Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣ ಮಾಡಿದ ಮಿಥುನ್ ರೈ !

ವಾರ್ತಾಭಾರತಿವಾರ್ತಾಭಾರತಿ25 Nov 2020 11:05 AM IST
share
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣ ಮಾಡಿದ ಮಿಥುನ್ ರೈ !

ಮಂಗಳೂರು, ನ. 25: ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕ್ರಾಂತಿ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಇಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿರುವಂತೆಯೇ, ಇದೀಗ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಿಥುನ್ ರೈ ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಜಾಹೀರಾತು ಬೋರ್ಡ್ ಹಾಕಿದ್ದಾರೆ.

ಅಂದ ಹಾಗೆ, ಈ ನಾಮಕರಣ ನಡೆದಿರುವುದು ಪ್ರತಿಭಟನಾತ್ಮಕವಾಗಿ ಜಾಹೀರಾತು ಬೋರ್ಡ್ ರೂಪದಲ್ಲಿ. ವಿಮಾನ ನಿಲ್ದಾಣಕ್ಕೆ ಹೋಗುವ ಕೆಂಜಾರು ಸಮೀಪ ಹಾಗೂ ವಿಮಾನ ನಿಲ್ದಾಣದ ‘ಸುಸ್ವಾಗತ, ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು’ ಎಂಬ ಬೃಹತ್ತಾದ ಜಾಹೀರಾತು ಬೋರ್ಡ್ ‌ಗಳನ್ನು ಮಿಥುನ್ ರೈ ಭಾವಚಿತ್ರದೊಂದಿಗೆ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ, ಶ್ರೀನಿವಾಸ ಮಲ್ಯ ಸೇರಿದಂತೆ ಹಲವಾರು ಗಣ್ಯರ ಹೆಸರುಗಳ ನ್ನಿಡಬೇಕೆಂಬ ಒತ್ತಾಯ, ಪ್ರತಿಭಟನೆಗಳು ಹಲವಾರು ವರ್ಷಗಳಿಂದ ನಡೆಯುತ್ತಿವೆ. ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ನಿರ್ವಹಣೆಗಾಗಿ ಅದಾನಿ ಕಂಪನಿಗೆ ಹಸ್ತಾಂತರಗೊಂಡ ಬಳಿಕ ವಿಮಾನ ನಿಲ್ದಾಣದ ಪ್ರವೇಶ ದ್ವಾರ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನಾಮಫಲಕಗಳಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿನ ಜತೆಯಲ್ಲಿ ಅದಾನಿ ಏರ್‌ಪೋರ್ಟ್ಸ್ ಎಂಬ ಹೆಸರನ್ನೂ ಸೇರ್ಪಡೆಗೊಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ವಲಯದಲ್ಲಿ ಸಾಕಷ್ಟು ವಿರೋಧ, ಆಕ್ಷೇಪಗಳು ವ್ಯಕ್ತವಾಗಿವೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಹಲವು ಪ್ರತಿಭಟನೆಗಳೂ ಇಲ್ಲಿ ನಡೆದಿವೆ. ಈ ನಡುವೆಯೇ ಇಲ್ಲಿ ಇದೀಗ ಮಿಥುನ್ ರೈ ಹೆಸರಿನಲ್ಲಿ ಪ್ರತಿಭಟನಾ ಭಾಗವಾಗಿ ಹಾಕಲಾಗಿರುವ ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ ಎಂಬ ಜಾಹೀರಾತು ಬೋರ್ಡ್ ಸಾಕಷ್ಟು ಕುತೂಹಲ ಕೆರಳಿಸಿದೆ.

‘‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವಂತೆ ನಾವು ಹೋರಾಟ ನಡೆಸುತ್ತಿದ್ದು, ಸಂಸದರಿಗೆ, ಸಚಿವರಿಗೆ ಎಚ್ಚರಿಕೆಯನ್ನು ನೀಡುವ ಹೋರಾಟದ ಭಾಗವಾಗಿ ಈ ಜಾಹೀರಾತು ಬೋರ್ಡ್ ‌ಗಳನ್ನು ಅಳವಡಿಸಲಾಗಿದೆ. ಆದಷ್ಟು ಶೀಘ್ರವಾಗಿ ಕೋಟಿ ಚೆನ್ನಯ ನಾಮಕರಣ ಮಾಡಬೇಕೆಂಬುದು ನಮ್ಮ ಬೇಡಿಕೆ. ಈ ಜಾಹೀರಾತು ಬೋರ್ಡ್ ‌ಗಳನ್ನು ನೋಡಿಯಾದರೂ ಆ ಕೆಲಸವಾಗಲಿ ಎಂಬುದು ನಮ್ಮ ಉದ್ದೇಶ. ನಾಮಕರಣವಾಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ.’’
-ವಿಥುನ್ ರೈ, ಅಧ್ಯಕ್ಷರು, ಜಿಲ್ಲಾ ಯುವ ಕಾಂಗ್ರೆಸ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X