ್ಲೂ ಆತಂಕ ಶುರುವಾಗಿದೆ. ಈ ಆತಂಕವನ್ನು ನಿವಾರಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಈ ಎಲ್ಲ ದೃಷ್ಟಿಕೋನದಿಂದಲೂ ಪರಾಮರ್ಶೆ ನಡೆಸಿ ಸರಕಾರ ಈಗಲೇ ಒಂದು ತೀರ್ಮಾನಕ್ಕೆ ಬರುವುದು ಅಗತ್ಯವಿದೆ. ಶಾಲೆ ಪುನರಾರಂಭಿಸುವ ಕುರಿತ ತೀರ್ಮಾನವನ್ನು ಡಿಸೆಂಬರ್ ಮೂರನೇ ವಾರದವರೆಗೆ ಮುಂದೂಡುವುದರಲ್ಲಿ ಅರ್ಥವಿಲ್ಲ.

ಶಾಲೆ ಅಂದರೆ ಬರೀ ಕಲಿಕೆ ಮಾತ್ರವಲ್ಲ, ಗ್ರಾಮೀಣ ಪ್ರದೇಶದ ಬಡಮಕ್ಕಳ ಪಾಲಿಗೆ ಶಾಲೆ ಎಲ್ಲವೂ ಆಗಿದೆ. ಶಾಲೆಗಳಲ್ಲಿ ದೊರೆಯುವ ಮಧ್ಯಾಹ್ನದ ಬಿಸಿಯೂಟದಿಂದ ಮಕ್ಕಳು ಹಸಿವನ್ನು ಇಂಗಿಸಿಕೊಳ್ಳುತ್ತಾರೆ. ಮಾತ್ರವಲ್ಲ ಅದರಿಂದ ಅವರಿಗೆ ಪೌಷ್ಟಿಕಾಂಶವೂ ದೊರಕುತ್ತದೆ. ನಿರಂತರವಾಗಿ ಶಾಲೆಗಳು ಮುಚ್ಚಿದ ಪರಿಣಾಮವಾಗಿ ಮಕ್ಕಳು ಪೌಷ್ಟಿಕಾಹಾರದಿಂದ ವಂಚಿತರಾಗಿದ್ದಾರೆ.ಹಳ್ಳಿಗಾಡಿನಲ್ಲಂತೂ ಮನೆಗಿಂತ ಶಾಲೆಗಳೇ ಮಕ್ಕಳಿಗೆ ಸುರಕ್ಷಿತ ತಾಣಗಳಾಗಿವೆ.ಶಾಲೆಗಳು ಮುಚ್ಚಿದ ಪರಿಣಾಮವಾಗಿ ಬಾಲ್ಯ ವಿವಾಹಗಳು ಹೆಚ್ಚಾಗಿವೆ ಎಂದು ವರದಿಗಳು ತಿಳಿಸುತ್ತವೆ. ಆದ್ದರಿಂದ ಸರಕಾರ ಈ ಬಗ್ಗೆ ಇನ್ನೊಂದು ಆಯಾಮದಿಂದ ಯೋಚಿಸಿ ತೀರ್ಮಾನಿಸಬೇಕಾಗಿದೆ.

ಸರಕಾರ ಈಗಾಗಲೇ ಎಸೆಸೆಲ್ಸಿ, ಪಿಯುಸಿ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಕೊರೋನದಿಂದ ಆಸ್ಪತ್ರೆಗೆ ದಾಖಲಾದ ವರ, ಗುಣಮುಖರಾದವರ ಹಾಗೂ ಅಸು ನೀಗಿದವರ ವಿವರಗಳನ್ನು ಪೋಷಕರಿಗೆ ನೀಡಿ ಅವರ ಮನವೊಲಿಸುವುದು ಸರಕಾರದ ಅದರಲ್ಲೂ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳ ಹೊಣೆಗಾರಿಕೆಯಾಗಿದೆ. ಕೋವಿಡ್‌ಗಿಂತಲೂ ಬೇರೆ ಕಾಯಿಲೆಗಳಿಂದ ಮಕ್ಕಳ ಸಾವುಗಳು ಸಂಭವಿಸಿವೆ ಎಂದು ಅಧಿಕೃತ ವರದಿಗಳು ತಿಳಿಸುತ್ತವೆ. ಅಷ್ಟೇ ಅಲ್ಲದೆ ಕೋವಿಡ್ ನಿಯಂತ್ರಿಸುವಲ್ಲಿ ದೀರ್ಘಕಾಲೀನ ಲಾಕ್‌ಡೌನ್‌ನಿಂದ ಹೆಚ್ಚಿನ ಉಪಯೋಗವಾಗಿಲ್ಲ. ಈಗ ಅದರ ತೀವ್ರತೆಯೂ ಕಡಿಮೆಯಾಗಿದೆ. ಡಿಸೆಂಬರ್‌ನಲ್ಲಿ ಕೊರೋನದ ಎರಡನೇ ಅಲೆ ಬರುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಒಂದು ವೇಳೆ ಬಂದರೂ ಅದನ್ನೆದುರಿಸಲು ಸೂಕ್ತವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶಾಲಾಕಾಲೇಜುಗಳನ್ನು ಪುನರಾರಂಭ ಮಾಡುವುದು ಅಗತ್ಯವಾಗಿದೆ. ಸರಕಾರ ಈ ಬಗ್ಗೆ ಇನ್ನೊಮ್ಮೆ ಪರಿಣಿತರ ಸಭೆ ಕರೆದು ಸಮಾಲೋಚನೆ ಮಾಡಿ ವಿದ್ಯಾರ್ಥಿಗಳ ಭವಿಷ್ಯ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನವನ್ನು ಕೈಗೊಳ್ಳುವುದು ಅಗತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X