Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಮುಖ್ಯಸ್ಥರಾಗಿ ಗ್ರೆಗ್ ಬಾರ್ಕ್ಲೇ...

ಐಸಿಸಿ ಮುಖ್ಯಸ್ಥರಾಗಿ ಗ್ರೆಗ್ ಬಾರ್ಕ್ಲೇ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ25 Nov 2020 11:52 PM IST
share
ಐಸಿಸಿ ಮುಖ್ಯಸ್ಥರಾಗಿ ಗ್ರೆಗ್ ಬಾರ್ಕ್ಲೇ ಆಯ್ಕೆ

ದುಬೈ, ನ.25: ನ್ಯೂಝಿಲ್ಯಾಂಡ್ ಕ್ರಿಕೆಟ್ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಐಸಿಸಿಯ ನೂತನ ಸ್ವತಂತ್ರ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮುಖ್ಯಸ್ಥ ಸ್ಥಾನಕ್ಕೆ ನಡೆದಿದ್ದ ಸ್ಪರ್ಧೆಯಲ್ಲಿ ಬಾರ್ಕ್ಲೇ ಅವರು ಪ್ರತಿಸ್ಪರ್ಧಿ ಸಿಂಗಾಪುರದ ಇಮ್ರಾನ್ ಖ್ವಾಜಾರನ್ನು ಸುಲಭವಾಗಿ ಸೋಲಿಸಿದರು. ಬಾಕ್ಲೇ ಅವರು ಭಾರತದ ಶಶಾಂಕ್ ಮನೋಹರ್ ಅವರಿಂದ ತೆರವಾದ ಸ್ಥಾನವನ್ನು ತುಂಬಿದ್ದಾರೆ.

ಮಂಗಳವಾರ ಐಸಿಸಿಯ ವಾರ್ಷಿಕ ತ್ರೈಮಾಸಿಕ ಸಭೆಯಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಯಿತು. ಇಲೆಕ್ಟ್ರಾನಿಕ್ ಮತದಾನ ಪ್ರಕ್ರಿಯೆಯಲ್ಲಿ 16 ನಿರ್ದೇಶಕರ ಮಂಡಳಿ ಭಾಗವಹಿಸಿತ್ತು. ಇದರಲ್ಲಿ 12 ಪೂರ್ಣ ಸದಸ್ಯರು (ಟೆಸ್ಟ್ ಆಡುವ ರಾಷ್ಟ್ರಗಳು) ಮೂವರು ಅಸೋಸಿಯೇಟ್ ರಾಷ್ಟ್ರಗಳ ನಿರ್ದೇಶಕರು ಹಾಗೂ ಒಬ್ಬರು ಸ್ವತಂತ್ರ ಮಹಿಳಾ ನಿರ್ದೇಶಕಿ(ಪೆಪ್ಸಿಕೋದ ಇಂದ್ರಾ ನೂಯಿ) ಇದ್ದರು.

‘‘ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಒಂದು ಗೌರವ. ನನ್ನ ಸಹವರ್ತಿ ಐಸಿಸಿ ನಿರ್ದೇಶಕರ ಬೆಂಬಲಕ್ಕಾಗಿ ನಾನು ಧನ್ಯವಾದಗಳನ್ನು ಸಮರ್ಪಿಸುತ್ತೇನೆ. ಕ್ರೀಡೆಯನ್ನು ಮುನ್ನಡೆಸಲು, ಜಾಗತಿಕ ಸಾಂಕ್ರಾಮಿಕ ರೋಗದಿಂದ ಹೊರಬಂದು ಬಲಿಷ್ಠ ಸ್ಥಾನವನ್ನು ತಲುಪುವ ವಿಶ್ವಾಸವಿದೆ. ನಮ್ಮ ಪ್ರಮುಖ ಮಾರುಕಟ್ಟೆಗಳಲ್ಲಿ ಕ್ರಿಕೆಟನ್ನು ಬಲಪಡಿಸಲು ನಮ್ಮ ಸದಸ್ಯರ ಸಹಭಾಗಿತ್ವದಲ್ಲಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ’’ ಎಂದು ಬಾರ್ಕ್ಲೇ ಹೇಳಿದರು. ನ್ಯೂಝಿಲ್ಯಾಂಡ್‌ನ ಬಾರ್ಕ್ಲೇ 11-5 ಮತಗಳ ಅಂತರದಿಂದ ಜಯ ಸಾಧಿಸಿದರು. ಎರಡನೇ ಸುತ್ತಿನ ಮತದಾನದಲ್ಲಿ ಕ್ರಿಕೆಟ್ ದಕ್ಷಿಣ ಆಫ್ರಿಕಾದಿಂದ ಎಲ್ಲ ಪ್ರಮುಖ ಗೆಲುವಿನ ಮತಗಳನ್ನು ಪಡೆದರು.

ಕಳೆದ ವಾರ ನಡೆದ ಮೊದಲ ಸುತ್ತಿನ ಮತದಾನದಲ್ಲಿ ಬಾರ್ಕ್ಲೇ 10 ಮತಗಳನ್ನು ಪಡೆದಿದ್ದರೆ, ಖ್ವಾಜಾ ಆರು ಮತಗಳನ್ನು ಪಡೆದಿದ್ದರು. ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಗೆಲ್ಲಲು 11ಮತಗಳ ಅಗತ್ಯವಿದೆ. ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯದ ಜೊತೆಗೆ ನ್ಯೂಝಿಲ್ಯಾಂಡ್ ಕ್ರಿಕೆಟ್ ಮಂಡಳಿಗಳು ಬಾರ್ಕ್ಲೇಗೆ ಮತ ಚಲಾಯಿಸಿದವು. ಮತ್ತೊಂದೆಡೆ ಖ್ವಾಜಾಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬೆಂಬಲ ನೀಡಿತ್ತು. ಸಿಂಗಾಪುರದ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಖ್ವಾಜಾ ಅವರು ಐಸಿಸಿ ಸ್ಪರ್ಧೆಗಳನ್ನು ಹೆಚ್ಚಿಸ ಬೇಕು. ಇದು ಅಸೋಸಿಯೇಟ್ ದೇಶಗಳ ಆದಾಯವನ್ನು ಹೆಚ್ಚಿಸುತ್ತದೆ ಎಂದು ವಾದ ಮಂಡಿಸಿದ್ದರು.

ಆಕ್ಲೆಂಡ್ ಮೂಲದ ವಾಣಿಜ್ಯ ವಕೀಲರಾಗಿರುವ ಬಾರ್ಕ್ಲೇ 2012ರಿಂದ ನ್ಯೂಝಿಲ್ಯಾಂಡ್ ಕ್ರಿಕೆಟ್ ಮಂಡಳಿಯಲ್ಲಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ.ಪ್ರಸ್ತುತ ಐಸಿಸಿಯಲ್ಲಿ ನ್ಯೂಝಿಲ್ಯಾಂಡ್ ಕ್ರಿಕೆಟ್ ಮಂಡಳಿಯನ್ನು ಪ್ರತಿನಿಧಿಸುತ್ತಿದ್ದಾರೆ. ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2015ರ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಬಾರ್ಕ್ಲೇ ನಾರ್ಥರ್ನ್ ಡಿಸ್ಟ್ರಿಕ್ಸ್ ಅಸೋಸಿಯೇಶನ್‌ನ ಮಾಜಿ ಮಂಡಳಿ ಸದಸ್ಯರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X