Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಲಯಾಳಂ ಚಿತ್ರ 'ಜಲ್ಲಿಕಟ್ಟು' ಆಸ್ಕರ್ಸ್...

ಮಲಯಾಳಂ ಚಿತ್ರ 'ಜಲ್ಲಿಕಟ್ಟು' ಆಸ್ಕರ್ಸ್ 2021ಗೆ ಭಾರತದ ಅಧಿಕೃತ ಎಂಟ್ರಿ

ವಾರ್ತಾಭಾರತಿವಾರ್ತಾಭಾರತಿ25 Nov 2020 5:46 PM IST
share
ಮಲಯಾಳಂ ಚಿತ್ರ ಜಲ್ಲಿಕಟ್ಟು ಆಸ್ಕರ್ಸ್ 2021ಗೆ ಭಾರತದ ಅಧಿಕೃತ ಎಂಟ್ರಿ

ಹೊಸದಿಲ್ಲಿ,ನ.25: ಲಿಜೋ ಜೋಸ್ ಪೆಳ್ಳಿಶ್ಶೇರಿ ನಿರ್ದೇಶನದ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ವನ್ನು 93ನೇ ಆಸ್ಕರ್ ಪ್ರಶಸ್ತಿಗಳ ಅಂತಾರಾಷ್ಟ್ರೀಯ ಚಲನಚಿತ್ರ ವಿಭಾಗಕ್ಕೆ ಭಾರತದ ಅಧಿಕೃತ ಪ್ರವೇಶವನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಬುಧವಾರ ಪ್ರಕಟಿಸಿದೆ.

ಹಿಂದಿ, ಮರಾಠಿ, ಮಲಯಾಳಂ ಮತ್ತು ಇತರ ಭಾಷೆಗಳ 27 ಚಿತ್ರಗಳು ಪೈಪೋಟಿಯಲ್ಲಿದ್ದು, ಸರ್ವಾನುಮತದಿಂದ ಆಯ್ಕೆಯಾಗಿರುವ ‘ಜಲ್ಲಿಕಟ್ಟು’ ತಮ್ಮ ಗ್ರಾಮದಲ್ಲಿ ಹುಚ್ಚೆದ್ದು ತಿರುಗುತ್ತಿದ್ದ ಗೂಳಿಯೊಂದನ್ನು ನಿಲ್ಲಿಸಲು ಆ ಗ್ರಾಮದ ಬುಡಕಟ್ಟು ಜನರ ಪ್ರಯತ್ನದ ಕುರಿತ ಚಿತ್ರವಾಗಿದೆ.

ಮಾನವರು ಪ್ರಾಣಿಗಳಿಗಿಂತಲೂ ಕೆಟ್ಟವರು ಎನ್ನುವುದನ್ನು ಬಿಂಬಿಸುವ ಮೂಲಕ ನಿಜಕ್ಕೂ ಈ ಚಿತ್ರವು ಮನುಷ್ಯರಲ್ಲಿಯ ಹಸಿ ಸಮಸ್ಯೆಗಳನ್ನು ಬಯಲಿಗೆಳೆದಿದೆ ಎಂದು ಎಫ್‌ಎಫ್‌ಐ ಆಯ್ಕೆ ಸಮಿತಿಯ ಅಧ್ಯಕ್ಷರಾದ ನಿರ್ಮಾಪಕ ರಾಹುಲ್ ರವೇಲ್ ಅವರು ಆನ್‌ಲೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹರೀಶ್ ಅವರ ಸಣ್ಣಕಥೆಯನ್ನು ಆಧರಿಸಿ ನಿರ್ಮಾಣಗೊಂಡಿರುವ ‘ಜಲ್ಲಿಕಟ್ಟು’ ಚಿತ್ರದಲ್ಲಿ ಆ್ಯಂಟನಿ ವರ್ಗೀಸ್, ಚೆಂಬನ್ ವಿನೋದ್ ಜೋಸ್, ಸಾಬುಮನ್ ಅಬ್ದುಸಮದ್ ಮತ್ತು ಸಂಥಿ ಬಾಲಚಂದ್ರನ್ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಗಿರೀಶ ಗಂಗಾಧರನ್ ಸಿನಿಮಾಟೋಗ್ರಾಫಿ ಮತ್ತು ರಂಗನಾಥ್ ರವಿ ಅವರು ಧ್ವನಿಗ್ರಹಣವನ್ನು ನಿರ್ವಹಿಸಿದ್ದಾರೆ. ಪೆಳ್ಳಿಶ್ಶೇರಿ ‘ಅಂಗಮಾಲಿ ಡೈರಿಸ್’ ಮತ್ತು ‘ಇ ಮಾ ಯೌ’ನಂತಹ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾದ ಹಲವಾರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅವರು ಕಳೆದ ವರ್ಷ 50ನೇ ಭಾರತೀಯ ಅಂತಾರಾಷ್ಟ್ರಿಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದರು.

2019ರ ಸೆಪ್ಟಂಬರ್‌ನಲ್ಲಿ ಟೊರೊಂಟೊ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ಕಂಡಿದ್ದ ‘ಜಲ್ಲಿಕಟ್ಟು ’ವಿಮರ್ಶಕರ ವ್ಯಾಪಕ ಪ್ರಶಂಸೆಗೊಳಗಾಗಿತ್ತು.

ಛಪಾಕ್, ಛಲಾಂಗ್, ಶಕುಂತಲಾ ದೇವಿ, ಗುಲಾಬೊ ಸಿತಾಬೊ, ದಿ ಸ್ಕೈ ಈಸ್ ಪಿಂಕ್, ಬುಲ್‌ಬುಲ್ ಮತ್ತು ದಿ ಡಿಸಿಪಲ್ ಸೇರಿದಂತೆ ಒಟ್ಟು 27 ಚಿತ್ರಗಳು ಆಸ್ಕರ್ ಪ್ರವೇಶಕ್ಕೆ ಸ್ಪರ್ಧೆಯಲ್ಲಿದ್ದವು. ಕಳೆದ ವರ್ಷ ರೆಯಾ ಅಖ್ತರ್ ಅವರ, ರಣವೀರ ಸಿಂಗ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿದ್ದ ‘ಗಲ್ಲಿ ಬಾಯ್’ ಚಿತ್ರವು ಆಸ್ಕರ್‌ಗೆ ಭಾರತದ ಅಧಿಕೃತ ಪ್ರವೇಶವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X